ಬೀದರ್‌ | ತೀವ್ರ ಹದಗೆಟ್ಟ ರಸ್ತೆ : ಕೇಳೋರಿಲ್ಲ ಇಸ್ಲಾಂಪುರ ಗ್ರಾಮಸ್ಥರ ಗೋಳು

Date:

ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಗಳಾಗಿ ಪರಿವರ್ತನೆ. ಈ ರಸ್ತೆ ಮೇಲೆ ಒಂದು ಸಲ ಸಂಚರಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯ ಸಂಚರಿಸುವ ಸಂಕಟ ಮಾತ್ರ ಈ ಗ್ರಾಮದ ಜನರಿಗೆ ತಪ್ಪಿಲ್ಲ!

ಬೀದರ್‌ ತಾಲೂಕಿನ ಇಸ್ಲಾಂಪುರ ಗ್ರಾಮದಿಂದ ಕೌಠಾ(ಬಿ) ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿರುವುದು ಸಂಚಾರ ದುಸ್ತರವಾಗಿದೆ, ಕ್ಯಾರೇ ಎನ್ನದ ಅಧಿಕಾರಿಗಳ, ಗ್ರಾಮಸ್ಥರ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.

ಬೀದರ-ಔರಾದ ರಾಷ್ಟ್ರೀಯ ಹೆದ್ದಾರಿಯ ಕೌಠಾ(ಬಿ) ಸೇತುವೆಯಿಂದ 2 ಕಿ.ಮೀ. ದೂರದ ಇಸ್ಲಾಂಪುರ ಗ್ರಾಮದಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, 1,200 ಮತದಾರರಿದ್ದಾರೆ. ಆದರೆ ಸಾರ್ವಜನಿಕರು ನಿತ್ಯ ಸಂಚರಿಸುವ ರಸ್ತೆ ಹದಗೆಟ್ಟು ದಶಕಗಳೇ ಉರಳಿದರೂ ಕನಿಷ್ಠ ದುರಸ್ತಿ ಕಾಣದೇ ಇರುವುದು ವಿಪರ್ಯಾಸವೇ ಸರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ, ತಾಲೂಕು ಕೇಂದ್ರವಾಗಿರುವ ಬೀದರ್‌ ಕೇಂದ್ರಕ್ಕೆ ತೆರಳುವ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಈ ರಸ್ತೆಯೇ ಆಧಾರ. ಇನ್ನು ಔರಾದ್‌ ತಾಲೂಕಿಗೆ ತೆರಳಲು, ರೈತರು ಹೊಲಗಳಿಗೆ ಹೋಗಲು ಇದೇ ರಸ್ತೆ ಆಶ್ರಯಿಸಿದ್ದಾರೆ. ಆದರೆ ರಸ್ತೆಯ ಎರಡೂ ಬದಿಗೆ ಮುಳ್ಳು ಗಿಡಗಳು ಬೆಳೆದಿದ್ದು ಸವಾರಿಗೆ ಮುಳ್ಳು ಚುಚ್ಚುತ್ತವೆ, ಎದುರಿಗೆ ಬರುವ ವಾಹನಗಳು ಕಾಣುವುದಿಲ್ಲ. ಇನ್ನು ದ್ವಿಚಕ್ರ ವಾಹನ ಸವಾರರ ಪ್ರಯಾಣವಂತೂ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ನಿತ್ಯ ಸರ್ಕಸ್ ಮಾಡುತ್ತ ಈ ರಸ್ತೆಯಲ್ಲಿ ಪ್ರಯಾಣಿಸುವ ಗ್ರಾಮಸ್ಥರ ಗೋಳು ಕೇಳೊರಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇದಕ್ಕೂ ತಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಕಂಗೆಣ್ಣಿಗೆ ಗುರಿಯಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ರಸ್ತೆ ಕಾಮಗಾರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳು ಜಾರಿಗೊಳಿಸಿವೆ. ಆದರೆ ʼದೇವರು ಕೊಟ್ಟರೂ ಪೂಜಾರಿ ಕೊಡಲ್ಲʼ ಎನ್ನುವಂತೆ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ, ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೇ ಇರುವ ಕಾರಣ ಜನರು ನಿತ್ಯ ಸಂಕಟ ಅನುಭವಿಸುವುದು ಇಂದಿಗೂ ಸಾಮನ್ಯವಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ವಾಗೀಣ ಅಭಿವೃದ್ಧಿ ರಾಜ್ಯ ಸರ್ಕಾರ ಪ್ರತಿ ವರ್ಷ ₹5 ಸಾವಿರ ಕೋಟಿ ಅನುದಾನ ಮೀಸಲಿಡುತ್ತದೆ. ಆದರೆ ಜನಪ್ರತಿನಿಧಿಗಳು ಅದನ್ನು ಸಮರ್ಪಕವಾಗಿ ಬಳಸಿದ್ದರೆ ಗ್ರಾಮೀಣ ಭಾಗದ ಬಹುತೇಕ ಅನೇಕ ಸಮಸ್ಯೆಗಳು ಮುಕ್ತಿ ಪಡೆಯಬಹುದು. ಆದರೆ ಆಡಳಿತ ವ್ಯವಸ್ಥೆಗೆ ಇಚ್ಚಾಶಕ್ತಿ ಇಲ್ಲದಿದ್ದರೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗುತ್ತದೆ ಎಂದು ಪ್ರಜ್ಞಾವಂತ ನಾಗರಿಕರ ಹೇಳುತ್ತಾರೆ.

