ಶಾಲಾ ವಿದ್ಯಾರ್ಥಿನಿಯರ ಸಮವಸ್ತ್ರ: ಸ್ಕರ್ಟ್‌ ಬದಲಿಗೆ ಚೂಡಿದಾರ ಕಡ್ಡಾಯಕ್ಕೆ ಕೆಎಸ್​​ಸಿಪಿಸಿಆರ್ ಪ್ರಸ್ತಾವನೆ

Date:

ಭದ್ರತೆ ಮತ್ತು ಹಿತದೃಷ್ಟಿಯಿಂದ​ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿನಿಯರಿಗೆ ಸ್ಕರ್ಟ್​​​ ಬದಲು ಪ್ಯಾಂಟ್ ಅಥವಾ ಚೂಡಿದಾರ (ಸಲ್ವಾರ್ ಸೂಟ್‌) ಸಮವಸ್ತ್ರ ಕಡ್ಡಾಯಗೊಳಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದೆ.

“ಶಾಲೆಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳು ಮತ್ತು ನಿಬಂಧನೆಗಳನ್ನು ಮರುಪರಿಶೀಲಿಸಿ ಬಾಲಕಿಯರ ಒಟ್ಟಾರೆ ಅಭಿವೃದ್ಧಿಗಾಗಿ ಸಮವಸ್ತ್ರದ ನಿಯಮಗಳಲ್ಲಿ ಬದಲಾವಣೆ ಮಾಡಿ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೇಳಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ, 1983ರ ಪ್ರಕಾರ, ಶೈಕ್ಷಣಿಕ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಶಿಫಾರಸು ಮಾಡಲು ಸ್ವತಂತ್ರವಾಗಿವೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಗಂಡುಮಕ್ಕಳಿಗೆ ಶರ್ಟ್, ಚಡ್ಡಿ (ಶಾರ್ಟ್ಸ್) ಅಥವಾ ಪ್ಯಾಂಟ್‌ಗಳನ್ನು ಸೂಚಿಸಿದರೆ, ಹೆಚ್ಚಿನ ಖಾಸಗಿ ಶಾಲಾ ಆಡಳಿತಗಳು ಹುಡುಗಿಯರಿಗೆ ಸ್ಕರ್ಟ್‌ಗಳನ್ನು ಸೂಚಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಚೂಡಿದಾರಗಳನ್ನು ಧರಿಸುವುದು ಕಡ್ಡಾಯವಾಗಿದೆ. ಎಲ್ಲ ಸರ್ಕಾರಿ, ಅನುದಾನಿತ ಮತ್ತು ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಧರಿಸುವುದು ಸಮವಸ್ತ್ರದ ಒಂದು ಭಾಗವಾಗಿದೆ. ಆದರೆ‌, ಅವರು ಬಸ್‌ಗಳಲ್ಲಿ ಪ್ರಯಾಣಿಸುವಾಗ, ಜನಸಂದಣಿಯಲ್ಲಿ ನಡೆಯುವಾಗ, ಸೈಕಲ್ ತುಳಿಯುವಾಗ ಮತ್ತು ಮೈದಾನದಲ್ಲಿ ಆಟವಾಡುವಾಗ ಅನಾನುಕೂಲತೆಯ ಅನುಭವವಾಗುತ್ತದೆ. ಈ ಬಗ್ಗೆ ಅವರು ನಮಗೆ ದೂರು ನೀಡಿದ್ದಾರೆ. ಹುಡುಗಿಯರ ಮೇಲೆ ಹಲವಾರು ರೀತಿಯ ಲೈಂಗಿಕ ಕಿರುಕುಳ ಪ್ರಕರಣಗಳನ್ನು ನಾವು ನೋಡಬಹುದು. ಹಾಗಾಗಿ, ಭದ್ರತೆ ಮತ್ತು ಹಿತದೃಷ್ಟಿಯಿಂದ ವಿದ್ಯಾರ್ಥಿನಿಯರು ಸ್ಕರ್ಟ್‌ಗಳ ಬದಲಿಗೆ ಪ್ಯಾಂಟ್ ಮತ್ತು ಚೂಡಿದಾರಗಳನ್ನು ಧರಿಸುವುದು ಉತ್ತಮ. ಇದು ಸಾರ್ವಜನಿಕ ಅಭಿಪ್ರಾಯವೂ ಹೌದು ಎಂದು ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೆಎಸ್‌ಸಿಪಿಸಿಆರ್‌ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ನೀಡಿರುವ ಪ್ರಸ್ತಾವನೆಯನ್ನು ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಡಿಎಸ್‌ಇಎಲ್‌ಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

