ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

Date:

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಹೇಮಂತ್, ಸುಷ್ಮಿತಾ, ವರ್ಷಿಕಾ, ಸುದೀಪ್, ಹೆಚ್.ಎನ್.ಹಿಮಬಿಂದು, ಸಾನ್ವಿಕಾ, ಲಿಖಿತ, ಶರಣ್ಯ, ಅಶ್ವಿನ್ ಕುಮಾರ್, ಅಶ್ವಿನ್, ತೇಜಸ್, ನಿಹಾನ್ ಅಪಘಾತದಲ್ಲಿ ಗಾಯಗೊಂಡಿರುವ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಕಡೆಯಿಂದ ಬಂದ ಸತ್ಯಸಾಯಿ ಶಾಲಾ ವಾಹನವು ರಸ್ತೆ ದಾಟುವ ವೇಳೆ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಶಾಲಾ ವಾಹನ ಚಾಲಕನ ಅಜಾಗರೂಕ ಚಾಲನೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳು ಮಕ್ಕಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಇಓ ವೆಂಕಟೇಶಪ್ಪ, ಶಿಕ್ಷಣ ಸಮನ್ವಯಾಧಿಕಾರಿ ಆರ್.ವೆಂಕಟರಾಮ್, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ರಂಗನಾಥ್, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಸರ್ವೀಸ್ ರಸ್ತೆ ನಿರ್ಮಿಸಲು ಒತ್ತಾಯ : ಘಟನೆಯನ್ನು ಕುರಿತು ಪ್ರತಿಕ್ರಿಯಿಸಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ಸೋಮಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ ಪಕ್ಕದ ಶಾಲೆ, ಗ್ರಾಮಗಳಿಗೆ ಸರ್ವೀಸ್ ರಸ್ತೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ ಈ ಭಾಗದಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸದೆ ನಿರ್ಲಕ್ಷ್ಯಿಸಲಾಗಿದ್ದು, ಇಂತಹ ಅವಘಡಗಳಿಗೆ ಕಾರಣವಾಗುತ್ತಿದೆ. ಕೂಡಲೇ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...