ಇದು ಬಡವರು, ಸಂವಿಧಾನದ ಉಳಿವಿಗಾಗಿನ ಹೋರಾಟದ ಚುನಾವಣೆ: ಸಂತೋಷ್ ಲಾಡ್

Date:

ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ನಾವು ಬಿಜೆಪಿ ಹಿಂದು ಅಲ್ಲ, ನಾವು ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರ ಹಿಂದುಗಳು. ಅವರಿಗೆ ಮುಸ್ಲಿಂ ವಿರೋಧಿ ಭಾಷಣಕ್ಕಾಗಿ ಶಿವಾಜಿ ಬೇಕು. ಮರಾಠರು ನಿಜವಾದ ಶೂರರು. ಬಿಜೆಪಿಗರ ಕೈಗೊಂಬೆಗಳಲ್ಲ. ಬರೀ ಮತ ಬ್ಯಾಂಕ್ ಆಗಿ ನಮ್ಮನ್ನು ಬಳಸಿಕೊಳ್ಳಲಾಗಿದೆ. ನಮಗೆ ಯಾವ ಪ್ರಾತಿನಿಧ್ಯವನ್ನು ಅವರು ನೀಡಲಿಲ್ಲ. ಕಳೆದ ವಿಧಾನಸಭೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೂವತ್ತಾರು ಜನ ಮರಾಠಿಗರಿಗೆ ಟಿಕೆಟ್ ನೀಡಿದೆ. ಇವರು ನಮಗೆ ಏನು ಮಾಡಿದ್ದಾರೆ” ಎಂದು ಪ್ರಶ್ನಿಸಿದರು.

“ಶಿವಾಜಿ ಮಹಾರಾಜರು ವಿಶ್ವ ನಾಯಕ. ಅದನ್ನು ಬಿಟ್ಟು ಬಿಜೆಪಿಯವರು ಬರೀ ಅವರನ್ನು ಮುಸ್ಲಿಂ ವಿರೋಧಿ ಎಂದು ಸಂಕುಚಿತವಾಗಿ ಬಿಂಬಿಸಿದ್ದಾರೆ. ಶಿವಾಜಿಯವರು ಮುಸ್ಲಿಂ ರಾಜರ ವಿರುದ್ಧ ಹೋರಾಡಿದರೇ ಹೊರತು ಮುಸ್ಲಿಂರ ವಿರೋಧಿಯಲ್ಲ. ಶಿವಾಜಿಯವರ ಸೈನ್ಯದಲ್ಲಿ ಸಾವಿರಾರು ಮುಸ್ಲಿಂ ಸೈನಿಕರಿದ್ದರು. ಇದೆಲ್ಲ ಮರೆಮಾಡಿ ಬೇರೆಯದೇ ಚಿತ್ರವನ್ನು ಆರ್‌ಎಸ್‌ಎಸ್‌ನವರು ದೇಶದ ಜನರಲ್ಲಿ ಬಿತ್ತಿದ್ದಾರೆ. ನಾವೆಲ್ಲ ಈಗ ಜಾಗೃತರಾಗಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರಾಠಾ ಸಮುದಾಯದ ಏಳ್ಗೆಗಾಗಿ ತಾವು ಶ್ರಮವಹಿಸುವುದಾಗಿ ಹೇಳಿದ ಲಾಡ್, ನೀವು ಯೋಚನೆ ಮಾಡಿ ಮತ ನೀಡಿ. ಮರಾಠರನ್ನು ಬಿಜೆಪಿಯವರು ಗುತ್ತಿಗೆ ಪಡೆದಂತೆ ಆಡುತ್ತಾರೆ. ಮೋದಿಯವರ ವೈಫಲ್ಯಗಳನ್ನು ನಾವು ಲೆಕ್ಕ ಹಾಕಿ ಮತ ನೀಡಬೇಕು” ಎಂದರು.

“ಇಂದಿರಾಗಾಂಧಿಯಿಂದ ಇಲ್ಲಿಯತನಕ ಕಾಂಗ್ರೆಸ್ ಪಕ್ಷ ಜನತೆಯ ಪರವಿದೆ. ಎಲ್ಲ ಯೋಜನೆಗಳಿಂದ ರಾಜ್ಯದಲ್ಲಿ ಒಂದು ಕುಟುಂಬಕ್ಕೆ ಎಂಟು ಸಾವಿರ ರೂ.ನಷ್ಟು ಹಣ ಬರುತ್ತಿದೆ. ರೈತರ ಸಲುವಾಗಿ ನಾವು ಯಾವತ್ತೂ ಮಿಡಿದಿದ್ದೇವೆ. ಕಪ್ಪುಹಣವಿದೆ ಎಂದು ನೋಟ್ ಬ್ಯಾನ್ ಮಾಡಿ ಉಳ್ಳವರಿಗೆ ಅನುಕೂಲ ಮಾಡಿದರು. ಹಣ ಸಿಗದೇ ಬಡವರು ಸತ್ತರು” ಎಂದರು.

“ಮರಾಠ ಮಹಾರಾಜರು ಅದರಲ್ಲೂ ಶಾಹು ಮಹಾರಾಜರಿಂದ ಕ್ರಾಂತಿಯೇ ಆಗಿದೆ. ಡಾ.ಅಂಬೇಡ್ಕರ್ ಅವರನ್ನು ವಿದೇಶಕ್ಕೆ ಕಳಿಸಿದರು ಅವರು. ಇದು ಮರಾಠರ ಹೆಗ್ಗಳಿಕೆ. ದಶಕಗಳಿಂದ ನಮ್ಮನ್ನು ಬಳಸಿಕೊಂಡು ಬರೀ ‘ಶಿವಾಜಿ ಮಹಾರಾಜ್ ಕೀ ಜೈ..’ ಅನ್ನಿಸಿಕೊಂಡು ನಮ್ಮ ಓಟು ಪಡೆದರು. ಹಿಂದೂ ಹಿಂದೂ ಎಂದು ನಾವು ಜೈಲಿಗೆ ಬೀಳುತ್ತೇವೆ. ಬಿಜೆಪಿ ನಾಯಕರ ಮಕ್ಕಳು ವಿದೇಶದಲ್ಲಿ ಓದುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, “ಇದು ನಿರ್ಣಾಯಕ ಚುನಾವಣೆ. ಈ ಸಲ ಬದಲಾವಣೆ ಆಗಬೇಕು. ಸತತ ಮೂರು ಬಾರಿ ಆರಿಸಿ ಬಂದು ಯಾವೊಂದು ಮುತುವರ್ಜಿ ವಹಿಸದ ಜಿಗಜಿಣಗಿಯವರನ್ನು ನೀವೆಲ್ಲ ತಿರಸ್ಕರಿಸಿ” ಎಂದು ಕೋರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...