ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಜೈಲು ಸೇರಿದ ಬಿಇಒ

Date:

2020ರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅಪರಾಧಿ ಎಂದು ಸಾಬೀತಾಗಿದೆ. ಆತನಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಗದಗ ಜಿಲ್ಲೆಯ ಮುಂಡರಗಿಯಲ್ಲಿ ಬಿಇಒ ಆಗಿದ್ದ ಅಪರಾಧಿ ಎನ್ ಶಂಕ್ರಪ್ಪ ಹಳ್ಳಿಗುಡಿ 2020ರ ಫೆಬ್ರವರಿ 19ರಂದು 10ನೇ ತರಗತಿ ಓದುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, “ಅಪರಾಧಿಯು ದಂಡವನ್ನು ಪಾವತಿಸುವಲ್ಲಿ ವಿಫಲನಾದರೆ, ಇನ್ನೂ ಆರು ತಿಂಗಳು ಹೆಚ್ಚುವರಿ ಕಠಿಣ ಜೈಲು ಶಿಕ್ಷೆ ವಿಸ್ತರಿಸಬೇಕು” ಎಂದು ಹೇಳಿದ್ದಾರೆ. ಅಲ್ಲದೆ, ಮಾನಸಿಕವಾಗಿ ನೊಂದ ಸಂತ್ರಸ್ತ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಗೆ ಭೇಟಿ ನೀಡಿದ್ದ ಅಪರಾಧಿ ಶಂಕ್ರಪ್ಪ ಬಾಲಕಿಯ ಕುಟುಂಬದ ಹಿನ್ನೆಲೆ ವಿಚಾರಿಸಿದ್ದರು. ಬಾಲಕಿಗೆ ಸಹಾಯ ಮಾಡುವುದಾಗಿ ಹೇಳಿ, ಆಕೆಯ ವಿಳಾಸವನ್ನು ಪಡೆದುಕೊಂಡಿದ್ದರು. 2020ರ ಫೆಬ್ರವರಿ 19ರಂದು ಶಾಲೆಗೆ ಮತ್ತೆ ಭೇಟಿ ನೀಡಿದ್ದ ಶಂಕ್ರಪ್ಪ, ಯಾರು ಇಲ್ಲದ ಸಮಯದಲ್ಲಿ ಬಾಲಕಿ ಮನೆಗೆ ಭೇಟಿ ನೀಡಿದ್ದರು. ಆಕೆಯನ್ನು ಇಷ್ಟ ಪಡುತ್ತಿರುವುದಾಗಿ ಹೇಳಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಆಕೆಯ ಪೋಷಕರು ಮನೆಗೆ ಹಿಂದಿರುಗಿದಾಗ ಬಾಲಕಿ ಘಟನೆಯ ಬಗ್ಗೆ ವಿವರಿಸಿದ್ದರು. ಬಳಿಕ ಬಾಲಕಿಯ ತಾಯಿ ಪೊಲೀಸರು ದೂರು ನೀಡಿದ್ದರು ಎಂದು ತಿಳಿದುಬಂದಿದೆ.

“ನ್ಯಾಯಾಲಯವು ಶನಿವಾರ ಆದೇಶ ಹೊರಡಿಸಿದ್ದು, ಬುಧವಾರದಂದು ಆದೇಶದ ಪ್ರತಿ ದೊರೆತಿದೆ. ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವ ದುಷ್ಕರ್ಮಿಗಳಿಗೆ ಇದೊಂದು ಉತ್ತಮ ಪಾಠ. ಸರ್ಕಾರಿ ಅಧಿಕಾರಿಯಾಗಿರುವ ಆಪರಾಧಿಗೆ ಶಿಕ್ಷೆ ವಿಧಿಸುವ ಮೂಲಕ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ” ಎಂದು ದೂರುದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಪೋಕ್ಸೊ) ಎ.ಯು ಹಿರೇಮಠ ಹೇಳಿದ್ದಾರೆ.

ದೂರು ದಾಖಲಾದ ನಂತರ ಸಾಕ್ಷ್ಯಾ ನಾಶಪಡಿಸುವ ಸಾಧ್ಯತೆಯನ್ನು ಗಮನದಲ್ಲಿಟ್ಟಿಕೊಂಡು ಶಂಕ್ರಪ್ಪ ಹಳ್ಳಿಗುಡಿಯನ್ನು ಹೂವಿನಹಡಗಲಿಗೆ ವರ್ಗಾವಣೆ ಮಾಡಲಾಗಿತ್ತು. ಅವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು. ನಿರೀಕ್ಷಣಾ ಜಾಮೀನು ಪಡೆದಿದ್ದ ಅವರು, ಗದಗ ಜಿಲ್ಲೆ ತೊರೆಯದಂತೆ ನ್ಯಾಯಾಲಯ ನಿರ್ಬಂಧಿಸಿತ್ತು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...