ಸೆ.13-22: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದಿಂದ ‘ಪ್ರವಾದಿ ಮುಹಮ್ಮದ್: ಮಹಾನ್ ಚಾರಿತ್ರ್ಯವಂತ’ ರಾಜ್ಯವ್ಯಾಪಿ ಅಭಿಯಾನ

Date:

ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕದ ವತಿಯಿಂದ ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡದ ಬಿಫ್ಟ್ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಜೀವನದ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತವೆನಿಸಿದೆ. ಸಮಾಜದಲ್ಲಿಂದು ದ್ವೇಷ, ಅಸೂಯೆ, ಅನೈತಿಕತೆ, ಹಿಂಸೆ, ಸ್ವಾರ್ಥಗಳು ಸಾಮಾನ್ಯ ಎನಿಸಿಬಿಟ್ಟಿದೆ. ಇಂದಿನ ಈ ವಾತಾವರಣವನ್ನು ನೈತಿಕತೆಯ, ಪ್ರೀತಿಯ ಹಾಗೂ ಮಾನವೀಯತೆ ಸಂದೇಶವನ್ನು ಎತ್ತಿ ಹಿಡಿಯಬೇಕಾದ ಅನಿವಾರ್ಯತೆ ಇದೆ” ಎಂದು ತಿಳಿಸಿದರು.

ಜಿಹ

ಸಮಾಜದಲ್ಲಿ ಇಂದು ನೈತಿಕತೆ ಎಷ್ಟು ಅಧಃಪತನಕ್ಕೆ ಈಡಾಗಿದೆ ಎಂಬುದನ್ನು ನಾವು ಗಮನಿಸುತ್ತಲೇ ಇದ್ದೇವೆ. ಮಂಡ್ಯದ ಹೆಣ್ಣು ಭ್ರೂಣ ಹತ್ಯೆ, ತಿಪಟೂರಿನಲ್ಲಿ ಮಗಳ ಮೇಲೆ ತಂದೆಯಿಂದ ಅತ್ಯಾಚಾರ, ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಘಟನೆಗಳು ಸಮಾಜವೇ ತಲೆ ತಗ್ಗಿಸುವಂಥದ್ದು. ಇಂದು ದೇಶದಲ್ಲಿ ನಿಮಿಷಕ್ಕೆ 16 ಅತ್ಯಾಚಾರ ಘಟನೆಗಳು ನಡೆಯುತ್ತಿರುವುದಾಗಿ ಕೆಲವು ವರದಿಗಳು ತಿಳಿಸಿದೆ. ಇಂದು ಗಂಭೀರ ವಿಚಾರ. ಹೀಗಾಗಿ, ನಮ್ಮ ಯುವಕರಿಗೆ ಮೊದಲು ಜಾಗೃತಿ ಮೂಡಿಸಬೇಕಿದೆ. ಹಾಗಾದಲ್ಲಿ ಮಾತ್ರ ಯುವತಿಯರು ಸುರಕ್ಷಿತರಾಗಿ ಇಂದು ಬದುಕಲು ಸಾಧ್ಯ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದಲ್ಲಿ ಇಂದು ನೈತಿಕತೆ, ಮಾನವೀಯತೆ ಸಂದೇಶವನ್ನು ಎತ್ತಿ ಹಿಡಿಯಬೇಕಾದರೆ ಜನರಿಗೆ ಮನವರಿಕೆ ಮಾಡಬೇಕಿದೆ. ಹೀಗಾಗಿ, ಪ್ರವಾದಿ ಮುಹಮ್ಮದ್ ಅವರ ಮಾನವೀಯ ಸಂದೇಶವನ್ನು ಅವರ ಚಾರಿತ್ರ್ಯವನ್ನು ಮುಂದಿಟ್ಟುಕೊಂಡು ಸಮಾಜಕ್ಕೆ ತಿಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ‘ಪ್ರವಾದಿ ಮುಹಮ್ಮದ್ (ಸ): ಮಹಾನ್ ಚಾರಿತ್ರ್ಯವಂತ’ ಎಂಬ ರಾಜ್ಯವ್ಯಾಪಿ ಅಭಿಯಾನವನ್ನು ಸೆಪ್ಟೆಂಬರ್ 13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಅಕ್ಬರ್ ಅಲಿ ಉಡುಪಿ ತಿಳಿಸಿದರು.

ಜೆಐಎಚ್

ಅಭಿಯಾನದ ಅಂಗವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾದಿ ಮುಹಮ್ಮದ್ ಅವರ ಜೀವನದ ಸಂದೇಶಗಳನ್ನು ಜನರಿಗೆ ತಲುಪಿಸಲು ವಿಚಾರಗೋಷ್ಠಿ, ಪತ್ರಿಕಾಗೋಷ್ಠಿಗಳನ್ನು ಆಯೋಜಿಸಲಿದ್ದು, ಪ್ರಮುಖ ನಾಯಕರ ವೈಯಕ್ತಿಕ ಭೇಟಿ ಕೂಡ ಇರಲಿದೆ. ಸಂವಾದ, ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ನೈತಿಕತೆ ಮೂಡಿಸಲು ವಿಶೇಷ ಕಾರ್ಯಕ್ರಮಗಳು, ಸ್ವಚ್ಛತಾ ಕಾರ್ಯಕ್ರಮಗಳು, ಸಮಾಜ ಸೇವಾ ಕಾರ್ಯಗಳು ಹಾಗೂ ಮುಸ್ಲಿಂ ಸಮುದಾಯದಲ್ಲೂ ಕೂಡ ಜಾಗೃತಿ ಮೂಡಿಸಲು ಶುಕ್ರವಾರದ ದಿನ ವಿಶೇಷ ಜುಮಾ ಖುತ್ಬಾಗಳು ನಡೆಸಲು ಕೂಡ ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಭಿಯಾನದ ಪ್ರಯುಕ್ತ ಪೋಸ್ಟರ್ ಹಾಗೂ ಶಾಂತಿ ಪ್ರಕಾಶನ ಸಂಸ್ಥೆ ಹೊರತಂದಿರುವ 276ನೇ ಕೃತಿ ‘ಪ್ರವಾದಿ ಮುಹಮ್ಮದ್ (ಸ): ಲೇಖನಗಳ ಸಂಕಲನ’ವನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮೌಲಾನಾ ವಹೀದುದ್ದೀನ್ ಖಾನ್ ಉಮರಿ ಮಾತನಾಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್‌

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಮಾಧ್ಯಮ ವಿಭಾಗದ ತಲ್ಹಾ ಸಿದ್ದಿ ಬಾಪಾ, ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ, ಸಾರ್ವಜನಿಕ ಸಂಪರ್ಕ ವಿಭಾಗದ ಮುಹಮ್ಮದ್ ನವಾಝ್ ಮಂಗಳೂರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...