ಬಾಗಲಕೋಟೆ | ಬ್ರಿಜ್ ಭೂಷಣ್ ಸಿಂಗ್‌ ಬಂಧಿಸಿ, ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ದಸಂಸ ಆಗ್ರಹ

Date:

  • ಧಾರ್ಮಿಕ ಆಚರಣೆಯಂತೆ ಸಂಸತ್‌ ಭವನ ಉದ್ಘಾಟನೆ ಪ್ರಜಾಪ್ರಭುತ್ವ ವಿರೋಧಿ
  • ಬಿಜೆಪಿಯಂತಹ ಪ್ರಜಾಪ್ರಭುತ್ವ, ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ

ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣಸಿಂಗ್ ಬಂಧಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ದಸಂಸ ಬಾಗಲಕೋಟೆ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಗತಿಸಿದ್ದು, ಈ ಅವಧಿಯಲ್ಲಿ ಸಾಕಷ್ಟು ಸರ್ಕಾರಗಳನ್ನು ಭಾರತದ ಜನ ಕಂಡಿದ್ದಾರೆ. ಆದರೆ, ಇಂತಹ ಪ್ರಸ್ತುತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಂತಹ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಹಾಗೂ ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ ಎಂದು ಕಿಡಿಕಾರಿದರು.

ನೂತನ ಸಂಸತ್‌ ಭವನ ಉದ್ಘಾಟನೆಯನ್ನು ಧಾರ್ಮಿಕ ಆಚರಣೆಯಂತೆ, ರಾಜನ ಪಟ್ಟಾಭಿಷೇಕದಂತೆ ಆಚರಣೆ ಮಾಡುವುದರ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ನಡೆ ಅನುಸರಿಸಿದ್ದು ಖಂಡನೀಯ. ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಘನವೆತ್ತ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು ವಿರೋಧ ಪಕ್ಷದ ನಾಯಕರು, ನಾನಾ ಕ್ಷೇತ್ರದ ಸಾಧಕರು ಇರಬೇಕಾಗಿತ್ತು. ಅಲ್ಲದೆ ರಾಜದೊರೆಗಳು ಸರ್ವಾಧಿಕಾರಿ ಸಂಕೇತವಾಗಿ ಸ್ಥಾಪಿಸುವಂತಹ ಸೆಂಗೋಲ್‌ ಸ್ಥಾಪಿಸುವ ಮೂಲಕ ಸರ್ವಾಧಿಕಾರಿ ಹಾಗೂ ಮಹಿಳಾ ವಿರೋಧಿ ಧೋರಣೆ ತಾಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ತಾಲೂಕು ಸಂಚಾಲಕ ಸದಾಶಿವ ಐನಾಪುರ ಮಾತನಾಡಿ, “ದೆಹಲಿಯ ಜಂತರ್‌ ಮಂತರ್‌ ಪ್ರದೇಶದಲ್ಲಿ ಸುಮಾರು 50 ದಿನಗಳಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳಾ ಕುಸ್ತಿಪಟುಗಳ ಹೋರಾಟವನ್ನು ಪೋಲೀಸರ ಧಮನಗೊಳಿಸಲು ಪ್ರಯತ್ನಿಸುತ್ತಿರುವುದು ಹಾಗೂ ಆರೋಪಿಯಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಸಿಂಗ್‌ ರಕ್ಷಿಸುತ್ತಿರುವುದು ನೋಡಿದರೆ ಇವರ ಮಹಿಳಾ ವಿರೋಧಿ ನೀತಿ ಸ್ಪಷ್ಟವಾಗಿ ಅರ್ಥವಾಗುತ್ತದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಶಾಲಾ ಪಠ್ಯ ಪರಿಷ್ಕರಣೆ | ಬರಗೂರು ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಿದ ಸರ್ಕಾರ

ದೇಶದ ಸಂವಿಧಾನಿಕ ಮುಖ್ಯಸ್ಥರಾದ ರಾಷ್ಟ್ರಪತಿಗಳು ಈ ಘಟನೆಯಲ್ಲಿ ಮಧ್ಯ ಪ್ರವೇಶಿಸಿ ಆರೋಪಿಯನ್ನು ತಕ್ಷಣ ಬಂಧಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಸದಾಶಿವ ಐನಾಪುರ ಆಗ್ರಹಿಸಿದರು.

ಈ ವೇಳೆ ರಬಕವಿ-ಬನಹಟ್ಟ ತಾಲೂಕು ಸಂಚಾಲಕ ಬಸವರಾಜ ದೊಡ್ಡಮನಿ, ಅಪ್ಪಶಿ ಕಾಂಬಳೆ, ರಾಜು ಪೋಳ, ಪ್ರವೀಣಕೂಮಾರ ನಿಡೋಣಿ ಹಾಗೂ ಇತರೆ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...