ಅಧಿವೇಶನ-2023 | ಅಧಿವೇಶನ ಆರಂಭದ ದಿನವೇ ಕಣ್ಣೀರಿಟ್ಟ ಡಿಕೆ ಶಿವಕುಮಾರ್!

Date:

ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು 16ನೇ ವಿಧಾನಸಭೆಯ ಮೊದಲ ಅಧಿವೇಶನದ ಆರಂಭದ ದಿನವೇ ಕಣ್ಣೀರಿಟ್ಟ ಘಟನೆ ನಡೆಯಿತು.

ರಾಜ್ಯಪಾಲರ ಭಾಷಣದ ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಈ ವೇಳೆ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್‌ ಧೃವನಾರಾಯಣ ನಿಧನಕ್ಕೆ ಸಂತಾಪ ಸೂಚಿಸಿ, ಕಣ್ಣೀರಿಟ್ಟರು.

“ಸುರೇಶ್‌ ನನಗೆ ಯಾವ ರೀತಿ ಸಹೋದರನಾಗಿದ್ದನೋ ರಾಜಕಾರಣದಲ್ಲಿ ಆರ್‌ ಧೃವನಾರಾಯಣ ನನಗೆ ಸಹೋದರನಾಗಿದ್ದ. ಅವರ ಅಗಲಿಕೆಯಿಂದ ನನಗೆ ಜೀವನದಲ್ಲಿ ಯಾವುದು ಶಾಶ್ವತವಲ್ಲ ಅನ್ನಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಕಾಂಗ್ರೆಸ್‌ ಅಧ್ಯಕ್ಷನಾಗಿ ಚುನಾವಣೆಯಲ್ಲಿ ಅನೇಕ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿದ್ದೆ. ಅವರು ಕಾರ್ಯನಿರ್ವಹಿಸಿದ ಜಿಲ್ಲೆಗಳ ಫಲಿತಾಂಶ ನೋಡಿದರೆ ನನಗೇ ಆಶ್ಚರ್ಯವಾಗುತ್ತದೆ. ಧೃವನಾರಾಯಣ ನಿಭಾಯಿಸಿದ ಉಸ್ತುವಾರಿ ಜಿಲ್ಲೆಗಳಲ್ಲಿ ಶೇ.75 ರಷ್ಟು ನಮ್ಮ ಶಾಸಕರು ಗೆದ್ದಿದ್ದಾರೆ. ಇಂದು ನಮ್ಮ ಜೊತೆ ಅವರು ಇದ್ದಿದ್ದರೆ ಖಂಡಿತ ಸಚಿವರಾಗಿ ಇರುತ್ತಿದ್ದರು” ಎಂದರು,

“ನನಗೆ ಎಷ್ಟು ದುಃಖ ಆಗಿದೆ ಎಂದರೆ ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿದರೆ ಆರ್‌ ಧೃವನಾರಾಯಣ ಅವರನ್ನೇ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬ ಮಹದಾಸೆ ಇಟ್ಟುಕೊಂಡಿದ್ದೆ. ಆದರೆ ವಿಧಿ ಲಿಖಿತ ಬೇರೆ ಇದೆ. ಆದರೆ ಯಾಕೆ ಸತ್ತರು ಎನ್ನುವ ಚರ್ಚೆಗೆ ನಾನು ಹೋಗಲ್ಲ. ಒಬ್ಬ ಶ್ರೇಷ್ಠ ಸ್ನೇಹಿತನನ್ನು ಕಳೆದುಕೊಂಡಿರುವ ನೋವು ನನಗಿದೆ” ಎಂದು ಭಾವುಕರಾಗಿ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...