ಉಡುಪಿ | ನಾಳೆಯಿಂದ ಒಳಮೀಸಲಾತಿಗಾಗಿ ಸಮೀಕ್ಷೆ ಆರಂಭ, ಆದಿದ್ರಾವಿಡ ಬಾಂಧವರು ಇತ್ತ ಗಮನಿಸಿ

Date:

ಮೇ 5 ರಿಂದ ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಯವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿ ಆರಂಭವಾಗಲಿದ್ದು, ಉಡುಪಿ ಜಿಲ್ಲೆಯ ಆದಿದ್ರಾವಿಡರಿಗೆ ಪರಿಶಿಷ್ಟ ಜಾತಿ ಆದಿದ್ರಾವಿಡ ಎಂದು ಜಾತಿ ಪ್ರಮಾಣ ಪತ್ರ ನೀಡಲಾಗಿದ್ದು, ಈಗ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ನಾಳೆಯಿಂದ ಆರಂಭವಾಗಲಿದ್ದು ಆದಿದ್ರಾವಿಡ ಜಾತಿ ಪ್ರಮಾಣ ಪತ್ರ ಪಡೆದವರು ಅನಿವಾರ್ಯವಾಗಿ ಉಪಜಾತಿ ಯನ್ನು ಸೂಚಿಸಬೇಕಾದ ತುರ್ತು ಬಂದೊದಗಿದೆ, ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿನ 101 ಜಾತಿಗಳ ಪೈಕಿ ಆದಿ ಆಂಧ್ರ, ಆದಿ ಕರ್ನಾಟಕ, ಆದಿದ್ರಾವಿಡ ಈ ಮೂರು ಜಾತಿಗಳನ್ನು ಬಿಟ್ಟು ಉಳಿದ 98 ಜಾತಿಗಳ ಪೈಕಿ ಒಂದನ್ನು ನಮೂದಿಸ ಬಹುದಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಹೇಳಿದ್ದಾರೆ‌

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉಡುಪಿ ಜಿಲ್ಲೆಯ ಆದಿದ್ರಾವಿಡ ಜಾತಿಯವರು ಜನಗಣತಿಗೆ ಬಂದವರ ಬಳಿ ಜಾತಿ ಆದಿದ್ರಾವಿಡ ಎಂದು ಸೂಚಿಸಿದಾಗ, ಉಪಜಾತಿಯ ಕಾಲಂ ತೆರೆದುಕೊಳ್ಳುತ್ತದೆ. ಅಲ್ಲಿ ಉಳಿದ 98 ಜಾತಿಗಳ ಪೈಕಿ ಪಾಣ, ಪರವ, ಪಂಬದ, ಬತ್ತಡ, ಕೂಸ, ದಿಕ್ಕ, ಮುಂಡಾಳ, ಹೀಗೆ ಹಲವಾರು ಉಪಜಾತಿಗಳಿವೆ.

ಉಡುಪಿ ಜಿಲ್ಲೆಗೆ ಸಂಬಂಧಪಟ್ಟಂತೆ ಆದಿದ್ರಾವಿಡರಿಗೆ ಬಬ್ಬುಸ್ವಾಮಿಯ ದೈವ ಆರಾಧಕರಿಗೆ ನಾನು ಮೇಲೆ ಸೂಚಿಸಿದ ಉಪಜಾತಿಗಳ ” ಮುಂಡಾಳ ” ಎಂಬ ಉಪಜಾತಿಯು ಹೆಚ್ಚು ಸಮರ್ಪಕ ಅನಿಸುತ್ತದೆ. ಒಂದುವೇಳೆ ಉಪಜಾತಿ ಸೂಚಿಸದೇ ಇದ್ದಲ್ಲಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆಯು ಅಪೂರ್ಣವಾಗುತ್ತದೆ. ಮುಂದೊಂದು ದಿನ ಆಯೋಗವು ಪುನಃ ಉಪಜಾತಿಯನ್ನು ಕಡ್ಡಾಯವಾಗಿ ಸೂಚಿಸಲು ತಾಕೀತು ಮಾಡಬಹುದು. ಉಪಜಾತಿ ಸೂಚಿಸದ ವ್ಯಕ್ತಿಯ ಪುನಃ ಸಮೀಕ್ಷೆಗೆ ಸೂಚಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲಾ ಗೊಂದಗಳಿರುವುದರಿಂದ ಆದಿದ್ರಾವಿಡ ಜಾತಿ ಪ್ರಮಾಣ ಪತ್ರ ಪಡೆದ ನಾನು ಮುಂಡಾಳ ಎಂದು ಉಪಜಾತಿ ನಮೂದಿಸುತ್ತೇನೆ. ಅಂತೆಯೇ ಪ್ರತಿಯೊಬ್ಬರೂ ವೈಯಕ್ತಿಕವಾಗಿ ತಮ್ಮ ತಮ್ಮ ಉಪಜಾತಿಯನ್ನು ಸೂಚಿಸಲು ಸ್ವತಂತ್ರರಾಗಿರುತ್ತಾರೆ. ಉಪಜಾತಿಯನ್ನು ನಮೂದಿಸುವುದು, ಆಯ್ಕೆ ಮಾಡಿಕೊಳ್ಳುವುದು ಅವರವರ ಸ್ವಂತಕ್ಕೆ ಬಿಟ್ಟ ವಿಚಾರ.
ಆದರೆ ಉಪಜಾತಿ ನಮೂದಿಸದೇ ಇರುವುದು ಸೂಕ್ತವಲ್ಲಾ. ಈ ಸಮಸ್ಯೆ ಆದಿದ್ರಾವಿಡ ಎಂದು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಹೆಚ್ಚು ಕಳವಳಕಾರಿ ಯಾಗಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...