ಮೈಸೂರು | ‘ ಬೋಧಿವರ್ಧನ ‘ಪ್ರಶಸ್ತಿಗೆ ಭಾಜನರಾದ ದಸಂಸ ಹಿರಿಯ ಮುಖಂಡ ಬೆಟ್ಟಯ್ಯಕೋಟೆ

Date:

ಮೈಸೂರು ಜಿಲ್ಲೆ,ಹೆಗ್ಗಡದೇವನಕೋಟೆಯ ದಸಂಸ ಹಿರಿಯ ಮುಖಂಡರಾದ ಬೆಟ್ಟಯ್ಯಕೋಟೆ ಅವರಿಗೆ ಬೆಂಗಳೂರಿನ ಸ್ಫೂರ್ತಿಧಾಮ ಕೊಡ ಮಾಡುವ ಪ್ರತಿಷ್ಠಿತ 2025 ನೇ ಸಾಲಿನ ‘ ಬೋಧಿವರ್ಧನ ‘ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶೋಷಿತ ಸಮುದಾಯಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಸ್ಫೂರ್ತಿಧಾಮ ಪ್ರತಿವರ್ಷ ‘ ಭೋದಿವೃಕ್ಷ ‘ ಹಾಗೂ ‘ ಬೋಧಿವರ್ಧನ ‘ ಪ್ರಶಸ್ತಿಯನ್ನು ಹೋರಾಟಗಾರರಿಗೆ ನೀಡುವುದರ ಮೂಲಕ ಗೌರವ ಸಲ್ಲಿಸುತಿದೆ.

ಬೆಟ್ಟಯ್ಯಕೋಟೆಯವರು 70 ರ ದಶಕದಲ್ಲಿ ‘ ದಲಿತ ಸೇವಕ ಸಂಘ’ದ ಮೂಲಕ ಹೋರಾಟಕ್ಕೆ ಪಾದರ್ಪಣೆ ಮಾಡಿದವರು. 80 ರ ದಶಕದಲ್ಲಿ ಅಂದರೆ 1981 ರಲ್ಲಿ ದಲಿತ ಸಂಘರ್ಷ ಸಮಿತಿಗೆ ಸೇರಿ ಹೆಗ್ಗಡದೇವನ ಕೋಟೆ ತಾಲ್ಲೂಕು ಸಂಚಾಲಕರಾಗಿ ಜನಪರ ಹೋರಾಟಗಳನ್ನು ಮುನ್ನಡೆಸಲು ಆರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಟ್ಟಯ್ಯಕೋಟೆಯವರ ನೇತೃತ್ವದಲ್ಲಿ ಮೈಸೂರಿನ ಬೆಲವತ್ತ, ಪಡುಕೋಟೆ, ಹುಣಸೆಕುಪ್ಪೆ, ಪಿರಿಯಾಪಟ್ಟಣದ ಗುಡ್ಡೆನಳ್ಳಿ, ದೇವಲಾಪುರ, ಹುಣಸೂರಿನ ಬಿ. ಆರ್. ಕಾವಲ್, ನಂಜಯ್ಯನ ಕಾಲೋನಿಗಳಲ್ಲಿ ನಡೆದ ಭೂ ಹೋರಾಟಗಳು ಪ್ರಮುಖವಾಗಿದ್ದು ನೂರಾರು ಕುಟುಂಬಗಳಿಗೆ ಭೂಮಿ ಲಭಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದರು.

ಅದಲ್ಲದೆ, ಬದಾನವಾಳು, ಸರಗೂರಿನಲ್ಲಿ ದಲಿತರ ಮೇಲೆ ನಡೆದಿದ್ದ ಹತ್ಯಾಕಾಂಡದ ವಿರುದ್ಧ ಬೃಹತ್ ಚಳುವಳಿ ನಡೆಸಿ ದಲಿತರಿಗಾದ ಅನ್ಯಾಯವನ್ನು ಗುರುತಿಸುವಂತೆ ಮಾಡಿದಲ್ಲದೆ. ತಪ್ಪಿತಸ್ತರಿಗೆ ಶಿಕ್ಷೆಯಾಗುವಂತೆ ಹೋರಾಟ ಕಟ್ಟಿ ಗಮನ ಸೆಳೆದಿದ್ದರು.

ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯನ್ನು ತಳಮಟ್ಟದಿಂದ, ಸಕ್ರಿಯವಾಗಿ ಕಟ್ಟುವಲ್ಲಿ, ಸಂಘಟಿಸುವಲ್ಲಿ ಪ್ರಮುಖರಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ಸಕ್ರಿಯರಾಗಿರುವ ಬೆಟ್ಟಯ್ಯ ಕೋಟೆಯವರು ಜಿಲ್ಲೆಯ ದಸಂಸ ಹೋರಾಟಗಳಲ್ಲಿ ಮುಂದಾಳತ್ವ ವಹಿಸಿ ನಡೆಸಿಕೊಂಡು ಬರುತಿದ್ದಾರೆ.

ತರಕಾರಿ ಬೆಳೆಯುವ ರೈತರು ಹಾಗೂ ಮಾರಾಟಗಾರರ ವಿವಿಧೋದ್ದೇಶ ಸಂಘ ನಿರ್ಮಿಸಿ ಬಡವರಿಗೆ ಆರ್ಥಿಕವಾಗಿ ಅನುಕೂಲವಾಗುವಂತೆ ಮಾಡಿದ್ದಾರೆ. ಇದರಿಂದ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಹೋರಾಟದಲ್ಲಿ ಸದಾ ಮುಂದಿರುವ ಬೆಟ್ಟಯ್ಯಕೋಟೆ ಇಂದಿನವರಿಗೆ ಸ್ಫೂರ್ತಿಯಾಗಿದ್ದು, ಹೋರಾಟಕ್ಕೆ ಮಾದರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಾಡಿ ಜನರ ಜಮೀನು ದಾರಿ ಒತ್ತುವರಿ; ಮನವಿಗೆ ಸ್ಪಂದಿಸದ ತಹಶೀಲ್ದಾರ್

ಏ. 14 ರ ಅಂಬೇಡ್ಕರ್ ಜಯಂತಿಯಂದು ಬೆಂಗಳೂರಿನ ಸ್ಫೂರ್ತಿಧಾಮದಲ್ಲಿ ವಿಧಾನಸಭೆ ಮಾಜಿ ಸಭಾಪತಿ ಕೆ.ಆರ್. ರಮೇಶ್ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ವೇದಿಕೆಯಲ್ಲಿ ಸ್ಫೂರ್ತಿಧಾಮ ಅಧ್ಯಕ್ಷ ಎನ್. ಮರಿಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆಯವರು ಇರಲಿದ್ದು, ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...