ಅನುದಾನದ ನಿರೀಕ್ಷೆಯಲ್ಲಿ ಬಿದರೆ ಸರ್ಕಾರಿ ಶಾಲೆ; ಹಳೆ ವಿದ್ಯಾರ್ಥಿಗಳಿಂದ ಮರುಜೀವ

Date:

ಶಿಕ್ಷಣವೇ ಬೆಳವಣಿಗೆಗೆ ನಿಜವಾದ ಮಾರ್ಗ ಎಂಬ ವಾಕ್ಯವನ್ನು ಪ್ರತಿಯೊಬ್ಬ ರಾಜಕಾರಣಿಯೂ ಉಚ್ಚರಿಸುತ್ತಾರೆ. ಆದರೆ, ಆ ಮಾತು ಎಷ್ಟರ ಮಟ್ಟಿಗೆ ಕಾರ್ಯ ರೂಪದಲ್ಲಿದೆ ಎನ್ನುವುದಕ್ಕೆ ಅವರೇ ಉತ್ತರಿಸಬೇಕು. ಅದೆಷ್ಟೋ ಮಕ್ಕಳು ಇಂದಿಗೂ ಶಿಥಿಲ ಶಾಲೆಗಳೊಳಗೆ ತಮ್ಮ ಕನಸುಗಳನ್ನು ಬಿತ್ತುತ್ತಿದ್ದಾರೆ. ನೀರೂರಿ ಪೋಷಿಸಬೇಕಾದವರು ಭಾಷಣ, ಪ್ರಚಾರಗಳಲ್ಲಿ ತೊಡಗಿದ್ದಾರೆ. ಶಿವಮೊಗ್ಗ ಗ್ರಾಮಾಂತರದ ಬಿದರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇಂಥದ್ದೊಂದು ತೀವ್ರ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. ಆದರೂ, ಶಾಲೆಯ ಹಳೆ ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ ಕೃತಜ್ಞತೆಯಾಗಿ ಶಾಲೆಯ ಶಿಥಿಲ ಕೊಠಡಿಗಳನ್ನು ತೆರವುಗೊಳಿಸಿ, ಪುನರ್ ನಿರ್ಮಾಣದ ಕನಸು ಕಟ್ಟುತ್ತಿದ್ದಾರೆ.

1960ರಲ್ಲಿ ಪ್ರಾರಂಭವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಜ್ಞಾನದ ಮಾರ್ಗ ತೋರಿರುವ ಈ ಶಾಲೆ ಇಂದು ಸರ್ಕಾರದ ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಗೆ ತಲುಪಿದೆ. ಮಕ್ಕಳ ಸುರಕ್ಷತೆಗೆ ಧಕ್ಕೆ, ಮಳೆಗಾಲದಲ್ಲಿ ನೆನೆಯುವ ಕೊಠಡಿಗಳು, ಕುಸಿಯುವ ಮೆಲ್ಚಾವಣಿ ಇವೆಲ್ಲವೂ ಶಿಕ್ಷಣ ವ್ಯವಸ್ಥೆಯ ಬದ್ಧತೆಯ ಕುರಿತು ಪ್ರಶ್ನೆ ಹುಟ್ಟುಹಾಕುತ್ತವೆ.

ಕಳೆದ ವರ್ಷದಿಂದ ಶಾಲೆಗೆ ಅನುದಾನ ನೀಡಿ ಶಾಲೆಗೆ ನೂತನ ಕೊಠಡಿಗಳನ್ನು ನಿರ್ಮಿಸಿ ಕೊಡಬೇಕೆಂದು ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂಸಿ ಯವರು ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದರು. ಇಲ್ಲಿವರೆಗೆ ಯಾವದೇ ಸ್ಪಂದನೆ ಬಾರದ ಕಾರಣ, ತಮ್ಮ ಸ್ವಂತ ಖರ್ಚಿನಲ್ಲಿ ಜೆಸಿಬಿ ಮೂಲಕ ಶಿಥಿಲಾವಸ್ಥೆ ತಲುಪಿದ್ದ ಎರಡು ಕೊಠಡಿಗಳನ್ನು ಕೆಡವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೂ ಶಾಲೆಯ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛ ಮಾಡಿಸಿ, ಕೈದೋಟಗಳನ್ನು ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದು ಶಾಲೆಯ ಹಳೆ ವಿದ್ಯಾರ್ಥಿ ಪ್ರಸನ್ನ ಈದಿನಕ್ಕೆ ತಿಳಿಸಿದರು.

ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಮಾತನಾಡಿ, “ಹಂತ ಹಂತವಾಗಿ ಹಣ ಬಿಡುಗಡೆ ಆಗಲಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೇಮಂತ್ ಅವರ ಗಮನಕ್ಕೂ ತಂದಿದ್ದು, ಶಾಲಾ ದಾಖಲೆಗಳು ನೀಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಶೀಘ್ರದಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಾದರೂ ಸರ್ಕಾರಿ ಶಾಲೆಗಳ ಪರಿಸ್ಥಿತಿ ಸುಧಾರಿಸಲಿ” ಎಂದು ಆಶಿಸಿದರು.

