ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೆ.ನಾಗಣ್ಣ ಗೌಡ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.೨೦ ರಿಂದ ಅನ್ವಯವಾಗುವಂತೆ ಪ್ರಸ್ತುತ ಖಾಲಿ
ಇರುವ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಶಶಿಧರ ಕೋಸಂಬೆ ಅವರನ್ನು ರಾಜ್ಯಪಾಲರ ಆದೇಶಾನುಸಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದವರಾದ ಶಶಿಧರ ಕೋಸಂಬೆ ಅವರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನೇ ಸರ್ಕಾರ ಹಂಗಾಮಿ ಅಧ್ಯಕ್ಷರನ್ನಾಗಿ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರ ನೇಮಕ ಮಾಡಿದೆ.

ಇದನ್ನೂ ಓದಿ : ಬೀದರ್ | ಜನಮನ ಸೆಳೆದ ʼಶಿವಶರಣ ಹರಳಯ್ಯʼ ನಾಟಕ





