ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

Date:

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಸವಣೂರು ಪಟ್ಟಣದ ಸುಭಾಷ್ ಗಡಿಯವರ ಮನೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂಬ ನಿಖರ ಮಾಹಿತಿ ತಿಳಿದು ಕೆ ಆರ್ ಎಸ್ ಕಾರ್ಯಕರ್ತರು ಅದನ್ನ ವಿಡಿಯೋ ಮಾಡಲು ಹೋಗಿದ್ದಾರೆ.

ಇದನ್ನು ಖಂಡಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರಿಂದ ಕುಪಿತರಾಗಿ ಬಿಜೆಪಿಯ ಕಾರ್ಯಕರ್ತರಾದ ಮಹೇಶ್ ಮುದಗಲ್ ಮತ್ತು ಸಂತೋಷ ಪಾಟೀಲ ಇತರ ಬೆಂಬಲಿಗರೊಂದಿಗೆ ಮಹಿಳೆಯರೆನ್ನದೆ ಹಲವರ ಮೇಲೆ ಹಲ್ಲೆ ಮಾಡಿ, ಗಾಯಗೊಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ಮತ್ತು ಕೆ ಆರ್ ಎಸ್ ನೂರಾರು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ದಬ್ಬಾಳಿಕೆ ದುಡ್ಡು ಹಂಚಿ ಓಟು ಕೊಳ್ಳುವುದನ್ನು ಖಂಡಿಸಿ ಪ್ರತಿಭಟನೆಗಿಳಿದಿದ್ದಾರೆ. ಎಚ್ಚೆತ್ತ ಪೋಲಿಸರು ಲಾಠಿ ಚಾರ್ಜ್ ಮಾಡಿ ಎಲ್ಲರನ್ನೂ ಚದುರಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಚುನಾವಣೆಯಲ್ಲಿ ಬೊಮ್ಮಾಯಿಯವರ ಬೆಂಬಲಿಗರಾದ ಸುಭಾಷ್ ಗಡಿಯವರ ಮನೆಯಲ್ಲಿಯೇ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ದುಡ್ಡು ಹಂಚಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶೋಭಾ ನಿಸ್ಸೀಮ್‌ಗೌಡ್ರ ಇವರು ಬಿಜೆಪಿ ಬೊಮ್ಮಾಯಿ ಕಚೇರಿಯಿಂದ ಹಣ ಹಂಚುವುದರಲ್ಲಿ ಪ್ರಮುಖ ಪಾತ್ರಧಾರಿ ಎಂದು ತಿಳಿದುಬಂದಿದೆ. ಎಲ್ಲಾ ಸ್ತ್ರೀ ಶಕ್ತಿ ಸಂಘದವರಿಗೂ ಹಣ ಹಂಚಿರುವ ಆರೋಪ ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...