ಕಲಬುರಗಿ | ಕಲ್ಯಾಣ ಕರ್ನಾಟಕದ ಮಹತ್ವದ ಕವಯಿತ್ರಿ ಶೈಲಜಾ ಉಡಚಣ : ಮನು ಬಳಿಗಾರ್

Date:

ಕನ್ನಡದ ಮಹತ್ವದ ಬರಹಗಾರ್ತಿಯರಲ್ಲಿ ಶೈಲಜಾ ಉಡಚಣ ಅವರೂ ಒಬ್ಬರು. ಆದರೆ ಅವರ ಗಟ್ಟಿ ಬರಹಗಳಿಗೆ ಸೂಕ್ತ ಅವಕಾಶಗಳು ಸಿಗಲಿಲ್ಲ. ಶೈಲಜಾ ಉಡಚಣ ಅವರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷತೆ ಸಿಗಬೇಕಿತ್ತು ಎಂದು ನಾಡೋಜ, ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಮನು ಬಳಿಗಾರ ಅಭಿಪ್ರಾಯಪಟ್ಟರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ನಡೆದ ಶೈಲಜಾ ಉಡಚಣ ಅವರ ಸಾಹಿತ್ಯ ಕುರಿತು  ನಡೆದ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

” ರಾಜಧಾನಿ ಕೇಂದ್ರಿತವಾದ ಮತ್ತು ವಿದ್ವತ್ತಿನೊಳಗಿನ ರಾಜಕಾರಣ ಮೊದಲಾದ ಕಾರಣಗಳಿಂದ ಶೈಲಜಾ ಉಡಜಣ ಅವರಿಗೆ ಹೆಚ್ಚಿನ ಸ್ಥಾನಮಾನಗಳು ದೊರೆಯಲಿಲ್ಲ. ಶೈಲಜಾ ಉಡಚಣ ಸೇರಿದಂತೆ ಈ ಭಾಗದ ಅನೇಕ ಬರಹಗಾರರು ಇದ್ದರು. ಈ ಭಾಗದಲ್ಲಿ ಹೆಚ್ಚಿನ ಸಾಹಿತ್ಯ ಸಮ್ಮೇಳನಗಳು, ವಿಚಾರ ಸಂಕಿರಣಗಳು ನಡೆಸುವ ಮೂಲಕ ಯುವ ತಲೆಮಾರಿಗೆ ಅವರ ಬರಹಗಳನ್ನು ತಲುಪಿಸುವಂತಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಆಶಯ ನುಡಿ ಮಾತನಾಡಿ, “ಕಾಲಮಾನಕ್ಕೆ ಎದುರಾಗಿ ಈಜುವ ತಾಕತ್ತನ್ನು ಒಳಗೊಂಡಿದ್ದ ಗಟ್ಟಿ ಬರಹಗಾರ್ತಿ ಉಡಚಣ ಅವರಾಗಿದ್ದರು. ನಿಜಾಂ ಆಡಳಿತ ಕಾಲದಲ್ಲಿ ಉರ್ದು ಭಾಷೆಯಲ್ಲಿ ಕಲಿತ ಸ್ತ್ರೀಯೊಬ್ಬಳು ಬೆಳೆದದ್ದು ಬಹುದೊಡ್ಡ ಸಾಹಸಮಯ. ಅದರಲ್ಲೂ ಪುರುಷ ಕೇಂದ್ರಿತವಾದ ಸಮಾಜದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರು. ಎಲ್ಲರೊಂದಿಗೆ ಬೆರೆಯುವ ಮನಸ್ಸಿನ ಶೈಲಜಾ ಪ್ರತಿಭಾವಂತ ಬರಹಗಾರ್ತಿಯಾಗಿದ್ದರು” ಎಂದು ನುಡಿದರು.

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಟ್ಟು ಸತ್ಯನಾರಾಯಣ ಮಾತನಾಡಿ, “ಹಿರಿಯ ತಲೆಮಾರಿನವರಾದ ಶೈಲಜಾ ಉಡಚಣ ಮತ್ತು ಅಂತ ಇನ್ನೂ ಹಲವರ ಬರಹಗಳನ್ನು ಅಧ್ಯಯನ ಮಾಡಬೇಕು, ಅವರ ಭಾಷಾ ಪ್ರಯೋಗ, ಅವರ ವ್ಯಾಕರಣ, ಅವರ ಸಾಹಿತ್ಯದ ತುಲನಿಕ ಅಧ್ಯಯನ ಮಾಡಬೇಕು ಮತ್ತು ಅದರಿಂದ ಸಮಾಜದ ಬೆಳವಣಿಗೆಗೆ ಅವಶ್ಯವಾಗಿರುವುದನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

ಮಧ್ಯಾಹ್ನದ ವಿಚಾರ ಗೋಷ್ಟಿಯಲ್ಲಿ ಶೈಲಜಾ ಉಡಚಣ ಅವರ ಬರಹದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಡಾ.ಚಿತ್ಕಲಾ ಮಠಪತಿ ಅವರು ಶೈಲಜಾ ಉಡಚಣ ಅವರ ಕಾವ್ಯ, ಡಾ. ಗವಿಸಿದ್ದಪ್ಪ ಪಾಟೀಲ್ ಅವರು ಗದ್ಯ ಹಾಗೂ ಡಾ. ಶೈಲಜಾ ಕೊಪ್ಪರ ಅವರು ಶೈಲಜಾ ಉಡಚಣ ಅವರ ಸಂಶೋಧನೆ ಕುರಿತು ವಿಶೇಷ ಉಪನ್ಯಾಸ ಮಂಡಿಸಿದರು. ವಿಭಾಗದ ಡಾ.ರಾಜಣ್ಣ ತಗ್ಗಿ ವಿಚಾರ ಗೋಷ್ಟಿಯ ಅಧ್ಯಕ್ಷತೆ ವಹಿಸಿದ್ದರು. ಡಾ. ಅಪ್ಪಗೆರೆ ಸೋಮಶೇಖರ ಅವರು ಪ್ರತಿಕ್ರಿಯೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

ಕಾರ್ಯಕ್ರಮದಲ್ಲಿ ಮಾನವಿಕ ಮತ್ತು ಭಾಷಾ ನಿಕಾಯದ ಡೀನ ಪ್ರೊ. ವಿಕ್ರಮ್ ವಿಸಾಜಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಶಿವಗಂಗಾ ರುಮ್ಮಾ ಮತ್ತು ಕಾರ್ಯಕ್ರಮ ಸಂಯೋಜಕರಾದ ಪ್ರೊ. ಬಸವರಾಜ ಕೋಡಗುಂಟಿ ಅವರು ಉಪಸ್ಥಿತರಿದ್ದರು. ಡಾ. ವಿಜಯಕುಮಾರ್ ಅವರು ವಂದಿಸಿದರು. ಶ್ರೀ ಗದ್ದೆಪ್ಪ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...