ಸವದತ್ತಿ | ಯಲ್ಲಮ್ಮನ ಗುಡ್ಡದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ: ₹3.68 ಕೋಟಿ ಸೇರ್ಪಡೆ

Date:

ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಪ್ರಖ್ಯಾತ ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿ ಎಣಿಕೆ ಗುರುವಾರ ಪೂರ್ಣಗೊಂಡಿದ್ದು, ಈ ಬಾರಿ ದಾಖಲೆಯ ₹3.68 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಸಾಮಾನ್ಯವಾಗಿ ಪ್ರತಿ ಎಣಿಕೆಯಲ್ಲಿ ₹1 ರಿಂದ ₹1.5 ಕೋಟಿ ವರೆಗೆ ಕಾಣಿಕೆ ಬರುತ್ತಿದ್ದರೆ, ಈ ಬಾರಿ ಇದಕ್ಕೆ ದ್ವಿಗುಣ ಹೆಚ್ಚು ಹಣ ಸೇರಿದೆ ಎನ್ನಲಾಗಿದೆ.

89 ದಿನಗಳ ಎಣಿಕೆ – ಲಕ್ಷಾಂತರ ಭಕ್ತರಿಂದ ದೇಣಿಗೆ
ಈ ಬಾರಿಯ ಎಣಿಕೆಯಲ್ಲಿ ₹3.40 ಕೋಟಿ ನಗದು, ₹20.82 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಪತ್ತೆಯಾಗಿದ್ದು, ಅಮೆರಿಕ, ನೆದರ್‌ಲ್ಯಾಂಡ್ ಸೇರಿದಂತೆ ವಿದೇಶಿ ಕರೆನ್ಸಿಗಳೂ ದೊರೆತಿವೆ. ಬನದ ಹುಣ್ಣಿಮೆ ಹಾಗೂ ಭರತ ಹುಣ್ಣಿಮೆ ಅವಧಿಯಲ್ಲಿ ಅಪಾರ ಭಕ್ತಾದಿಗಳು ಗುಡ್ಡಕ್ಕೆ ಆಗಮಿಸಿದ್ದು, ಕಳೆದ ವರ್ಷ ಬರಗಾಲದ ಪರಿಣಾಮ ಕಡಿಮೆಯಾಗಿದ್ದ ಭಕ್ತರ ಸಂಖ್ಯೆಯಲ್ಲಿ ಈ ಬಾರಿ ಗಂಭೀರ ಹೆಚ್ಚಳ ಕಂಡು ಬಂದಿದೆ. ಸಮೃದ್ಧ ಮಳೆ ಹಾಗೂ ಉತ್ತಮ ಫಸಲು ರೈತರನ್ನು ದೊಡ್ಡ ಸಂಖ್ಯೆಯಲ್ಲಿ ಆಕರ್ಷಿಸಿರುವುದು ಪ್ರಮುಖ ಕಾರಣವಾಗಿದೆ.

ಭಕ್ತರ ಸೌಕರ್ಯಕ್ಕಾಗಿ ಹಣ ಬಳಕೆ
ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಾಲಯದ ಉಳಿತಾಯ ಖಾತೆಗೆ ಜಮೆ ಮಾಡಲಾಗಿದ್ದು, ಭಕ್ತರ ಸೌಲಭ್ಯ ಹಾಗೂ ಅಭಿವೃದ್ಧಿ ಕೆಲಸಗಳಿಗೆ ವಿನಿಯೋಗಿಸಲಾಗುವುದು. “ಯಲ್ಲಮ್ಮನ ಗುಡ್ಡದ ಆಧುನಿಕೀಕರಣ ಹಾಗೂ ಭಕ್ತರ ಅನುಕೂಲಕ್ಕಾಗಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆ ಕೈಗೊಳ್ಳಲಾಗಿದೆ,” ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಗುಡ್ಡದ ಆದಾಯವನ್ನು ಇನ್ನಷ್ಟು ವೃದ್ಧಿಸುವ ಜೊತೆಗೆ, ಭಕ್ತರ ಅನುಕೂಲತೆಗಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ಹುಂಡಿ ಎಣಿಕೆ ಸಂದರ್ಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ, ಮುಜರಾಯಿ ಇಲಾಖೆಯ ಅಧಿಕಾರಿ ಬಾಳೇಶ ಅಬ್ಬಾಯಿ, ದೇವಾಲಯ ಉಪಕಾರ್ಯದರ್ಶಿ ನಾಗರತ್ನಾ ಚೋಳಿನ ಸೇರಿದಂತೆ ಹಲವಾರು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...