ಬುದ್ಧ-ಬಸವ-ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣ ವಚನವೆಂಬ ಅದ್ಬುತ

Date:

ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಅವರ ಚಿಂತನೆಗಳು ತುಳಿತಕ್ಕೊಳಗಾದವರ, ದೌರ್ಜನ್ಯಕ್ಕೆ ಒಳ್ಳಗಾದವರೆಲ್ಲರ ಜೀವನಕ್ಕೆ ಸ್ಪೂರ್ತಿಯಾಗಬಲ್ಲ, ಮಾನವ ಕುಲವನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೈ ಹಿಡಿದು ಸಾಗಿಸಬಲ್ಲ ಅಭೂತಪೂರ್ವ ಸಿದ್ಧಾಂತಗಳೆ ಆಗಿವೆ. ಇಂತಹ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳುವುದಲ್ಲದೆ ತಮ್ಮ ರಾಜಕಾರಣದ ಜೀವನದಲ್ಲಿ ಗಟ್ಟಿಯಾಗಿ ಉಳಿಸಿಕೊಂಡು ಬೆಳೆಸುತ್ತಿರುವ ಅಪರೂಪದ ರಾಜಕಾರಣಿ ಸಚಿವರಾಗಿ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವಿಕರಿಸಿದ ಸತೀಶ ಜಾರಕಿಹೋಳಿ.

ಅಕ್ಷರಶಃ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಸಿದ್ಧಾಂತಕ್ಕೆ ಬದ್ಧರಾಗಿರುವ ಇವರು ಬಸವಣ್ಣ ಅವರ ವಚನದಂತೆ ಮೂಢನಂಬಿಕೆಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುತ್ತಿರುವರು. ರಾಹುಕಾಲ, ಯಮಗಂಡ ಕಾಲ, ಒಳ್ಳೆಯ ಸಮಯ ಮತ್ತು ದಿನ ಯಾವುದೆಂದು ಜ್ಯೋತಿಷಿಗಳ ಹಿಂದೆ ಬಿದ್ದು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ರಾಜಕಾರಣಿಗಳ ನಡುವೆ ಸತೀಶ ಜಾರಕಿಹೊಳಿಯವರು. “ದಿನ ಶ್ರೇಷ್ಠವೆಂದು ಮಾಡುವ ಪಂಚ ಮಹಾಪಾತಕರ ಮುಖವ ನೋಡಲಾಗದು” ಎಂದು ಶರಣರು ಹೇಳಿದಂತೆ ಒಳ್ಳೆಯ ಮತ್ತು ಕೆಟ್ಟ ಸಮಯವೆಂಬ ಮೌಢ್ಯಕ್ಕೆ ಜೋತು ಬೀಳದೆಯೇ, ಸೂರ್ಯ ಗ್ರಹಣದ ಸಮಯದಲ್ಲಿಯೇ ನಾಮಪತ್ರ ಸಲ್ಲಿಸಿ ತಮ್ಮ ಸಿದ್ಧಾಂತಕ್ಕೆ ಬದ್ಧರಾಗಿ ಉಳಿದವರು.

