ಮಾನವೀಯ ಮೌಲ್ಯ ಬೆಳೆಸುವ ಸಂಜೀವಿನಿ ವನವೇ ರಂಗಭೂಮಿ: ದೇವನೂರು ಬಸವರಾಜು

Date:

ಮೈಸೂರು ನಗರದ ಕಲಾಮಂದಿರದ, ಕಿರುರಂಗಮಂದಿರದಲ್ಲಿ ಐದು ದಿನಗಳ ಕಾಲ ನಡೆದ ‘ನಿರಂತರ ರಂಗ ಉತ್ಸವ’ ಸಮಾರೋಪದಲ್ಲಿ ಮಾತನಾಡಿದ ಚಿಂತಕ ಹಾಗೂ ಲೇಖಕ ದೇವನೂರು ಬಸವರಾಜು, “ರಂಗಭೂಮಿಯ ಪ್ರಸ್ತುತತೆಯನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಸದಭಿರುಚಿ, ಸಾಮರಸ್ಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಸಂಜೀವಿನಿ ವನವೇ ರಂಗಭೂಮಿ” ಎಂದು ಅಭಿಪ್ರಾಯಪಟ್ಟರು.

“ರಂಗಭೂಮಿಯ ಮೂಲಕ ಬದುಕನ್ನು ಹಸನುಗೊಳಿಸುವ, ಸಮಾಜದಲ್ಲಿ ಪ್ರೀತಿ ಮತ್ತು ಸಾಮರಸ್ಯವನ್ನು ಹುಟ್ಟಿಸುವ ಕೆಲಸ ನಡೆಯಬೇಕು. ಪ್ರಸಕ್ತ ಕಾಲಘಟ್ಟ ವಿಷಮಯವಾಗಿದ್ದು, ನಾವು ಬದುಕುತ್ತಿರುವ ಪರಿಸ್ಥಿತಿ ಹಾಗು ನಮ್ಮ ಸುತ್ತಲೂ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಆತಂಕ ಹುಟ್ಟುತ್ತದೆ. ಇಂತಹ ಸಂದರ್ಭದಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಮರುನಿರ್ಮಿಸಬೇಕಾದ ಅಗತ್ಯವಿದೆ. ಅದಕ್ಕೆ, ರಂಗಭೂಮಿ ಅತ್ಯುತ್ತಮ ಮಾರ್ಗವಾಗಿದ್ದು, ಮಾನವೀಯತೆ ಎಲ್ಲೆಡೆ ನೆಲಸಬೇಕಿದೆ. ಅದು ಇಲ್ಲದಿದ್ದರೆ ಬದುಕಲಾರದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ನಾಳೆಯ ನೆಮ್ಮದಿಯೂ ಕಾಣದಂತಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಜಾತಿ, ಧರ್ಮ, ಅಸಹನೆ ಹೆಚ್ಚಾಗುತ್ತಿದ್ದು, ಹೊಟ್ಟೆ ಕಿಚ್ಚಿನಲ್ಲೇ ಕಾಲ ಕಳೆದು ಹೋಗುತ್ತಿರುವ ಸ್ಥಿತಿಯ ಬಗ್ಗೆ ಆತಂಕವಿದೆ. ಬದುಕು ಕಲೆಗೂ ಹೌದು, ವಿಜ್ಞಾನಕ್ಕೂ ಹೌದು; ಹಾಗೆಯೇ, ರಂಗಭೂಮಿಯೂ ಕೂಡ. ‘ರಂಗಭೂಮಿ’ ಎಂಬ ರೂಪದಲ್ಲಿ ಅಲ್ಲದಿದ್ದರು, ಮನುಷ್ಯನ ನಾಗರಿಕತೆಯ ಆರಂಭದ ಕೇಂದ್ರ ಬಿಂದು ಎನ್ನಬಹುದು. ಚಿತ್ರಕಲೆ, ಕುಣಿತ, ಹಾಡು, ಮಾನವ ಪೂರ್ವದ ಕಲಾರೂಪಗಳು. ನಂತರ ಅವು ಕಲಾ ಪ್ರಕಾರಗಳಾಗಿ ಉಳಿದುಕೊಂಡವು. ಇವೆಲ್ಲದರ ಕ್ರೋಢಿಕೃತ ರೂಪವೇ ರಂಗಭೂಮಿಯಾಗಿದ್ದು, ಅದು ಕಲೆಗಿಂತಲೂ ಮೀರಿದ ಸಾಮಾಜಿಕ ಕಾರ್ಯವನ್ನು ವಿಸ್ತರಿಸಿಕೊಂಡಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ರಂಗ ನಿರ್ದೇಶಕ ಚಿದಂಬರರಾವ್ ಜಂಬೆರ್ ಮಾತನಾಡಿ, ನಿರಂತರ ತಂಡವನ್ನು ಹಲವು ವರ್ಷಗಳಿಂದ ಗಮನಿಸುತ್ತಾ ಬಂದಿದ್ದೇನೆ. ಇವರು ನಡೆಸುತ್ತಿರುವ ಸಹಜರಂಗ ತರಬೇತಿ ಶಿಬಿರಗಳು, ಕಾವ್ಯ ಓದು, ಸಾಹಿತ್ಯ ಹಾಗೂ ನಾಟಕಗಳ ಅಧ್ಯಯನದ ಮೂಲಕ ವಿದ್ಯಾರ್ಥಿಗಳನ್ನು ಸರಿಯಾದ ದಿಕ್ಕಿನತ್ತ ಕರೆದೊಯ್ಯುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

