ಸೆಟ್ಟೇರಿದ ಸಿದ್ದರಾಮಯ್ಯ ಸಿನಿಮಾ: ಚಿತ್ರದ ಫಸ್ಟ್ ಲುಕ್ ಜೊತೆಗೆ ಟೈಟಲ್ ಬಿಡುಗಡೆ

Date:

  • ಸತ್ಯರತ್ನಮ್ ನಿರ್ದೇಶನದಲ್ಲಿ ಮೂಡಿಬರಲಿದೆ ಸಿದ್ದರಾಮಯ್ಯ ಸಿನಿಮಾ
  • ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ತರಲು ಸತ್ಯರತ್ನಮ್ ಪ್ಲ್ಯಾನ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನ ಆಧರಿತ ಸಿನಿಮಾ ನಿರ್ಮಾಣಕ್ಕೆ ತಯಾರಿ ನಡೆದಿದೆ. ಶ್ರೀರಾಮನವಮಿ ದಿನದಂದೇ ಚಿತ್ರದ ಫಸ್ಟ್ ಲುಕ್ ಜೊತೆಗೆ ಟೈಟಲ್ ಬಿಡುಗಡೆಯಾಗಿದೆ.

ನಿರ್ದೇಶಕ ಸತ್ಯರತ್ನಮ್ ನಿರ್ದೇಶನದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನ ಆಧರಿತ ಸಿನಿಮಾ ತಯಾರಾಗುತ್ತಿದೆ. ʼಲೀಡರ್ ರಾಮಯ್ಯʼ ಹೆಸರಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಸಿದ್ದರಾಮಯ್ಯ ಕುರಿತು ಚಲನಚಿತ್ರ ಮಾಡಲಾಗುತ್ತಿದೆ ಎಂಬ ವಿಚಾರ ಅಧಿಕೃತವಾಗಿ ಘೋಷಣೆಯಾಗಿದ್ದು, ʼಲೀಡರ್‌ ರಾಮಯ್ಯʼ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಸತ್ಯ ರತ್ನಮ್‌, ʼಲೀಡರ್‌ ರಾಮಯ್ಯʼ ಭಾಗ-1 ಸಿನಿಮಾ ಆರಂಭಿಸಿದ್ದೇವೆ.

ಅದರಲ್ಲಿ ಸಿದ್ದರಾಮಯ್ಯ ಅವರ ಬಾಲ್ಯದ ದಿನಗಳು, ಕಾಲೇಜು ಜೀವನ, ವಕೀಲರಾಗಿ ಕಾರ್ಯ ನಿರ್ವಹಿಸಿದ್ದ ದಿನಗಳು, ನಂಜುಂಡಸ್ವಾಮಿ ಅವರ ಜೊತೆಗಿನ ಹೋರಾಟಗಳು, ರಾಜಕೀಯಕ್ಕೆ ಅವರು ಪ್ರವೇಶ ಪಡೆದಿರುವ ಬಗ್ಗೆ ಚಿತ್ರೀಕರಣ ಮಾಡಲಾಗುತ್ತೆ” ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಸಿನಿಮಾ

ಸಿದ್ದರಾಮಯ್ಯ ಪಾತ್ರ ಯಾರು ಮಾಡುತ್ತಿದ್ದಾರೆ?

ಭಾಗ-1 ರಲ್ಲಿ ಕನ್ನಡದ ಹೊಸ ನಟರೊಬ್ಬರು ಸಿದ್ದರಾಮಯ್ಯ ಅವರ ಪಾತ್ರ ಮಾಡಲಿದ್ದಾರೆ. ತಮಿಳಿನ ವಿಜಯ್ ಸೇತುಪತಿ ಅವರು ಭಾಗ 2ರಲ್ಲಿ ನಟರಾಗಿ ಅಭಿನಯಿಸಲಿದ್ದಾರೆ.

ಶ್ರೀರಾಮನವಮಿ ಪ್ರಯುಕ್ತ ಈಗ ಟೈಟಲ್ ಬಿಡುಗಡೆ ಮಾಡಿದ್ದೇವೆ. ಭಾಗ-1ರಲ್ಲೂ ವಿಜಯ್ ಸೇತುಪತಿ ನಟನೆ ಇರುತ್ತದೆ. ಆ ಬಗ್ಗೆ ಕುತೂಹಲ ಇರಲಿದೆ ಎಂದು ಹೇಳಿದ್ದಾರೆ.