ಚುನಾವಣೆಯಲ್ಲಿ ಬಹುಮತಗಳಿಂದ ಜಯಗಳಿಸುವ ಮೂಲಕ ಒಳ್ಳೆಯ ಮತ್ತು ಕೆಟ್ಟ ಸಮಯ ಎಂಬುವದಿಲ್ಲ ಎಂಬುದನ್ನು ಸಾಬಿತು ಪಡಿಸುವಲ್ಲಿ ಯಶಸ್ವಿಯಾದ ರಾಜಕಾರಣಿ. ಅಷ್ಟೆ ಅಲ್ಲದೆ ಪ್ರತಿ ವರ್ಷ ಇವರು ನಾಗರ ಪಂಚಮಿಯಂದು, “ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು ದಿಟದ ನಾಗರ ಕಂಡೊಡೆ ಕೊಲ್ಲೆಂಬರಯ್ಯಾ” ಎಂದು ಡಾಂಭಿಕ ಭಕ್ತಿಯನ್ನು ವಿರೋಧಿಸದ ಬಸವಣ್ಣವರ ಹಾಗೆ ನಾಗರ ಪಂಚಮಿಯಂದು ಮಣ್ಣಿನ ನಾಗರಕ್ಕೆ ಹಾಲೆರದು ಹಾಲು ವ್ಯರ್ಥಮಾಡದಿರಿ, ಆ ಹಾಲನ್ನು ಬಡವರಿಗೆ ನೀಡಿ ಬಸವ ಪಂಚಮಿ ಆಚರಿಸುವ ಕಾರ್ಯವನ್ನು ಮಾನವ ಬಂಧುತ್ವ ವೇಧಿಕೆಯ ಮೂಲಕ ರಾಜ್ಯಾದಾದ್ಯಂತ ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವರ್ಷ ಸ್ಮಶಾನದಲ್ಲಿ ಕಾರ್ಯಕ್ರಮಗಳನ್ನು ಮಾಡಿ ಮೂಢ ನಂಬಿಕೆಗಳ ವಿರುದ್ಧ ಜಾಗೃತಿಗೊಳಿಸುವದಲ್ಲದೆ ಗ್ರಹಣದ ಸಮಯಗಳಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿ ಯಶಸ್ವಿಯಾಗಿರುವ ಸಚಿವ ಸತೀಶ್ ಜಾರಕಿಹೊಳಿ. ಇಂತಹ ಅನೇಕ ವಿಷಯಗಳಿಂದ ಮನುವಾದಿಗಳ ಕೆಂಗಣ್ಣಿಗೆ ಗುರಿಯಾಗಿ ಟಿಕೆಗಳಿಗೊಳ್ಳಗಾದರೂ ಎಂದು ಕೂಡ ತಮ್ಮ ಸಿದ್ಧಾಂತವನ್ನು ಬಿಟ್ಟುಕೊಡದೆ ಬುದ್ಧ, ಬಸವ, ಅಂಬೇಡ್ಕರರ ಸಿದ್ಧಾಂತಗಳೊಂದಿಗೆ ಗಟ್ಟಿಯಾಗಿ ನಿಂತಿರುವವರು.

ರಾಜಕಾರಣದಲ್ಲೂ ಈ ಸಿದ್ಧಾಂತಗಳೊಂದಿಗೆ ಹೋರಾಡುತ್ತಿರುವ ಇವರು ಈ ಹಿಂದಿನ 2013ರ ಅವದಿಯ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಜಾರಕಿಹೊಳಿ ಅವರಿಗೆ ಅಬಕಾರಿ ಖಾತೆಯ ಸಚಿವರನ್ನಾಗಿ ಮಾಡಿದಾಗ ಅದನ್ನು ವಿರೋಧಿಸಿ ಇಂತಹ ಖಾತೆಯಿಂದ ಜನರಿಗೆ ನಾನು ಏನು ಉಪಕಾರ ಮಾಡಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿದ ಇವರು ಇಂದಿನ ರಾಜಕಾರಣಕ್ಕೆ ಒಂದೊಳ್ಳೆಯ ಸಂದೇಶ ನೀಡಿ ಬೇಷ್ ಎನ್ನಿಸಿಕೊಂಡರು.

ಒಟ್ಟಿನಲ್ಲಿ ಕೋಮುವಾದ ಹಾಗೂ ದ್ವೇಷ ರಾಜಕಾರಣದ ಮಧ್ಯೆ ಸಾಮರಸ್ಯ ಮತ್ತು ಪ್ರೀತಿ ಮೂಡಿಸಿ ಮೌಢ್ಯಾಚಾರಣೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸತೀಶ್‌ ಜಾರಕಿಹೊಳಿಂಯಂತಹ ರಾಜಕಾರಣಿಗಳು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅವಶ್ಯವಾಗಿ ಬೇಕಾಗಿದ್ದಾರೆ.

– ಸುನಿಲ ಹಂಪನ್ನವರ
ಬೆಳಗಾವಿ ಜಿಲ್ಲೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...