ಪ್ರಚೋದನಾಕಾರಿ ಪೋಸ್ಟ್​ ಹಂಚಿಕೆ: ಪೊಲೀಸರ ವಶಕ್ಕೆ ವಿಎಚ್‌ಪಿ ಮುಖಂಡ ಶರಣ್​ ಪಂಪ್​ವೆಲ್

Date:

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ವಿಶ್ವಹಿಂದು ಪರಿಷತ್ ಮುಖಂಡ ಆರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ, ಬಿಜೆಪಿ ಶಾಸಕ ವೇದವಾಸ್ಯ ಕಾಮತ್ ಅವರು ಗುಂಪು ಕಟ್ಟಿಕೊಂಡು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿ ದಾಂಧಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್‌ ಮುಖಂಡರೊಬ್ಬರ ದ್ವೇಷ ಭಾಷಣದ ತುಣುಕನ್ನು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದರು. ಆ ಪೋಸ್ಟ್‌ಅನ್ನು ಶರಣ್​ ಪಂಪ್​ವೆಲ್​ ಶೇರ್​ ಮಾಡಿದ್ದರು. ಈ ಹಿನ್ನಲೆಯಲ್ಲಿ, ವಿಕಾಸ್‌ ಪುತ್ತೂರು ಮತ್ತು ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ​ ದಾಖಲಿಸಿಕೊಂಡಿದ್ದಾರೆ. FIR ದಾಖಲಿಸಿದ್ದಾರೆ.

ಈ ಇಬ್ಬರೂ ಆರೋಪಿಗಳು ಹಂಚಿಕೊಂಡಿದ್ದ ವಿಡಿಯೋ ತುಣುಕಿನಲ್ಲಿ; ಆರ್‌ಎಸ್‌ಎಸ್‌ ಮುಖಂಡ “ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45,700 ಮಕ್ಕಳು ಹುಟ್ಟಿದ್ದಾರೆ. ಆ ಪೈಕಿ 23,200 ಮಕ್ಕಳು ಹಿಂದುಗಳು. 22,200 ಮಕ್ಕಳು ಅಲ್ಪಸಂಖ್ಯಾತರ ಮಕ್ಕಳು. ನಮ್ಮ ಜಿಲ್ಲೆಯ 78% ಜನಸಂಖ್ಯೆಗೆ ಹುಟ್ಟಿದ ಮಕ್ಕಳು 23,000. ಆದರೆ, 22% ಇರುವ ಸಮುದಾಯಕ್ಕೆ ಹುಟ್ಟಿದ್ದ ಮಕ್ಕಳು 22,000. ಹೀಗೆ ಆದರೆ, ಮುಂದಿನ 15 ವರ್ಷಗಳಲ್ಲಿ ನಮ್ಮ ಊರು ಎಲ್ಲಿ ಹೋಗುತ್ತೆ? ಆಗ ದೇಶ, ಸಮಾಜ ಉಳಿಯಲು ಸಾಧ್ಯವೇ?” ಎಂದು ದ್ವೇಷ ಭಾಷಣ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಕಾಂಗ್ರೆಸ್‌ ಸರ್ಕಾರಕ್ಕೆ 2.5 ವರ್ಷ: ಮಾಡಿದ್ದೇನು? ಮಾಡಬೇಕಿರುವುದೇನು?

ಶರಣ್​ ಪಂಪ್​ವೆಲ್​ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಆತನನ್ನು ಡಿಸಿಪಿ ಮಿಥುನ್ ಎದುರು ಹಾಜರುಪಡಿಸಿದ್ದಾರೆ. ಶರಣ್ ಪಂಪ್‌ವೆಲ್‌ನಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು, ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು, ಆತನನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಬಿಜೆಪಿ ಶಾಸಕ ಮೇದವ್ಯಾಸ ಕಾಮತ್ ಮತ್ತು ಅವರ ಬೆಂಬಲಿಗರು ಕದ್ರಿ ಪೊಲೀಸ್ ಠಾಣೆ ಬಳಿ ಜಮಾಯಿಸಿ, ದಾಂಧಲೆ ನಡೆಸಿದ್ದಾರೆ. ‘ಆಪಾದಿತ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದಾರೆ. ಹೀಗಿದ್ದರೂ, ಶರಣ್ ಪಂಪ್​ವೆಲ್ ಅವರನ್ನೇ ಯಾಕೆ ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಪ್ರಕರಣವನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...