ಮೈಸೂರು | ಜಿಲ್ಲೆಗಳಲ್ಲಿ ಸ್ಯಾಟಲೈಟ್ ಹೃದ್ರೋಗ ಕೇಂದ್ರ : ಡಾ. ಡಿ. ಬಿ. ದಿನೇಶ್

Date:

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಮಾತನಾಡಿದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ. ದಿನೇಶ್‌ ‘ಭವಿಷ್ಯದಲ್ಲಿ ಹೆಚ್ಚಾಗುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಹೃದ್ರೋಗ ಚಿಕಿತ್ಸೆ ದೊರಕಿಸಿಕೊಡಲು ಎಲ್ಲಾ ಜಿಲ್ಲೆಗಳಲ್ಲಿಯೂ ಸ್ಯಾಟಲೈಟ್‌ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದು ಹೇಳಿದರು.

“2040 ರ ವೇಳೆಗೆ ಜನಸಂಖ್ಯೆ ಶೇ.15% ರಷ್ಟು ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ ಸಂಸ್ಥೆಯು ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸಿಕೊಂಡು ಸೇವೆಯನ್ನು ವಿಸ್ತರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಪ್ರತೀ ಜಿಲ್ಲೆಗೊಂದು ಸ್ಯಾಟಲೈಟ್‌ ಸೆಂಟರ್‌ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ಕುರಿತು ಸರಕಾರದಿಂದ ಅನುಮೋದನೆ ಪಡೆದು ಸದ್ಯದಲ್ಲಿ ಕಾರ್ಯರೂಪಕ್ಕೆ ತರಲಾಗುವುದು” ಎಂದು ತಿಳಿಸಿದರು.

“ರಾಜ್ಯಾದ್ಯಂತ ‘ಡಾ. ಪುನೀತ್‌ ರಾಜ್‌ಕುಮಾರ್‌ ಸ್ಟೆಮಿ’ ಯೋಜನೆ ಜಾರಿಯಲ್ಲಿದೆ. ಇದರಿಂದ ತಾಲೂಕು ಹಂತದಲ್ಲಿಯೇ ಹೃದ್ರೋಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಸ್ಟೆಪ್ಟೊಕೈನಸ್‌ ಮತ್ತು ಟೆನೆಕ್ಟಿವ್‌ ಪ್ಲಸ್‌ ಎಂಬ ಎರಡು ಚುಚ್ಚುಮದ್ದು ನೀಡುವ ಪ್ರಾಥಮಿಕ ಚಿಕಿತ್ಸೆ ದೊರೆಯುವಂತೆ ಮಾಡಲಾಗಿದೆ. ಇದರಿಂದ ತಾಲೂಕು ಮಟ್ಟದಲ್ಲಿಯೇ ಗೋಲ್ಡನ್‌ ಅವರ್‌ನಲ್ಲಿ ಚಿಕಿತ್ಸೆ ದೊರೆಯುತ್ತಿದೆ. ಇದರಿಂದ ಸಾವಿರಾರು ಹೃದ್ರೋಗಿಗಳ ಜೀವ ಉಳಿದಿದೆ. ಹಾಗಾಗಿ, ಈ ಯೋಜನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=K2_ysCR87bw&t=639s

ಮೈಸೂರು ಜಯದೇವಕ್ಕೆ ಐದು ಜಿಲ್ಲೆಗಳಿಂದ ಜನರು ಹೆಚ್ಚಾಗಿ ಬರುತ್ತಿದ್ದಾರೆ. ಅಲ್ಲದೇ, ನೆರೆಯ ಕೇರಳ, ಕೊಯಮತ್ತೂರಿನಿಂದಲೂ ಜನ ಬರುತ್ತಿದ್ದಾರೆ. ಆದರೆ, ಇಲ್ಲಿ ಶೇ.20% ರಷ್ಟು ವೈದ್ಯರ, ಶೇ.18% ದಾದಿಯರು, ಶೇ.15% ರಷ್ಟು ಗ್ರೂಪ್‌ ಡಿ ಕೊರತೆ ಇದ್ದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಆಗ ಒಪಿಡಿ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬ ತಪ್ಪಲಿದೆ ಎಂದು ತಿಳಿಸಿದರು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=FwDgvTROXb4

ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಅವರು ಕುಶಲೋಪರಿ ವಿಚಾರಿಸಿದ್ದಲ್ಲದೇ ಸಂಸ್ಥೆ ವ್ಯಾಪ್ತಿಯ ಗುಲ್ಪರ್ಗ, ಬೆಂಗಳೂರು, ಮೈಸೂರು ಆಸ್ಪತ್ರೆಗಳಲ್ಲಿ ಗುಣಾತ್ಮಕ ಚಿಕಿತ್ಸೆ ದೊರೆಯುವಂತೆ ಆಡಳಿತ ನಡೆಸಬೇಕು. ಅಲ್ಲದೇ, ಸೇವಾ ಅವಧಿಯಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...