ಹಿರಿಯ ನ್ಯಾಯವಾದಿ ಕೆ ಸುಬ್ಬರಾವ್ ವಿಧಿವಶ; ಎಐಎಲ್‌ಯು ಶ್ರದ್ಧಾಂಜಲಿ ಸಭೆ

Date:

ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಹಿರಿಯ ನ್ಯಾಯವಾದಿ ಕೆ ಸುಬ್ಬರಾವ್ (92) ಅವರು ಶುಕ್ರವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ ಅಂತಿಮ ಗೌರವ ಮತ್ತು ನಮನ ಸಲ್ಲಿಸಲು ಲಖಿಲ ಭಾರತ ವಕೀಲರ ಒಕ್ಕೂಟ (ಎಐಎಲ್‌ಯು) ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದೆ.

“1956ರ ಜೂನ್‌ 4ರಂದು ಬೆಂಗಳೂರು ಬಾರ್ ಕೌನ್ಸಿಲ್ ಗೆ ಆಯ್ಕೆಯಾಗಿ ಬಳಿಕ ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ 1999ರಲ್ಲಿ ಹಿರಿಯ ನ್ಯಾಯವಾದಿಯಾಗಿ ನೇಮಕವಾಗಿದ್ದರು. ಅಸಮಾನತೆಯನ್ನು ತೊಲಗಿಸುವ ತುಡಿತ ಹೊಂದಿದ್ದ ಸುಬ್ಬರಾವ್‌ ಸಾರ್ಥಕ ಬದುಕು ಸಾಗಿಸಿದ್ದಾರೆ. ತಾತ್ವಿಕಕವಾಗಿ ಮಾರ್ಕ್ಸ್ ವಾದದ ಮೇರು ವ್ಯಕ್ತಿತ್ವವನ್ನು ಅವರು ಹೊಂದಿದ್ದರು” ಎಂದು ಎಐಎಲ್‌ಯು ಸ್ಮರಿಸಿದೆ.

“1975ರಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಹೇರಿದ್ದರ ವಿರುದ್ಧ ಪ್ರಜಾಪ್ರಭುತ್ವದ ಉಳಿವಿಗಾಗಿ ನ್ಯಾಯಾಂಗ ಹೋರಾಟವನ್ನು ಸುಬ್ಬರಾವ್ ಮುನ್ನಡೆಸಿದ್ದರು. ಆ ವೇಳೆ, ಹಿರಿಯ ಹೋರಾಟಗಾರರು ನಿಗೂಢವಾಗಿ ಬಂಧನಕ್ಕೊಳಗಾಗಿದ್ದಾಗ ಹೇಬಿಯೆಸ್ ಕಾರ್ಪಸ್ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದರು” ಎಂದು ಒಕ್ಕೂಟ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದ ಸುಬ್ಬರಾವ್, ಕಾಸರಗೋಡಿನ ಗ್ರಾಮವೊಂದರಲ್ಲಿ ಕನ್ನಡ ಶಾಲೆ ಸ್ಥಾಪಿಸಿ ಕನ್ನಡ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಿದ್ದರು. ಅಲ್ಲಿಯೇ ಸಾಮಾಜಿಕ ಬದಲಾವಣೆಯ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದ್ದರು. ದಲಿತ, ಆದಿವಾಸಿ, ಹಿಂದುಳಿದ, ಅಲ್ಪ ಸಂಖ್ಯಾತ ಸಮುದಾಯಗಳ ಬಗ್ಗೆ ಅವರು ಅಪಾರ ಕಾಳಜಿ ಹೊಂದಿದ್ದರು. ಅದಕ್ಕಾಗಿ ತಮ್ಮ ಭೂಮಿಯನ್ನು ದಾನ ಮಾಡಿ ,ಟ್ರಸ್ಟ್ ಒಂದನ್ನು ಸ್ಥಾಪಿಸಿ ಮಾದರಿಯಾಗಿದ್ದರು” ಎಂದು ಸ್ಮರಿಸಿದೆ.

ಈ ಸುದ್ದಿ ಓದಿದ್ದೀರಾ?: ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

“ತಮ್ಮ ಜೀವನದ ಅಮೂಲ್ಯ ಸಮಯ, ಸಂಪನ್ಮೂಲಗಳನ್ನು ಜನತೆಗಾಗಿ ಸಮರ್ಪಿಸಿದ, ಮಾದರಿ ವ್ಯಕ್ತಿತ್ವದ ಹಿರಿಯ ಚೇತನವಾಗಿದ್ದ ಸುಬ್ಬರಾವ್‌ ಎಐಎಲ್‌ಯು ಕರ್ನಾಟಕ ಘಟಕದ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದರು. ಒಕ್ಕೂಟದ ರಾಜ್ಯ ಸಮಿತಿಯಲ್ಲಿ ಎರಡು ಅವಧಿಗೆ ಗೌರವಾಧ್ಯಕ್ಷರಾಗಿಯೂ ವಕೀಲರನ್ನು ಸಂಘಟಿಸುವಲ್ಲಿ ಹಾಗೂ ವಕೀಲರನ್ನು ಸಮಾಜಮುಖಿಯಾಗಿಸುವಲ್ಲಿ ಕೊಡುಗೆ ನೀಡಿದ್ದಾರೆ” ಎಂದು ಒಕ್ಕೂಟ ನೆನಪಿಸಿಕೊಂಡಿದೆ.

ಶ್ರದ್ಧಾಂಜಲಿ ಸಭೆಯಲ್ಲಿ ಎಐಎಲ್‌ಯು ರಾಜ್ಯ ಪ್ರಧಾನ‌ಕಾರ್ಯದರ್ಶಿ ಶ್ರೀನಿವಾಸಕುಮಾರ್, ದಕ್ಷಿಣ ಭಾರತ ಸಂಚಾಲಕರಾದ ರಾಮಚಂದ್ರರೆಡ್ಡಿ, ರಾಜ್ಯ ಮುಖಂಡರಾದ ಶಿವಾರೆಡ್ಡಿ, ಶರಣಬಸವ ಮರದ್, ಹುಳ್ಳಿ ಉಮೇಶ್, ರಮೇಶ್ ಪಿ.ಎಸ್, ರವಿ.ಜಿ ಎನ್, ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...