ಉಡುಪಿ | ಅಂತರ್ ಧರ್ಮಿಯ ಮದುವೆಗಳ ಬಗ್ಗೆ ದುರುದ್ದೇಶಪೂರಿತ ಅಪಪ್ರಚಾರ ಸಲ್ಲದು

Date:

ದೇಶದಲ್ಲಿ ಅಂತರ್ ಧರ್ಮಿಯ ಮದುವೆಗಳು ಸಾಮಾನ್ಯವಾಗಿ ನಿರಂತರ ನಡೆಯುತ್ತವೆ. ಮುಸ್ಲಿಂ ಹೆಣ್ಣುಮಕ್ಳಳೂ ಕೂಡ ಅವರ ಇಚ್ಚಾನುಸಾರವಾಗಿ ಹಿಂದು ಮತ್ತು ಕ್ರಿಸ್ಟಿಯನ್ ಹುಡುಗರ ಜೊತೆ ಮದುವೆ ಆಗುವುದೂ ಇದೆ. ಬಲಾತ್ಕಾರವಾಗಿ ಇಂತಹ ಘಟನೆಗಳು ನಡೆದರೆ ಅದು ಖಂಡನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದು ಅರ್ಥದಲ್ಲಿ ಹುಡುಗಿಯ ಅಥವಾ ಮನೆಯವರ ಒಪ್ಪಿಗೆ ಇಲ್ಲದೆ ಮದುವೆ ಆಗುವುದು ಸಹ ಸಮಾಜಕ್ಕೆ ಆರೋಗ್ಯಕರ ಬೆಳವಣಿಗೆ ಅಲ್ಲ, ಇಂತಹ ಪ್ರಕರಣಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಮನವೊಲಿಸಿ ಅವರನ್ನು ವಾಪಾಸು ಮನೆಗೆ ಕಳಿಸುವ ಪ್ರಯತ್ನ ಮಾಡುವುದು ಒಳ್ಳೆಯದು, ಇನ್ನು ಉಡುಪಿಯಲ್ಲಿ ನಡೆದ ಅಂತರ್ ಜಾತಿಯ ಪ್ರೇಮ ಪ್ರಕರಣದಲ್ಲಿ ಅಂತಹ ಯಾವುದೇ ವಿಷಯ ಅಥವಾ ಸಂಘ ಪರಿವಾರದವರು ಹೇಳುವ ರೀತಿಯ ಲವ್ ಜಿಹಾದ್ ಎಂಬ ಯಾವುದೇ ಕಪೋಲಕಲ್ಪಿತ ಸಂಚು ನಡೆದಿಲ್ಲ. ಆ ಹೆಣ್ಣುಮಗಳು, ತನ್ನ ಒಪ್ಪಿಗೆಯ ಮೇರೆಗೆ ಹುಡುಗನೊಂದಿಗೆ ಹೋಗಿದ್ದಾಳೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಅದೂ ಅಲ್ಲದೆ, ಈ ವಿಷಯ ಹೈಕೋರ್ಟ್ ನಲ್ಲಿ ಇರುವುದರಿಂದ ಕೋರ್ಟ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ಅದನ್ನು ಗೌರವಿಸಬೇಕು.ಅದನ್ನು ಬಿಟ್ಟು ರಾಜಕೀಯ ಲಾಭ ಪಡೆಯಲು ಸಂಘ ಪರಿವಾರ ಮತ್ತು ಬಿಜೆಪಿ ಮುಸ್ಲಿಂ ವಿರೋಧಿ ಕಥೆಗಳನ್ನು ಕಟ್ಟಿ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಕಾರ್ಯ ಕೈಬಿಡಬೇಕು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...