‘ಶಕ್ತಿ’ ಯೋಜನೆ | ಸ್ಮಾರ್ಟ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಪ್ರತ್ಯೇಕ ವೆಬ್‌ಸೈಟ್‌ ಶೀಘ್ರ ಕಾರ್ಯಾರಂಭ: ಸಚಿವ ರಾಮಲಿಂಗಾ ರೆಡ್ಡಿ

Date:

  • ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ
  • ಗುರುತಿನ ಚೀಟಿ ಅಪ್‌ಲೋಡ್ ಮಾಡಿ ಸ್ಮಾರ್ಟ್‌ ಕಾರ್ಡ್‌ ಪಡೆಯಬಹುದು

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಪ್ರತ್ಯೇಕವಾಗಿ ಹೊಸ ವೆಬ್‌ಸೈಟ್‌ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ” ಎಂದರು.

“ಸೇವಾ ಸಿಂಧು ಪೋರ್ಟಲ್‌ನಲ್ಲೂ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ ಪಡೆಯಬಹುದು. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಅಲ್ಲಿಯವರೆಗೂ ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಿವಾರ್ಡ್ ಯೋಜನೆ | ವಿಶ್ವಬ್ಯಾಂಕ್ ತಂಡದೊಂದಿಗೆ ವಿಸ್ತೃತ ಚರ್ಚೆ

“ಈ ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಬಿಜೆಪಿ ಶಕ್ತಿಹೀನವಾಗಿದೆ. ಏಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ” ಎಂದರು.

“ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. 194,50,13,686 ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ವಿತರಿಸಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...