ವಿಜಯಪುರ | ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮ

Date:

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮ ಮಾಡಲಾಯಿತು.

ಒಡಲ ದನಿ ಮಹಿಳಾ ಒಕ್ಕೂಟ ಜಿಲ್ಲಾ ಮುಖಂಡರಾದ ಡಾ. ಭುವನೇಶ್ವರಿ ಕಾಂಬಳೆ ಮಾತನಾಡಿ, ಸಾವಿತ್ರಿಬಾಯಿ ಫುಲೆಯವರ ಹೋರಾಟದ ಬದುಕು ಬದಲಾವಣೆಯತ್ತ ಅವರು ಇಟ್ಟ ಹೆಜ್ಜೆ ಗುರುತುಗಳಾಗಿವೆ. ಅವಾಚ್ಯ ಬೈಗಳು, ಮೈಮೇಲೆ ಮಣ್ಣು ಕೆಸರು ಸಗಣಿ ಎರಚಿದರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಮುನ್ನಡೆದರು. ಶೋಷಣೆ, ದಬ್ಬಾಳಿಕೆ, ಅನ್ಯಾಯ ಜಾತಿ ವ್ಯವಸ್ಥೆಯನ್ನು ಎದುರಿಸಿದರು ಎಂದರು.

ಪ್ರಾಣಿಗಿಂತ ಕೀಳಾಗಿ ನೋಡಿದ್ದ ತಳ ಸಮುದಾಯದ ಜನರಿಗೆ ಯಾರು ಮುಟ್ಟಿಸಿಕೊಳ್ಳದೆ ಊರಿನ ಆಚೆ ಇಟ್ಟು ಅವರ ನೆರಳು ಯಾರ ಮೇಲೆ ಬೀಳಬಾರದೆಂದು ಕಟ್ಟಲೆಗಳು ದಾರಿಯಲ್ಲಿ ಉಗುಳು ಕೂಡ ಕೇಳಬೀಳದಂತೆ ಕತ್ತಿಗೆ ಟೆಂಗಿನ ಪಟ್ಟೆ ಸೊಂಟದ ಸುತ್ತಲೂ ಪೊರಕೆ ತಾವು ಮೆಟ್ಟಿದ ನೆಲವನು ಗುಡಿಸುತ್ತ ಸಾಗಬೇಕಿತ್ತು. ಅಸ್ಪೃಶ್ಯರಾಗಿದ್ದವರಿಗೆ ಯಾರೂ ಕೆಲಸ ಕೊಡದೇ, ವಿದ್ಯ ಇಲ್ಲದೇ ಕುಡಿಯಲು ಸಹ ನೀರು ಕೊಡದೆ ಆರೋಗ್ಯ ಕೆಟ್ಟರೇ ವೈದ್ಯರು ಚಿಕಿತ್ಸೆ ಕೊಡದ ಸಾಮಾಜಿಕ ಹಿನ್ನೆಲೆಯಲ್ಲಿ ಸಾವಿತ್ರಿಬಾಯಿ ಫುಲೆ ಬೆಳೆದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 04 at 1.59.03 PM 1 1

ಸಾವಿತ್ರಿಬಾಯಿ ಫುಲೆ ಕಲಿಕಾ ಕೇಂದ್ರದ ಶಿಕ್ಷಕಿ ಲಕ್ಷ್ಮೀ ದ್ರಾವಿಡ್ ಮಾತನಾಡಿ, ಇಂಗ್ಲಿಷ್ ಶಿಕ್ಷಣ ಕಲಿತ ಜ್ಯೋತಿಬಾ ಫುಲೆ ಪಾಶ್ಚಾತ್ಯ ಚಿಂತಕರ, ಕ್ರಾಂತಿಕಾರಿಗಳ ಕುರಿತು ಓದವ ತಿಳಿಯುವ ಅವಕಾಶ ಸಿಕ್ಕಿತು. ಅಮೆರಿಕ ಚಿಂತಕ ಥಾಮಸ್ ಪೇನ್ ಅವರ ಪುಸ್ತಕ ರೈಟ್ಸ್ ಆಫ್ ಮ್ಯಾನ್ ಎಂಬ ಪುಸ್ತಕದ ವಿಚಾರಗಳು ಮನಸ್ಸಿನಲ್ಲಿ ಆಳವಾಗಿ ನಾಟಿದ್ದವು. ಸಮಾನತೆ ಪಡೆಯಬೇಕಾದರೆ ಶಿಕ್ಷಣ ಮುಖ್ಯ ಎಂದು ಸಾವಿತ್ರಿಬಾಯಿ ಫುಲೆ ಜೀವನದ ಗುರಿಯಾಗಿ ಒಪ್ಪಿಕೊಂಡರು. ಸಮಾಜದ ಪ್ರತಿರೋಧದ ನಡುವೆ ಅಂದಿನ ಕಟ್ಟಳೆಗಳನ್ನು ಮೀರಿ ಹೆಣ್ಣು ಮಕ್ಕಳಿಗೆ ಶಾಲೆಯ ತೆರೆದು ತಮ್ಮ ಜೀವನವೇ ಮುಡುಪಾಗಿಟ್ಟು ಶಿಕ್ಷಣದ ಅರಿವು ಮೂಡಿಸಿದವರು ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರು. ಶಿಕ್ಷಣಧಾತೆ ಸರಸ್ವತಿಯಲ್ಲ, ಸಾವಿತ್ರಿ ಬಾಫುಲೆ. ಅಕ್ಷರಧಾತ ಗಣೇಶನಲ್ಲ, ಜ್ಯೋತಿ ಬಾಫುಲೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ತುಂಬು ಗರ್ಭಿಣಿಯ ಕೊಲೆ ಪ್ರಕರಣ: ಗಂಡನ ಅಣ್ಣನೇ ಕೊಲೆ ಆರೋಪಿ!

ಕಲಿಕಾ ಕೇಂದ್ರದ ಮಕ್ಕಳು ಸಾವಿತ್ರಿಬಾಯಿ ಫುಲೆ ಕುರಿತು ಹೋರಾಟದ ಹಾಡುಗಳನ್ನು ಹೇಳಿದರು. ರಮಾಬಾಯಿಸ್ವ್ -ಸಹಾಯ ಸಂಘದ ಭೈಜಾಬಾಯಿ ಹರಿಜನ, ಹಿರಿಯರಾದ ಕಲ್ಲಪ್ಪ ಹರಿಜನ, ಸಿದ್ದರಾಮ ಕಾಂಬಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...