ನಿರಂತರ ಫೌಂಡೇಷನ್ ಅಧ್ಯಕ್ಷ ಎಂ.ಎಂ. ಸುಗುಣ ಮಾತನಾಡಿ, “ಜಿಡಿಪಿ ಅಥವಾ ಷೇರು ಸೂಚ್ಯಂಕದ ಬೆಳವಣಿಗೆಯೇ ದೇಶದ ಪ್ರಗತಿ ಎಂಬ ಭ್ರಮಾ ಲೋಕವನ್ನು ಸೃಷ್ಟಿಸಲಾಗುತ್ತಿದೆ. ಆದರೆ, ಅದು ನಿಜವಲ್ಲ. ಸಾಂಸ್ಕೃತಿಕ ಅಭಿವ್ಯಕ್ತಿಯೇ ದೇಶದ ಸಮೃದ್ಧಿಯ ನಿಜವಾದ ಸಂಕೇತ. ಆತ್ಮಸ್ಥೈರ್ಯ ಮತ್ತು ಆತ್ಮಾಭಿಮಾನವನ್ನು ಮುಕ್ತವಾಗಿ ವ್ಯಕ್ತಪಡಿಸಿಕೊಳ್ಳುವ ಸಮಾಜ ನಿರ್ಮಾಣವಾಗಬೇಕು. ರಂಗಭೂಮಿ ಜೀವಂತ ಕಲೆ; ಅದು ಸಮಾಜದ ಆಗುಹೋಗುಗಳಿಗೆ ನೇರವಾಗಿ ಮುಖಾಮುಖಿಯಾಗುತ್ತದೆ. ವರ್ತಮಾನದಲ್ಲಿ ಭವಿಷ್ಯವನ್ನು ಚಿಂತಿಸುವುದು, ಇತಿಹಾಸದಲ್ಲಿನ ನಕಾರಾತ್ಮಕತೆಯನ್ನು ತಿದ್ದಿ ಕ್ರಿಯಾತ್ಮಕತೆಗೆ ರೂಪಿಸುವುದೇ ರಂಗಭೂಮಿಯ ಕರ್ತವ್ಯ” ಎಂದು ಅಭಿಪ್ರಾಯಪಟ್ಟರು.

ಈ ವಿಶೇಷ ವಿಡಿಯೋ ವೀಕ್ಷಿಸಿ:https://www.youtube.com/watch?v=rBBDK8Y88O0

ಸಮಾರೋಪ ಸಮಾರಂಭದಲ್ಲಿ ರೈತ ಸಂಘದ ಹೊಸಕೋಟೆ ಬಸವರಾಜು, ಪ್ರೊ. ಕಾಳಚನ್ನೆಗೌಡ, ಮೀನಾ ಮಸೂರು, ಪ್ರೊ. ಚ. ಸರ್ವಮಂಗಳ, ಶ್ರೀನಿವಾಸ್ ಪಾಲಳ್ಳಿ, ಪ್ರಸಾದ್ ಕುಂದೂರು, ಹರಿಪ್ರಸಾದ್, ಡಾ. ನರೆಂದ್ರಕುಮಾರ್, ದೇವಾನಂದ್ ವರಪ್ರಸಾದ್ ಸೇರಿದಂತೆ ಪ್ರೇಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...