ಹಾಸನ ವಿಶ್ವವಿದ್ಯಾಲಯದ ಉಳಿವಿಗೆ ಎಸ್‌ಎಫ್‌ಐ, ಡಿವೈಎಫ್‌ಐ ಹೋರಾಟ

Date:

ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಎಸ್‌ಎಫ್‌ಐ, ಡಿವೈಎಫ್‌ಐ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಬುಧವಾರವೂ ಹೇಮಗಂಗೋತ್ರಿ ಕಾಲೇಜು ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕರವೇ ಮತ್ತು ರೈತ ಸಂಘಟನೆ ನಾಯಕರು ಹಾಗೂ ಹಿರಿಯ ಪತ್ರಕರ್ತ ಆರ್ ಪಿ ವೆಂಕಟೇಶ್ ಮೂರ್ತಿಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

“ಉಪಮುಖ್ಯಮಂತ್ರಿಗಳ ನೇತೃತ್ವದ ಸಂಪುಟ ಉಪಸಮಿತಿಯ ಕಳೆದ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲ್ಪಟ್ಟಿದ್ದ ಎಂಟು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ತೀರ್ಮಾನಿಸಿದೆ ಎಂಬ ವರದಿಯಾಗಿದ್ದು, ಈ ಪಟ್ಟಿಯಲ್ಲಿ ಹಾಸನ ವಿಶ್ವವಿದ್ಯಾಲಯವೂ ಸೇರಿದೆ. ಈಗಷ್ಟೇ ಶುರುವಾಗಿರುವ ವಿಶ್ವವಿದ್ಯಾಲಯವನ್ನು ಮುಚ್ಚಬೇಕಾಗಿರುವುದು ಈ ಜಿಲ್ಲೆಯ ಜನರಿಗೆ ನಿರಾಸೆಯಾಗಿದೆ. ಇದರಿಂದ ಇಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಂಬುದು ದುಬಾರಿಯಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ಆರ್‌ಪಿವಿ

“ಪ್ರಸ್ತುತ ನಮ್ಮ ಜಿಲ್ಲೆಯ ಹಾಸನ ವಿಶ್ವವಿದ್ಯಾಲಯದ ವ್ಯಾಪ್ತಿಗೆ 57 ಕಾಲೇಜುಗಳು ಸೇರಿದ್ದು, ಒಟ್ಟು 23 ಸಾವಿರ ಮಂದಿ ವಿದ್ಯಾರ್ಥಿಗಳು(ಸ್ನಾತಕ ಮತ್ತು ಸ್ನಾತಕೋತ್ತರ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ. ಹಾಗಾಗಿ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಿತದೃಷ್ಟಿಯಿಂದ ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚದೆ ಮುಂದುವರಿಸಬೇಕು. ಜತೆಗೆ ಹಾಸನ ವಿಶ್ವವಿದ್ಯಾನಿಲಯದ ನಿರ್ವಹಣೆಗೆ ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸುವುದು ನಿಯಮ ಉಲ್ಲಂಘನೆ: ಎಸ್‌ ಎ ಗಫಾರ್

“ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತರ ಪದವಿ ಶಿಕ್ಷಣ ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಹಾಸನ ವಿಶ್ವವಿದ್ಯಾಲಯವನ್ನು ಇಲ್ಲೇ ಉಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...