ಬಿದರೆ ವ್ಯಾಪ್ತಿಯಲ್ಲಿ ಅಧಿಕಾರದಲ್ಲಿರುವುದು ಜೆಡಿಎಸ್‌ ಶಾಸಕಿ ಶಾರದಾ ಪೂರ್ವನಾಯ್ಕ್.‌ ರಾಜ್ಯದಲ್ಲಿ ಕಾಂಗ್ರೆಸ್‌ ಇದೆ. ಬಿದರೆ ಗ್ರಾಮದ ಸರ್ಕಾರಿ ಶಾಲೆಗೆ ಅನುದಾನ ಬರಲು ವಿಳಂಬವಾಗಿರುವುದಕ್ಕೆ ಈ ರಾಜಕೀಯ ಒಳ ಬಿಕ್ಕಟ್ಟೂ ಒಂದು ಕಾರಣವಿರಬಹುದು ಎಂದು ಸ್ಥಳೀಯರು ಸಂಶಯಿಸುತ್ತಾರೆ.

ಕಳೆದ ಬಾರಿ ಬಿದರೆ ಗ್ರಾಮದ ರಸ್ತೆಗಳು ಗುಂಡಿಗಳಿಂದ ತುಂಬಿಹೋಗಿದ್ದು, ಈ ಬಗ್ಗೆ ಕ್ರಮವಹಿಸಬೇಕೆಂದು ವರದಿ ಮಾಡಿದ್ದಾಗ, “ಬರಬೇಕಾದ ಅನುದಾನ ಬರುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿಲ್ಲ. ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅನುದಾನ ಬಂದ ಕೂಡಲೇ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ಕೊಡಲಾಗುತ್ತದೆ” ಎಂಬುದಾಗಿ ತಿಳಿಸಿದ್ದರು.

ರಾಜಕಾರಣಿಗಳ ಕಿತ್ತಾಟದಿಂದ ಸರ್ಕಾರಿ ಶಾಲೆಗೆ ಬರುವ ಬಡ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂದು ಇದಕ್ಕೆ ತಾರ್ಕಿಕ ಅಂತ್ಯ ಹಾಡಲು ಹಳೆ ವಿದ್ಯಾರ್ಥಿಗಳೇ ಕಟ್ಟಡ ನೆಲಸಮ ಮಾಡಿಸುವ ಮೂಲಕ ಶಾಲೆಗೆ ಮರು ಜೀವ ನೀಡಲು ಹೊರಟಿದ್ದಾರೆ.

ಇನ್ನಾದರೂ ಈ ಶಾಲೆಯ ವಿಚಾರದಲ್ಲಿ ಶಿಕ್ಷಣ ಸಚಿವರು ರಾಜಕೀಯ ಬಿಡಬೇಕು. ತಮಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲು ಪಣ ತೊಟ್ಟು ನಿಂತಿದ್ದೇನೆ ಎಂದು ಪದೆ ಪದೆ ಹೇಳಿಕೊಳ್ಳುವವರು ಈ ವಿದ್ಯಾರ್ಥಿಗಳೆಡಗೂ ಗಮನ ಕೊಡುವುದು ಅತ್ಯಗತ್ಯ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ಮತ್ತು ಅಮೆರಿಕ: ಏನದು ಎಪ್‌ಸ್ಟೀನ್ ಫೈಲ್ಸ್?

ಬಿದರೆ ಗ್ರಾಮದ ಶಾಲೆಯ ಕಥೆ ಒಂದು ಶಿಥಿಲ ಕಟ್ಟಡದ ಕುರಿತಲ್ಲ; ಅದು ಶಿಥಿಲವಾಗುತ್ತಿರುವ ಜವಾಬ್ದಾರಿಗಳ ಕುರಿತು. ಸರ್ಕಾರದಿಂದ, ಶಾಸಕರಿಂದ ಮತ್ತು ಶಿಕ್ಷಣ ಇಲಾಖೆಯಿಂದ ಸಿಗಬೇಕಾದ ಸಣ್ಣ ಸ್ಪಂದನೆಯಿಲ್ಲದೇ ಮಕ್ಕಳ ಭವಿಷ್ಯ ಮಳೆಗಾಲದಲ್ಲಿ ತೊಯ್ದ ಬಣ್ಣದ ಬೊಂಬೆಯಂತಾಗುತ್ತಿದೆ. ಆದರೆ ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಇಚ್ಛಾಶಕ್ತಿ, ಸಂಬಂಧಪಟ್ಟವರ ನೈತಿಕತೆ ಮೇಲೆ ಬರೆ ಎಳೆದಂತಾಗಿದೆ. “ಸರ್ಕಾರ ನಿರ್ಲಕ್ಷಿಸಿದರೆ ನಾವು ಕೈಜೋಡಿಸೋಣ” ಎಂಬ ಧೈರ್ಯ ಅನೇಕ ಬಡ ಮಕ್ಕಳ ಕನಸುಗಳಿಗೆ ಹೊಸ ಆಸರೆಯಾಗಿ ಪರಿಣಮಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...