ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ, ಹೃದಯದಿಂದ ಜನಸೇವೆ ಮಾಡಿ: ಕೃಷ್ಣಭೈರೇಗೌಡ

Date:

  • ಕಂದಾಯ ದಿನಾಚರಣೆ, ಕಾರ್ಯಾಗಾರ ಉದ್ಘಾಟಿಸಿ ಅಭಿಮತ
  • ‘ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ’

ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ನೌಕರರೂ ಸಹ ಮಾತೃ ಹೃದಯದಿಂದ ಜನಸೇವೆಗೆ ಮುಂದಾಗಬೇಕು ಎಂದು ಸಚಿವ ಕೃಷ್ಣಭೈರೇಗೌಡ ಕಿವಿಮಾತು ಹೇಳಿದರು.

ಕಂದಾಯ ದಿನಾಚರಣೆಯ ಅಂಗವಾಗಿ ಇಲಾಖೆ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ನೌಕರರಿಗೆ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡಿದರು.

“ಹಿಂದಿನ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದ ಜನ ಭರವಸೆಯಿಂದ ನಮಗೆ ಅಧಿಕಾರ ನೀಡಿದ್ದಾರೆ. ನಮ್ಮ ಸರ್ಕಾರದ ಮೇಲೆ ಜನರಿಗೆ ಭರವಸೆ ಇದೆ. ಆದರೆ, ಸರ್ಕಾರಿ ನೌಕರರ ಸಹಕಾರ ಇಲ್ಲದೆ ಜನಸೇವೆ ಹಾಗೂ ಉತ್ತಮ ಆಡಳಿತ ಅಸಾಧ್ಯ. ನಮ್ಮೆಲ್ಲರ ಮೇಲೆ ಜವಾಬ್ದಾರಿ ಇದೆ. ಕಂದಾಯ ಇಲಾಖೆ‌ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಹೇಳಿದರೆ ಮಾತ್ರ ಸಾಲದು. ಜನಸೇವೆಯನ್ನೂ ಮಾತೃ ಹೃದಯದಿಂದ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಂದಾಯ ಇಲಾಖೆ ಮನಸ್ಸು ಮಾಡಿದರೆ ಜನರಿಗೆ ಒಳ್ಳೆಯದನ್ನೂ ಮಾಡಬಹುದು ಕೆಟ್ಟದ್ದನ್ನೂ ಮಾಡಬಹುದು. ಆದರೆ, ಜನರಿಗೆ ಒಳಿತನ್ನು ಮಾಡುವುದಷ್ಟೆ ನಮ್ಮ ಕೆಲಸವಾಗಲಿ. ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆಗೆ ಸಂಪರ್ಕ ಹೊಂದಿರುವ ಇಲಾಖೆ. ಜನ ಸೇವೆ ಮಾಡಲು ನಿಮಗೆ ಅವಕಾಶ ಸಿಕ್ಕಿದೆ. ಅವಕಾಶ ಸಿಗದವರು ಕೋಟ್ಯಂತರ ಜನ ಹೊರಗಿದ್ದಾರೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ನಿಮ್ಮ ನ್ಯಾಯಯುತ ಕೋರಿಕೆಗಳನ್ನು ಈಡೇರಿಸಲೂ ಸಹ ನಾವು ಸಿದ್ದರಾಗಿದ್ದೇವೆ. ಈಗಾಗಲೇ ಕಂದಾಯ ಇಲಾಖೆ ಆಯುಕ್ತಾಲಯವನ್ನು ಕೇವಲ ಎರಡು ತಿಂಗಳಲ್ಲಿ ನಿರ್ಮಿಸಲಾಗಿದೆ. ಮುಂಬಡ್ತಿಗೆ ಸಂಬಂಧಿಸಿದ ನಿಮ್ಮ ಕೋರಿಗೆಯ ಬಗ್ಗೆಯೂ ಚಿಂತಿಸಲಾಗುವುದು” ಎಂದು ಕೃಷ್ಣಭೈರೇಗೌಡ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಘದ ವೆಬ್ಸೈಟ್ ಬಿಡುಗಡೆ ಮಾಡಲಾಯಿತು. ‌ಸಚಿವರ ತಂದೆ ದಿವಂಗತ ಮಾಜಿ ಸಚಿವ ಸಿ ಭೈರೇಗೌಡ ಅವರ ವರ್ಣಚಿತ್ರ ಉಡುಗೊರೆಯಾಗಿ ನೀಡಲಾಯಿತು. ಕೆಎಎಸ್ ಸಂಘದ ಅಧ್ಯಕ್ಷ ರವಿ ತಿರ್ಲಾಪುರ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...