ಮಾದಿಗ ಸಮುದಾಯದ ಸಾಮಾಜಿಕ ನ್ಯಾಯ, ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗಾಗಿ ದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ, ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.
“ಅವರ ನಾಯಕತ್ವ ನಮ್ಮೆಲ್ಲರಿಗೂ ದಿಕ್ಕು ತೋರಿಸುತ್ತಿದೆ. ಅವರ ಹುಟ್ಟು ಹಬ್ಬದ ಅಂಗವಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿರುವುದು ನಮಗೆ ತೃಪ್ತಿ ತಂದಿದೆ” ಎಂದು ಎಂಆರ್ಪಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ ಎಂ ದೇವರಾಜ್ ಹೇಳಿದರು.
ತಾಲೂಕಿನ ಮಾದಿಗ ದಂಡೋರ ಸಂಘಟನೆಯ ಪದಾಧಿಕಾರಿಗಳು, ವಿವಿಧ ದಲಿತ ಸಂಘಟನೆಗಳ ಸದಸ್ಯರು ಸೇರಿ, ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೇಕ್ ಕತ್ತರಿಸಿ, ಕೂಲಿಕಾರ್ಮಿಕರಿಗೆ ಅನ್ನದಾನ ಮಾಡುವ ಮೂಲಕ ಮೌಲ್ಯಾಧಾರಿತ ಸೇವೆಯ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.
80ರ ದಶಕದಲ್ಲಿ ಮಾದಿಗ ಜನಾಂಗ ತಮ್ಮ ಜಾತಿ ಎಂದು ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದವರು ಇಂದು ಧೈರ್ಯದಿಂದ ತಮ್ಮ ಜಾತಿಯನ್ನು ಮಾದಿಗ ಎಂದು ಎದೆ ತಟ್ಟಿಕೊಂಡು ಹೇಳುವಂತೆ ಮಾಡಿದ್ದು ಮಂದ ಕೃಷ್ಣ ಮಾದಿಗ.
ಇದನ್ನೂ ಓದಿ: ಶಿಡ್ಲಘಟ್ಟ | ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ; 2 ಕೆಜಿ ಗಾಂಜಾ ವಶಕ್ಕೆ
ಸಂಘಟಕರಾದ ನಾಗನರಸಿಂಹ, “ಮಾದಿಗ ಸಮುದಾಯದ ಒಳಗಿನ ಎಬಿಸಿಡಿ ವರ್ಗೀಕರಣವನ್ನು ರಾಷ್ಟ್ರ ಮಟ್ಟದಲ್ಲಿ ಪ್ರಸ್ತಾಪಿಸಿ ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕೆಂಬ ಆಲೋಚನೆಯಿಂದ ಒಳಮಿಸಿಲಾತಿಯ ಹೋರಾಟಕ್ಕಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿದಂತವರು, ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮೆಲ್ಲರಿಗೂ ಸಂತೋಷ ತಂದಿದೆ” ಎಂದರು.
ಈ ಸಂದರ್ಭದಲ್ಲಿ ಕೆ.ನರಸಿಂಹಮೂರ್ತಿ, ಡಿ ಕೃಷ್ಣಪ್ಪ, ತಾತಳ್ಳಿ ಚಲಪತಿ, ಕೆ ನಾರಾಯಣಸ್ವಾಮಿ, ಮಂಜುನಾಥ್ ಅಲಸೂರು, ಭಕ್ತರಹಳ್ಳಿ ಡಾ. ವಿಶ್ವನಾಥ್, ಚನ್ನಹಳ್ಳಿ ದೇವರಾಜ್, ಲೋಕೇಶ್, ವೇಣುಗೋಪಾಲ್, ಗೋಕುಲ್, ನರಸಿಂಹಪ್ಪ, ನಾರಾಯಣಸ್ವಾಮಿ, ಪ್ರಕಾಶ್, ಅಶೋಕ್, ಡಾ.ಶಾಮ್ ರಾಜ್, ಗುರುಮೂರ್ತಿ, ರವಿಶಂಕರ್, ಚನ್ನಕೇಶವ, ವಸಂತ್, ಸುಲದೇನಹಳ್ಳಿ ವೆಂಕಟರಾಯಪ್ಪ ಹಾಗೂ ದಲಿತ ಮುಖಂಡರು ಇದ್ದರು.