“ವಿದ್ಯಾರ್ಥಿನಿಯರು ಕುಳಿತುಕೊಳ್ಳುವಾಗ, ಆಡುವಾಗ, ಸೈಕಲ್ ತುಳಿಯುವಾಗ ಮತ್ತು ಇತರ ಚಟುವಟಿಕೆಗಳಲ್ಲಿ ಸ್ಕರ್ಟ್ ಅಹಿತಕರವಾಗಿರುತ್ತದೆ. ಹದಿಹರೆಯದ ಗರ್ಭಧಾರಣೆ, ಹೆಣ್ಣುಮಕ್ಕಳ ಲೈಂಗಿಕ ಕಿರುಕುಳದ ಹಲವು ಪ್ರಕರಣಗಳನ್ನು ನಾವು ಶಾಲೆಯಲ್ಲಿ ಮತ್ತು ಅದರ ಹೊರಗೆ ನೋಡಬಹುದು. ಆದ್ದರಿಂದ, ನಾವು ಈ ವಿಷಯದ ಬಗ್ಗೆ ವಿದ್ಯಾರ್ಥಿನಿಯರ ಅಭಿಪ್ರಾಯವನ್ನು ಸಂಗ್ರಹಿಸಿದ್ದೇವೆ. ಸ್ಕರ್ಟ್​​​​ಗಿಂತ ಪ್ಯಾಂಟ್ ಅಥವಾ ಚೂಡಿದಾರ ಧರಿಸುವುದು ಉತ್ತಮ ಎಂದು ಹೆಚ್ಚಿನ ವಿದ್ಯಾರ್ಥಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಾವು ಡಿಎಸ್‌ಇಎಲ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ” ಎಂದು ಕೆಎಸ್‌ಸಿಪಿಸಿಆರ್‌ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

“ಶಾಲೆಯಲ್ಲಿ ಸ್ಕರ್ಟ್ ಧರಿಸಲು ನಮಗೆ ಯಾವುದೇ ತೊಂದರೆ ಇಲ್ಲ. ಇದು ಅಹಿತಕರವೆಂಬ ಭಾವನೆ ನಮಗೆ ಎಂದಿಗೂ ಬಂದಿಲ್ಲ. ನಾವು ಆಟ ಆಡುವಾಗ, ನಾವು ಕ್ರೀಡಾ ಉಡುಗೆ ಧರಿಸುತ್ತೇವೆ. ಹುಡುಗಿಯರಿಗೆ ಕಿರುಕುಳ ನೀಡಲು ಸ್ಕರ್ಟ್ ಧರಿಸುವುದು ಮಾತ್ರ ಕಾರಣವೆಂದು ನನಗೆ ಅನಿಸುವುದಿಲ್ಲ” ಎಂದು ಬೆಂಗಳೂರಿನ ಎಲೈಟ್ ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರವು ನಮಗೆ ಸಮವಸ್ತ್ರವಾಗಿ ಚೂಡಿದಾರಗಳನ್ನು ನೀಡುತ್ತಿದೆ. ಈ ಸಮವಸ್ತ್ರ ಧರಿಸಲು ತುಂಬಾ ಆರಾಮದಾಯಕವಾಗಿದೆ. ಹದಿಹರೆಯದ ಹುಡುಗಿಯರಿಗಾಗಿ, ಸುರಕ್ಷತೆ ಮತ್ತು ರಕ್ಷಣೆ ಪ್ರಮುಖ ಅಂಶಗಳಾಗಿವೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಯ ಬಾಲಕಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...