ಉಡುಪಿ | ಯತ್ನಾಳ್ ಒಬ್ಬ ಮೂರ್ಖ ಅವಿವೇಕಿ ಆತನನ್ನು ಜೈಲಿಗಟ್ಟಿ : ಶ್ಯಾಮರಾಜ್ ಬಿರ್ತಿ

Date:

ಜಾತ್ಯಾತೀತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಸಂವಿಧಾನದ ಅಡಿಯಲ್ಲಿ ಗೆದ್ದು ಬಂದ ಜನಪ್ರತಿಧಿ ಒಂದು ಧರ್ಮ ಮತ್ತು ಚಾಮುಂಡೇಶ್ವರಿ ದೇವಿಯ ಆಚರಣೆಯಲ್ಲಿ ದಲಿತರಿಗೆ ಅವಮಾನ ಮಾಡಿ ಹೇಳಿಕೆ ನೀಡುತ್ತಿರುವುದು ಆತನ ಮೆದುಳಿನಲ್ಲಿ ಹೊಲಸು ತುಂಬಿ ಬುದ್ಧಿ ಭ್ರಮಣೆಯಾಗಿರುವ ಸಂಕೇತ. ತಾವು ಸಂವಿಧಾನದ ಪ್ರಕಾರ ಆಯ್ಕೆಯಾಗಿ ಜನಪ್ರತಿನಿಧಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೀರಿ ಎಂಬುದು ನೆನಪಿರಲಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚಾಮುಂಡಿ ದೇವಿಗೆ ಹೂ ಹಾಕುವವರು ಸನಾತನ ಧರ್ಮದವರೇ ಆಗಬೇಕು, ಒಬ್ಬ ದಲಿತ ಮಹಿಳೆಗೆ ಹೂ ಹಾಕುವ ಅಧಿಕಾರ ಇಲ್ಲಾ ಅಂತಾ ಯಾವ ಸಂವಿಧಾನದಲ್ಲಿ ಬರೆದಿದೆ ಯತ್ನಾಳ್ ರವರೇ, ಚಾಮುಂಡೇಶ್ವರಿಗೆ ಅವಮಾನ ಅಲ್ಲಾ ದಲಿತರಿಗೆ ಅವಮಾನ ಮಾಡಿದ ತಮ್ಮ ರಾಜಕೀಯ ಅಂತ್ಯ ಆರಂಭವಾಗಿದೆ. ಇದೇ ರೀತಿಯ ವರ್ತನೆ ಮುಂದುವರಿಸಿದರೆ ತಮ್ಮ ರಾಜಕೀಯ ಜೀವನ ನಿರ್ನಾಮ ಆಗುವುದರಲ್ಲಿ ಸಂಶಯವಿಲ್ಲಾ ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ದಲಿತ ಮಹಿಳೆಯರಿಗೆ ಅವಮಾನ ಮಾಡಿದ ಯತ್ನಾಳ್ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ವಯ ಸುಮೋಟೋ ಕೇಸು ದಾಖಲಿಸಿ ಜೈಲಿಗಟ್ಟಬೇಕು. ಇಲ್ಲವಾದರೆ ಈ ಬಚ್ಚಲು ಬಾಯಿ ಇನ್ನು ಮುಂದೆಯೂ ದಲಿತರಿಗೆ ಅವಮಾನ ಮುಂದುವರಿಸುವ ಅಪಾಯವಿದೆ. ಈ ದೇಶದ ಮೂಲನಿವಾಸಿಗಳ ಸುದ್ದಿಗೆ ಬಂದರೆ ತಕ್ಕ ಪರಿಣಾಮ ಎದುರಿಸಬೇಕಾದೀತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...