ಉಡುಪಿ | ಸನ್ಮಾರ್ಗ, ಅನುಪಮ ಪತ್ರಿಕೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೈ ಸಿ ಅಬ್ದುಲ್ಲಾ ನಿಧನ

Date:

ಸನ್ಮಾರ್ಗ ಹಾಗೂ ಅನುಪಮ ಪತ್ರಿಕೆಗಾಗಿ ಉಡುಪಿ, ಮಂಗಳೂರು ಭಾಗದಲ್ಲಿ ಚಂದಾದಾರಿಕೆ ಮಾಡಿಸುತ್ತಿದ್ದ ಜಮಾಅತೆ ಇಸ್ಲಾಮೀ ಹಿಂದ್ ಕಾಪು ಘಟಕದ ಹಿರಿಯ ಸದಸ್ಯ ವೈಸಿ ಅಬ್ದುಲ್ಲಾ ಅಲ್ಪಕಾಲದ ಅನಾರೋಗ್ಯದ ನಂತರ ಕಾಪು ಉಚ್ಚಿಲದ ತಮ್ಮ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಸನ್ಮಾರ್ಗ ವಾರ ಪತ್ರಿಕೆ ಹಾಗೂ ಅನುಪಮ ಮಹಿಳಾ ಮಾಸಿಕಕ್ಕಾಗಿ ಉಡುಪಿ ಭಾಗದಲ್ಲಿ ಚಂದಾದಾರಿಕೆ ಮಾಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಜಮಾಅತೆ ಇಸ್ಲಾಮೀ ಹಿಂದ್ ಕಾಪು ಘಟಕದ ಹಿರಿಯ ಸದಸ್ಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದರು. ಇವರು 1990ರಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಾ, 2001ರಲ್ಲಿ ಸದಸ್ಯರಾಗಿ ನಿಯುಕ್ತಿಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರು ಸುಮಾರು ಮೂರು ದಶಕಗಳಷ್ಟು ಕಾಲ ಸನ್ಮಾರ್ಗ ವಾರಪತ್ರಿಕೆ ಮತ್ತು ಅನುಪಮಾ ಮಾಸಿಕದ ಪ್ರತಿನಿಧಿಯಾಗಿ ಮೈಸೂರು ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಸಾವಿರಾರು ಚಂದಾದಾರನ್ನಾಗಿಸಿದ್ದರು.

ಇವರಿಗೆ 74 ವರ್ಷ ವಯಸ್ಸಾಗಿದ್ದು, 5 ಗಂಡು, 2 ಹೆಣ್ಣು ಮಕ್ಕಳು ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಉಚ್ಚಿಲದಲ್ಲಿ ಮಧ್ಯಾಹ್ನ 3ರ ವೇಳೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ : ಬೆಳಗಾವಿ ಜಿಲ್ಲೆಯೊಂದರಲ್ಲೇ ₹1.89 ಕೋಟಿ ದಂಡ ವಸೂಲಿ!

ಸಂತಾಪ

ವೈ ಸಿ ಅಬ್ದುಲ್ಲಾ ಅವರ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ, ಕಾಪು ಸಂಚಾಲಕ ಅನ್ವರ್ ಅಲಿ ಕಾಪು, ಸನ್ಮಾರ್ಗ ಪತ್ರಿಕೆಯ ಪ್ರಕಾಶಕರಾದ ಅಮೀನ್ ಅಹ್ಸನ್, ಅನುಪಮ ಸಂಪಾದಕಿ ಶಹನಾಝ್ ಎಂ, ವ್ಯವಸ್ಥಾಪಕರಾದ ಮುಹಮ್ಮದ್ ಮುಹ್ಸಿನ್, ಸನ್ಮಾರ್ಗ ಪತ್ರಿಕೆಯ ಸಂಪಾದಕ ಏ ಕೆ ಕುಕ್ಕಿಲ ಗಾಢ ಸಂತಾಪ ಸೂಚಿಸಿದ್ದಾರೆ.

“ತನ್ನ ಬದುಕಿನ ಬಹು ಮುಖ್ಯಭಾಗವನ್ನು ಸನ್ಮಾರ್ಗ ಮತ್ತು ಅನುಪಮ ಮಾಸಿಕಕ್ಕಾಗಿ ವ್ಯಯಿಸಿದ ವೈ ಸಿ ಅಬ್ದುಲ್ಲರಿಗೆ ಈ ಎರಡೂ ಪತ್ರಿಕೆಗಳು ಆಭಾರಿಯಾಗಿವೆ. ಅವರ ನಿಸ್ವಾರ್ಥ ಸೇವೆ ಮತ್ತು ಪ್ರೀತಿ, ಅಭಿಮಾನವನ್ನು ಸದಾ ಸ್ಮರಿಸುತ್ತವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...