ಉಡುಪಿ | ಜಿಲ್ಲೆಯಲ್ಲಿ ಹೊಸ 12 ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳು ದಾಖಲು : ಟಿ. ಶ್ಯಾಮ ಭಟ್

Date:

ಮಾನವ ಹಕ್ಕುಗಳ ಪರಿಧಿ ಅತ್ಯಂತ ವ್ಯಾಪಕವಾಗಿದ್ದು, ಅದು ನಾಗರಿಕ, ರಾಜಕೀಯ, ಸಾಂಸ್ಕೃತಿಕ ಹಾಗೂ ಆರ್ಥಿಕ ಹಕ್ಕುಗಳನ್ನು ಒಳಗೊಂಡಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ. ಶ್ಯಾಮ ಭಟ್ ಹೇಳಿದರು.

ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಹಾಗೂ ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು, ಶಿಕ್ಷಣ ಹಾಗೂ ಉದ್ಯೋಗದ ಆಯ್ಕೆಯ ಹಕ್ಕು, ದೇಶದ ಯಾವುದೇ ಭಾಗಕ್ಕೆ ತೆರಳಿ ವಾಸಿಸುವ ಹಕ್ಕು, ಆತ್ಮಸಾಕ್ಷಿ, ನಂಬಿಕೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕುಗಳಾಗಿವೆ ಎಂದು ಹೇಳಿದರು.

ಈ ಮಹತ್ತರ ಚಿಂತನೆಯ ಆಧಾರದ ಮೇಲೆ ಮಾನವ ಹಕ್ಕುಗಳ ರಕ್ಷಣೆ ಮತ್ತು ಪರಿಣಾಮಕಾರಿ ಜಾರಿಗೆ 1993ರ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆಯಡಿ ರಾಷ್ಟ್ರೀಯ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯ ಮತ್ತು ಅದರ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದ್ದು, ಯಾವುದೇ ಕಚೇರಿ ಅಥವಾ ಸಂಸ್ಥೆಯಿಂದ ಮಾನವ ಹಕ್ಕುಗಳ ಉಲ್ಲಂಘನೆ ನಡೆದರೆ ಪೀಡಿತರು ಅಥವಾ ಅವರ ಪರವಾಗಿ ಯಾರಾದರೂ ಆಯೋಗವನ್ನು ಸಂಪರ್ಕಿಸಿ ನ್ಯಾಯ ಪಡೆಯಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2007ರಲ್ಲಿ ರಾಜ್ಯದಲ್ಲಿ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಗಿದ್ದು, ಅಂದಿನಿಂದ 2023ರವರೆಗೆ ನಿರಂತರ ವಾಗಿ ಕಾರ್ಯನಿರ್ವಹಿಸಿತ್ತು. ಸರಕಾರದಿಂದ ನೇಮಕಗೊಂಡ ಆಯೋಗದ ಅಧ್ಯಕ್ಷ ನಾರಾಯಣ ಸ್ವಾಮಿ ಅವರು ಲೋಕಪಾಲ ಹುದ್ದೆಗೆ ನೇಮಕಗೊಂಡ ಕಾರಣ, ಇದೀಗ ತಾನು ಆಯೋಗದ ಹಂಗಾಮಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತಿದ್ದೇನೆ. ಸುಮಾರು 8500 ಪ್ರಕರಣಗಳು ಬಾಕಿ ಇದ್ದವು. ಪ್ರಸ್ತುತ ಅವುಗಳನ್ನು ಹಂತ ಹಂತವಾಗಿ ಕಡಿಮೆ ಮಾಡುವ ಕಾರ್ಯ ನಡೆಯುತ್ತಿದೆ. ಈಗಲೂ ಸುಮಾರು 3500 ಪ್ರಕರಣಗಳು ಬಾಕಿ ಇದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 8 ಪ್ರಕರಣಗಳನ್ನು ಜಿಲ್ಲೆ ಮಟ್ಟದಲ್ಲಿಯೇ ಇತ್ಯರ್ಥಗೊಳಿಸಲಾಗುವುದು. 1 ಪ್ರಕರಣ ರಾಜ್ಯ ಮಟ್ಟದಲ್ಲಿ ವಿಚಾರಣೆಗೊಳಪಡಬೇಕಾಗಿದೆ. ಇದೇ ವೇಳೆ 12 ಹೊಸ ಪ್ರಕರಣಗಳು ದಾಖಲಾಗಿದ್ದು, ಸಂಬಂಧಿತ ಅಧಿಕಾರಿಗಳಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದೂರು ಸಲ್ಲಿಸಲು ದೂರುದಾರರು ನೇರವಾಗಿ ಬರಲೇಬೇಕೆಂಬ ನಿಯಮವಿಲ್ಲ. ಮಾಧ್ಯಮಗಳಲ್ಲಿ ಅಥವಾ ಸಾರ್ವಜನಿಕ ವಲಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಬೆಳಕಿಗೆ ಬಂದರೂ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಇದಲ್ಲದೆ, ಮಾನವ ಹಕ್ಕುಗಳ ಹೆಸರಿನಲ್ಲಿ ಕೆಲವು ಸಂಘ ಸಂಸ್ಥೆಗಳು ಕಾನೂನಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅವುಗಳ ಮೇಲೂ ಪರಿಶೀಲನೆ ನಡೆಯಲಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕಚೇರಿ ಇಲ್ಲದಿರುವುದರಿಂದ ನಾಗರಿಕರು ನೇರವಾಗಿ ಬೆಂಗಳೂರಿನ ಆಯೋಗ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಟಿ. ಶ್ಯಾಮ ಭಟ್ ಹೇಳಿದರು.

ಇಂದು ಆಯೋಗದ ವತಿಯಿಂದ ಜಿಲ್ಲೆಗಳ ಪ್ರವಾಸದ ಭಾಗವಾಗಿ ಉಡುಪಿ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಯೋಗದ ಸದಸ್ಯ ಎಸ್.ಕೆ ವಂಟಿಗೋಡಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...