ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

Date:

ಚಿಕ್ಕಬಳ್ಳಾಪುರ:-ಕೋಲಾರ ಪಕ್ಕದ ಚಿಕ್ಕಬಳ್ಳಾಪುರದಲ್ಲೂ ಚಿನ್ನದ ನಿಕ್ಷೇಪವಿರೋ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು ಗಡಿಭಾಗದಲ್ಲಿ ಹೈಟೆಕ್ ಸರ್ವೆ ನಡೆಸಲಾಗ್ತಿದೆ. ಆಂಧ್ರದ ಕದಿರಿ ಮತ್ತು ಕರ್ನಾಟಕದ ಗುಡಿಬಂಡೆ ಸುತ್ತಮುತ್ತ ಹೆಲಿಕಾಪ್ಟರ್‌ ಮೂಲಕ ಗುಪ್ತ ನಿಧಿಗಾಗಿ ವಾಯುಗಾಮಿ ಸಮೀಕ್ಷೆ ಮಾಡಲಾಗುತ್ತಿದೆ.

ಆಂಧ್ರಪ್ರದೇಶದ ಕದಿರಿ ಮತ್ತು ಕರ್ನಾಟಕದ ಗುಡಿಬಂಡೆ ಸುತ್ತಮುತ್ತ ಹೆಲಿಕಾಪ್ಟರ್ ಮೂಲಕ ವಾಯುಗಾಮಿ ಸಮೀಕ್ಷೆ ನಡೆದಿದೆ. ಮಣ್ಣಿನ ಆಳದಲ್ಲಿ ಅಡಗಿರುವ ಚಿನ್ನದ ಅದಿರು ಪತ್ತೆಯಾದರೆ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಬೂಸ್ಟ್ ಸಿಗುವ ನಿರೀಕ್ಷೆ ಇದೆ.

ಜಿಎಸ್‌ಐ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಮತ್ತು ಆಂಧ್ರಪ್ರದೇಶದ ಕದಿರಿ ಪ್ರದೇಶದಲ್ಲಿ ಹೈಟೆಕ್ ಸರ್ವೇ ನಡೆಸುತ್ತಿದೆ. ಹೆಲಿಕಾಪ್ಟರ್ ಮೂಲಕ ವಾಯುಗಾಮಿ ಸಮೀಕ್ಷೆ ಮಾಡಿ, ಭೂಮಿಯ ಆಳದಲ್ಲಿರುವ ಖನಿಜ ಸಂಪತ್ತನ್ನು ಪತ್ತೆಹಚ್ಚುತ್ತಿದ್ದಾರೆ. ಹೈಟೆಕ್ ಸೆನ್ಸಾರ್‌ಗಳನ್ನು ಬಳಸಿ ಭೂಮಿಯ ದತ್ತಾಂಶ ಸಂಗ್ರಹಿಸುತ್ತಿದ್ದಾರೆ. ಇದರಲ್ಲಿ ಚಿನ್ನದ ಅದಿರು ಪತ್ತೆಯಾದರೆ ಹೊಸ ಗಣಿಗಾರಿಕೆ ಆರಂಭವಾಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮತ್ತು ಆಂಧ್ರದ ಗಡಿ ಪ್ರದೇಶದಲ್ಲಿ ಭೂಗರ್ಭದಲ್ಲಿ ಚಿನ್ನದ ಸಾಧ್ಯತೆ ಇದೆ ಎಂಬ ಹಿಂದಿನ ಅಧ್ಯಯನಗಳಿಂದ ಸರ್ವೇ ಆರಂಭವಾಗಿದೆ. ಜಿಎಸ್‌ಐಯು ದೇಶದಾದ್ಯಂತ ಖನಿಜ ಸಂಪತ್ತು ಹುಡುಕುವ ಕೆಲಸ ಮಾಡುತ್ತದೆ. ಚಿಕ್ಕಬಳ್ಳಾಪುರದಲ್ಲಿ ಹಿಂದೆಯೂ ಸಣ್ಣ ಪ್ರಮಾಣದಲ್ಲಿ ಚಿನ್ನ ಪತ್ತೆಯಾಗಿತ್ತು. ಇದೀಗ ಹೊಸ ತಂತ್ರಜ್ಞಾನ ಬಳಸಿ ಸರ್ವೇ ನಡೆಯುತ್ತಿದೆ. ಗಡಿ ಪ್ರದೇಶದಲ್ಲಿ ಸಮೀಕ್ಷೆ ಮಾಡಿ, ಎರಡೂ ರಾಜ್ಯಗಳಿಗೆ ಪ್ರಯೋಜನವಾಗುವಂತೆ ಮಾಡುವ ಉದ್ದೇಶ ಇದೆ.

ಒಂದು ವೇಳೆ ಸರ್ವೇಯಲ್ಲಿ ಚಿನ್ನದ ಅದಿರು ಪತ್ತೆಯಾದರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಹೊಸ ಗಣಿಗಾರಿಕೆ ಆರಂಭವಾಗಬಹುದು. ಇದು ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಿ, ರಾಜ್ಯದ ಆರ್ಥಿಕತೆಗೆ ಬೂಸ್ಟ್ ನೀಡುತ್ತದೆ. ದೇಶದ ಚಿನ್ನ ಉತ್ಪಾದನೆ ಹೆಚ್ಚಾಗಿ, ಆಮದು ಕಡಿಮೆಯಾಗುತ್ತದೆ. ಆದರೆ ಪರಿಸರ ಮತ್ತು ನೀರಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು

ಇದನ್ನು ಓದಿದ್ದೀರಾ..? ಕೇಂದ್ರ ಬಜೆಟ್ | ಶ್ರೀಗಂಧ ಬೆಳೆಗೆ ಪ್ರೋತ್ಸಾಹ; ಕೃಷಿ ಉತ್ಪನ್ನ ಎಂದು ಪರಿಗಣಿಸಲು ಶ್ರೀಗಂಧ ಕೃಷಿಕರ ಸಂಘ ಒತ್ತಾಯ

ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆಯ ಜನರು ಸರ್ವೇಯ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಹೆಲಿಕಾಪ್ಟರ್ ಸರ್ವೇ ನೋಡಿ ಕುತೂಹಲ ಹೆಚ್ಚಾಗಿದೆ. ವಿಜ್ಞಾನಿಗಳು ಸಂಗ್ರಹಿಸಿದ ದತ್ತಾಂಶಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕೃತ ವರದಿ ಬಂದ ನಂತರವೇ ಸತ್ಯ ಬಯಲಾಗಲಿದೆ. ಈ ಸರ್ವೇ ಕರ್ನಾಟಕದ ಖನಿಜ ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಚಿನ್ನದ ನಾಡು ಮತ್ತೊಮ್ಮೆ ಹೊಸ ಗಣಿಗಳಿಂದ ಹೊಳೆಯುವ ನಿರೀಕ್ಷೆ ಇದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...