ಹದಗೆಟ್ಟ ರಸ್ತೆಯಿಂದ ಬಸ್‌ ಬಂದ್‌ :

ʼಪ್ರತಿ ಸಲ ಚುನಾವಣೆ ವೇಳೆ ಭರವಸೆ ನೀಡುವ ಜನಪ್ರತಿನಿಧಿಗಳು ದಶಕ ಕಳೆದರೂ ಕನಿಷ್ಠ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಈ ಬಗ್ಗೆ ಕ್ಷೇತ್ರದ ಶಾಸಕ, ಸಚಿವ ರಹೀಂ ಖಾನ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ. ಅಧಿಕ ಮಳೆ ಬಂದರೆ ರಸ್ತೆ ಪಕ್ಕದ ಮಾಂಜ್ರಾ ನದಿ ನೀರು ಹರಿದು ರಸ್ತೆ ಮಧ್ಯೆದ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಸಂಚಾರ ಸ್ಥಗಿತವಾಗುತ್ತದೆ. ರಸ್ತೆ ಹದಗೆಟ್ಟ ಕಾರಣ ಗ್ರಾಮಕ್ಕೆ ಬರುವ ಬಸ್‌ ಕೂಡ ಬರುತ್ತಿಲ್ಲ. ಹೀಗಾಗಿ ಮಹಿಳೆಯರು, ಗರ್ಭೀಣಿಯರು ನಡೆದು ಹೋಗಲು ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಅಧಿಕಾರಿಗಳು ಎಚ್ಚೆತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕುʼ ಎಂದು ಗ್ರಾಮದ ನಿವಾಸಿ ರಾಜಕುಮಾರ್‌ ಬಿರಾದರ್ ಈದಿನ.ಕಾಮ್‌ ಜೊತೆಗೆ ಮಾತನಾಡಿ ಒತ್ತಾಯಿಸಿದರು.

ಈ ಹಿಂದೆ ಭೀಮಣ್ಣ ಖಂಡ್ರೆಯವರು ಶಾಸಕರಾಗಿದ್ದ ವೇಳೆ ಭಾಲ್ಕಿ ಮತಕ್ಷೇತ್ರಕ್ಕೆ ಒಳಪಟ್ಟಿತ್ತು, ಆವಾಗ ಒಂದೆರಡು ಸಲ ರಸ್ತೆ ದುರಸ್ತಿ ಕಂಡಿತು. ತದನಂತರ ಅರ್ಧ ರಸ್ತೆ ದುರಸ್ತಿಗೊಳಿಸಿ ಕೈತೊಳಿದುಕೊಂಡಿದ್ದಾರೆ. ಇದೀಗ ಸಂಪೂರ್ಣ ಹದಗೆಟ್ಟು ಹೋಗಿದ್ದು, ಪಾದಚಾರಿಗಳು ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ಈ ರಸೆ ಮೇಲೆ ರಾತ್ರಿ ವೇಳೆ ಯಾರೋಬ್ಬರೂ ಓಡಾಡಲು ಆಗದಂತೆ ರಸ್ತೆ ಉದ್ದಕ್ಕೂ ಮುಳ್ಳಿನ ಗಿಡ ಬೆಳೆದು ನಿಂತಿವೆʼ ಎಂದು ಕಿಡಿಕಾರಿದರು.

ʼಊರಿನ ಒಂದು ದಿಕ್ಕಿಗೆ ಮಾಂಜ್ರಾ ನದಿ, ಇನ್ನೊಂದು ದಿಕ್ಕಿಗೆ ಹಳ್ಳ ಹರಿಯುವ ಕಾರಣ ʼಇಸ್ಲಾಂಪೂರ ಅಂದ್ರೆ ಇಸ್ಲಾಡಕೊತಾ ಹೋಗೋದುʼ ಎಂದು ಮಾಜಿ ಸಚಿವ ಭೀಮಣ್ಣಾ ಖಂಡ್ರೆಯವರು ಹಾಸ್ಯ ಚಟಾಕಿ ಮಾಡುತ್ತಿದ್ದರು. ಇಂದಿಗೂ ಅದೇ ದುಸ್ಥಿತಿಯಲ್ಲಿ ನಮ್ಮೂರಿನ ಜನ ಜೀವನ ನಡೆಸುತ್ತಿದ್ದೇವೆʼ ಎಂದು ಇಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

ಈ ಕುರಿತು ಮಾಹಿತಿಗಾಗಿ ಕ್ಷೇತ್ರದ ಶಾಸಕ, ಪೌರಾಡಳಿತ ಸಚಿವ ರಹೀಂ ಖಾನ್‌ ಅವರಿಗೆ ಈದಿನ.ಕಾಮ್‌ ಹಲವು ಬಾರಿ ಸಂಪರ್ಕಿಸಿದರೂ ಕರೆ ಸ್ವೀಕರಿಸಲಿಲ್ಲ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...