ಬೀದರ್‌ | ಶರಣರ ಕಲ್ಯಾಣ ಸಜ್ಜನರ ತವರು ಕ್ಷೇತ್ರವಾಗಲಿ : ಬಸವರಾಜ ಪಾಟೀಲ್‌ ಸೇಡಂ

Date:

ಭೂಲೋಕದ ಸಜ್ಜನರ ತವರು ಕಲ್ಯಾಣವಾಗಲಿ, ಜಗತ್ತಿನ ಜನ ಕಲ್ಯಾಣಕ್ಕೆ ಬರುವಂತಾಗಲಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ ಸೇಡಂ ಹೇಳಿದರು.

ಬಸವಕಲ್ಯಾಣದ ಹರಳಯ್ಯನವರ ಗವಿಯಲ್ಲಿ ನಡೆಯುತ್ತಿರುವ ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ ದಿನಾಚರಣೆಯಲ್ಲಿ ಭಾನುವಾರ ಸಂಜೆ ನಡೆದ ಜಗತ್ತಿನ ಮೊದಲ ಪ್ರಜಾತಂತ್ರದ ಸಂಸತ್ತು ಅನುಭವ ಮಂಟಪ ಕುರಿತು ಗೋಷ್ಠಿ ಉದ್ಘಾಟಿಸಿ ಮಾತನಾಡಿ,”ನಡೆ-ನುಡಿ ಪರಿಸರದಿಂದ ಮನ -ಮನೆಗಳು ಅನುಭವ ಮಂಟಪವಾಗಲಿ, ಮನುಷ್ಯತ್ವದ ಮಂತ್ರ ನೀಡಿದ ಬಸವಣ್ಣನವರ ಪವಿತ್ರ ಭೂಮಿ ಕಲ್ಯಾಣ ವಿಶ್ವದ ಜನರ ಸೆಳೆಯುವ ಶ್ರದ್ಧಾ ಕೇಂದ್ರವಾಗಲಿ” ಎಂದು ಆಶಿಸಿದರು.

ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪಕ್ಕೆ ಆಂತರಿಕವಾಗಿ ಜೀವ ತುಂಬಬೇಕು. ಕಲ್ಯಾಣದಲ್ಲಿ ಅಡಗಿರುವ ತತ್ವಗಳು ಎಲ್ಲರ ಬದುಕಿಗೆ ದಾರಿದೀಪವಾಗಲಿ, ಸತ್ಯಕ್ಕೆ ಸಮೀಪವಾಗಿ ಬದುಕಬೇಕು, ಮಾತಿನಲ್ಲಿ ವ್ಯವಹಾರದಲ್ಲಿ ಇದನ್ನು ಕಾಣಬೇಕು. ಮುಂದಿನ ವರ್ಷಗಳಲ್ಲಿ ಬಸವಕಲ್ಯಾಣ ಸಜ್ಜನರ ತವರಾಗಬೇಕು” ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇತೃತ್ವ ವಹಿಸಿದ ಡಾ. ಗಂಗಾಂಬಿಕಾ ಅಕ್ಕ ಮಾತನಾಡಿ, “ಮ್ಯಾಗ್ನ ಕಾರ್ಟ್ ಒಪ್ಪಂದಕ್ಕಿಂತ ಮೊದಲೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಇಡೀ ಜಗತ್ತಿಗೆ ಪ್ರಜಾಪ್ರಭುತ್ವದ ಅರಿವು ಮೂಡಿಸಿದ್ದಾರೆ. ಅನುಭವ ಮಂಟಪದ ಮೂಲಕ ಹೊರ ಬಂದ ತತ್ವಗಳು ಆಚರಣೆಯಲ್ಲಿ ಬರುವಂತಾಗಬೇಕು” ಎಂದರು.

ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಜಿ.ಮುಳೆ. ವಿಶ್ರಾಂತ ಜಿಲ್ಲಾನ್ಯಾಯಾಧೀಶ ಯೋಗೇಶ ಕರಗುದರಿ, ಪ್ರಾಚಾರ್ಯರಾದ ಡಾ. ಬಸವರಾಜ ಯವಳೆ, ಸುರೇಶ ಅಕ್ಕಣ್ಣ, ರಾಚಯ್ಯಾ ಸ್ವಾಮಿ, ಗುತ್ತಿಗೆದಾರ ಚನ್ನಬಸವ ಬಳತೆ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಮಾರ್ಥಂಡ ಜೋಶಿ, ಪ್ರಮುಖರಾದ ಪ್ರಭು ವಸ್ಮತೆ, ಶಿವಶಂಕರ ಟೋಕರೆ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಡಾ. ಮಹೇಶ ಪಾಟೀಲ, ಮಲ್ಲಿಕಾರ್ಜುನ ಮೇತ್ರೆ, ನರಸಿಂಗರಾವ ಗದಲೇಗಾಂವ, ಮಲ್ಲಿಕಾರ್ಜುನ ಪಾಟೀಲ, ಶಿವಕುಮಾರ ಖಪಲೆ, ಸಂಗೀತಾ ಮಡಿವಾಳ, ಸುಲೋಚನಾ ಗುದಗೆ ಸೇರಿದಂತೆ ಇತರರಿದ್ದರು. ಸಂತೋಷ ಮಡಿವಾಳ ಸ್ವಾಗತಿಸಿದರು, ಉಪನ್ಯಾಸಕ ಅಂಬ್ರಿಷ್ ಭೀಮಾಣೆ ನಿರೂಪಿಸಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಪ್ರಕಟ; 52 ಅಭ್ಯರ್ಥಿಗಳು ಘೋಷಣೆ

ಇಂಡಿಯನ್ ಐಡಲ್ ಫೇಮ್ ಗೆ ಆಯ್ಕೆಯಾದ ಬೀದರ್‌ನ ಸಂಗೀತ ಕಲಾವಿದೆ ಶಿವಾನಿ ಶಿವದಾಸ ಸ್ವಾಮಿ ಅವರ ಕಂಠದಿಂದ ಮೂಡಿ ಬಂದ ವಚನಗಳು ಸೇರಿದ ಜನರ ಮನ ತಣಿಸಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...