ಯಾದಗಿರಿ | ಪರವಾನಿಗೆ ಪಡೆಯದೆ ಹಾಸ್ಟೆಲ್ ನಡೆಸುತ್ತಿರುವ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು ಸರ್ಕಾರದ ಪರವಾನಿಗೆ ಇಲ್ಲದೆ ವಸತಿ ಸಹಿತ ಎಂದು ನಾಮಫಲಕ ಹಾಕಿಕೊಂಡು ಅನಧಿಕೃತವಾಗಿ ವಸತಿ ಸೌಲಭ್ಯದೊಂದಿಗೆ 1 ರಿಂದ 8ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿವೆ. ಇಂತಹ ಶಾಲೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು 2024ರ ಜೂನ್ 10ರಂದು ದೂರು ಸಲ್ಲಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ, ಪರವಾನಗಿ ಪಡೆಯದೆ ಹಾಸ್ಟೆಲ್‌ ನಡೆಸುತ್ತಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಒತ್ತಾಯಿಸಿದೆ.

ಶಹಾಪುರದಲ್ಲಿ ಪ್ರತಿಭಟನೆ ನಡೆಸಿದ ದಸಂಸ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ, “ಶಹಾಪೂರ ತಾಲೂಕಿನಾದ್ಯಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಯವರೆಗೆ ಸರ್ಕಾರದ ಪರವಾನಿಗೆ ಇಲ್ಲದೇ ಹಾಸ್ಟೆಲ್‌ಗಳನ್ನು ನಡೆಯುತ್ತಿವೆ. ವಸತಿ ಸಹಿತ ಶಾಲೆಗಳು ಎಂದು ಹೇಳಿಕೊಂಡು ಪ್ರತಿ ವಿದ್ಯಾರ್ಥಿಯಿಂದ 40 ರಿಂದ 50,000 ರೂ. ವಸೂಲಿ ಮಾಡುತ್ತಿದ್ದಾರೆ. ಅಂತಹ ಶಾಲೆಗಳನ್ನು ಗುರುತಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ರಮವಾಗಿ ಹಾಸ್ಟೆಲ್‌ ನಡೆಸುತ್ತಿರುವ ಶಾಲೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ-198ರ ನಿಯಮ 35ರ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪರವಾನಿಗೆ ಇಲ್ಲದ ಈ ಶಾಲೆಗಳಲ್ಲಿ ಮಕ್ಕಳಿಗೆ ತೊಂದರೆಯಾದರೆ, ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್‌ಪಿ, ಬಿಆರ್‌ಪಿ, ಬಿಆರ್‌ಸಿ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ. ಕೂಡಲೇ ಶಹಾಪೂರ ನಗರದಲ್ಲಿ ವಸತಿ ಸಹಿತ ಕೊಚಿಂಗ್ ನೆಪದಲ್ಲಿ 60-70 ಖಾಸಗಿ ಶಾಲೆಗಳು ಎಗ್ಗೆಲ್ಲದೆ ನಡೆಯುತ್ತಿದ್ದು, ಅವುಗಳನ್ನು ಬಂದ್‌ ಮಾಡಿಸಿ, ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಶಿವಪುತ್ರ ಜವಳಿ,ಮರೆಪ್ಪ ಕ್ರಾಂತಿ, ಶಿವಲಿಂಗ ಹಸನಾಪೂರ್, ಚಂದಪ್ಪ ಮುನಿಯಪ್ಪನೂರ, ಶಿವಕುಮಾರ ತಳವಾರ, ಮಲ್ಲಪ್ಪ ಪೂಜಾರಿ, ಮಲ್ಲಿಕಾರ್ಜುನ ಹೊಸಮನಿ, ಬಾಲರಾಜ ಖಾನಾಪುರ, ಬಲಭೀಮ ಬೇವಿನಹಳ್ಳಿ, ವಸಂತಕುಮಾರ್, ಸಂತೋಷ ಗುಂಡಳ್ಳಿ, ಶರಬಣ್ಣ ದೋರನಹಳ್ಳಿ, ಶ್ರೀಮಂತ,
ನಾಗರಾಜ್, ಕೊಡಮನಹಳ್ಳಿ, ಶಿವಪುತ್ರ ಡಾಂಗೆ, ಶರಣಪ್ಪ ಕೋಟಿ, ಎಂ. ಪಟೇಲ್, ಚನ್ನಬಸ್ಸು ಗುರುಸುಣಗಿ, ತಿಪ್ಪಣ್ಣ ಶೆಳ್ಳಗಿ, ಸುಭಾಸ್, ನಾಗರಾಜ ಹುರಸಗುಂಡಗಿ, ಭೀಮಶಂಕರ, ಬಸಲಿಂಗಪ್ಪ ಹಳ್ಳಿ, ನಾಗರಾಜ್ ದೋರನಹಳ್ಳಿ, ಮಲ್ಲಪ್ಪ, ಬಸಲಿಂಗ, ಸಾಬಣ್ಣ, ಹೊನ್ನಾಪ್ಪ ಪೂಜಾರಿ, ಜೈಭೀಮ, ಹಣಮಂತ ಪೂಜಾರಿ, ಸಾಬಣ್ಣ ಕೋಳಿ,ಪರಶುರಾಮ, ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...