“ಸಿದ್ದರಾಮಯ್ಯ ಅವರು ಒಬ್ಬ ಮಾಸ್‌ ಲೀಡರ್‌. ಒಬ್ಬ ಮಾಸ್‌ ಲೀಡರ್ ಜನರ ಮಧ್ಯೆ ಹೇಗೆ ಹುಟ್ಟುತ್ತಾನೆ ಎಂಬುದು ಕಥೆಯ ಹಂದರ. ಈ ಕಾರಣಕ್ಕೆ ʼಲೀಡರ್ ರಾಮಯ್ಯʼ ಎಂದು ಟೈಟಲ್ ಇಟ್ಟಿದ್ದೇವೆ. ಮುಂದಿನ ವಾರವೇ ಚಿತ್ರದ ನಾಯಕ ನಟನ ಬಗ್ಗೆ ಮಾಹಿತಿ ನೀಡಲಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ಶ್ರೀರಾಮ ‘ಅಸ್ಪೃಶ್ಯ’ರ ಮೈಮೇಲೆ ಹಚ್ಚೆಯಾದ- ಸ್ಥಾವರ ಇಳಿದು ಜಂಗಮನಾದ

‘ಇದೆಲ್ಲ ಯಾಕೆ’ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರ ಬಳಿ ಲೀಡರ್‌ ರಾಮಯ್ಯ ಸಿನಿಮಾ ಮಾಡುತ್ತಿದ್ದೇವೆ ಎಂದು ಹೇಳಿದಾಗ ‘ಇದೆಲ್ಲ ಯಾಕೆ’ ಅಂತ ಹೇಳಿದರು. ಯಾವುದೇ ವಿವಾದ ಇಲ್ಲ ಎಂದು ಅವರಿಗೆ ಮನವರಿಕೆ ಮಾಡಿ, ಅವರ ಒಪ್ಪಿಗೆಯಿಂದ ಈ ಸಿನಿಮಾ ಮಾಡುತ್ತಿದ್ದೇವೆ. ಈ ಸಿನಿಮಾ ಟ್ರೇಲರ್ ಅನ್ನು ಅರಮನೆ ಮೈದಾನದಲ್ಲೇ ದೊಡ್ಡ ಕಾರ್ಯಕ್ರಮ ಮಾಡಿ ಬಿಡುಗಡೆ ಮಾಡುತ್ತೇವೆ ಎಂದು ಸತ್ಯ ರತ್ನಮ್‌ ತಿಳಿಸಿದ್ದಾರೆ.

ಕಮರ್ಷಿಯಲ್ ಸಿನಿಮಾ

‘ಲೀಡರ್‌ ರಾಮಯ್ಯʼ ಸಿನಿಮಾ ಒಂದು ಮಾಸ್ ಕಮರ್ಷಿಯಲ್ ಸಿನಿಮಾ ಆಗಿರಲಿದೆ. ಸಿದ್ದರಾಮಯ್ಯ ಅವರಿನ್ನೂ ಈ ಪೋಸ್ಟರ್‌ ಲುಕ್ ನೋಡಿಲ್ಲ. ಅವರು ಬಂದ ಮೇಲೆ ಅವರಿಗೆ ತೋರಿಸಿ, ಇನ್ನೊಮ್ಮೆ ಫಸ್ಟ್ ಲುಕ್ ರಿಲೀಸ್ ಮಾಡುತ್ತೇವೆ. ಚಿತ್ರದಲ್ಲಿ ಆಕ್ಷನ್ ಇದೆ, ಲವ್ ಇದೆ ಹಾಗೂ ತಂದೆ ಮಗನ ಭಾವನಾತ್ಮಕ ಸಂಬಂಧ ಇದ್ದು, ಚಿತ್ರ ರಸಿಕರು ಬಯಸುವ ಎಲ್ಲ ಎಳೆ ಸಿನಿಮಾದಲ್ಲಿ ಇರಲಿದೆ. ಸಿದ್ದರಾಮಯ್ಯ ಅವರ ಹುಟ್ಟುಹಬ್ಬದಂದು (ಆಗಸ್ಟ್ 3) ʼಲೀಡರ್‌ ರಾಮಯ್ಯʼ ಸಿನಿಮಾ ಐದು ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...