ಶಿಡ್ಲಘಟ್ಟ | ಪೌರಾಯುಕ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಪೌರಕಾರ್ಮಿಕರ ಆಗ್ರಹ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಕಾಂಗ್ರೆಸ್ ಮುಖಂಡರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪ್ರಾಣ ಬೆದರಿಕೆ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಜೀವ್ ಗೌಡರ ವಿರುದ್ಧ ಚಿಂತಾಮಣಿ ಪೌರಕಾರ್ಮಿಕರು ಬೀದಿಗಿಳಿದು ಮೌನ ಪ್ರತಿಭಟನೆ ನಡೆಸಿದರು.

ಚಿಂತಾಮಣಿ ನಗರಸಭೆಯಲ್ಲಿ ಜಮಾವಣೆಗೊಂಡ ನಗರಸಭೆ ಪೌರಾಯುಕ್ತ ಜಿ ಎಚ್ ಚಲಪತಿ ನೇತೃತ್ವದಲ್ಲಿ ಅಧಿಕಾರಿಗಳು ಸಿಬ್ಬಂದಿ ಮತ್ತು ಪೌರಕಾರ್ಮಿಕರು ಮೌನ ಮೆರವಣಿಗೆಯೊಂದಿಗೆ ತಹಶೀಲ್ದಾರ್ ಕಚೇರಿಯವರೆಗೂ ತೆರಳಿ ತಹಶೀಲ್ದಾರ್ ಸುದರ್ಶನ ಯಾದವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಪೌರ ಸೇವಾ ಅಧಿಕಾರಿಗಳ ಸಂಘದ ಕಾರ್ಯದರ್ಶಿ ಹಾಗೂ ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ ಎನ್ ಚಲಪತಿ ಮಾತನಾಡಿ, “ಶಿಡ್ಲಘಟ್ಟ ನಗರದ ನೆಹರೂ ಮೈದಾನದಲ್ಲಿ ಕಲ್ಟ್ ಚಲನಚಿತ್ರದ ಪ್ರಚಾರ ಸಭೆ ಹಮ್ಮಿಕೊಂಡಿದ್ದು, ಕೋರ್ಟ್ ವೃತ್ತದಲ್ಲಿ ರಸ್ತೆಗೆ ಅಡ್ಡಲಾಗಿ ಸಿನಿಮಾ ಪ್ರಚಾರದ ಬ್ಯಾನರ್‌ಗಳನ್ನು ಅಳವಡಿಸಿದ್ದರು ಎನ್ನಲಾಗಿದೆ. ಈ ರಸ್ತೆಯಲ್ಲಿ ಸಾಗುವ ವಾಹನಗಳಿಗೆ ಬ್ಯಾನರ್ ಅಡ್ಡಿಯಾಗಿರುವುದಾಗಿ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆಯ ಸಿಬ್ಬಂದಿ ತೆರವುಗೊಳಿಸಿದ ಬ್ಯಾನರ್ ಅನ್ನು ಕಚೇರಿಗೆ ತಂದು ಇಡಲಾಗಿತ್ತು. ಈ ಬಗ್ಗೆ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತೆ ಅಮೃತ ಅವರು ಮಾಹಿತಿಯನ್ನೂ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪೌರಾಯುಕ್ತೆಗೆ ಬೆದರಿಕೆ

“ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಕೆಪಿಸಿಸಿ ರಾಜ್ಯ ಸಂಯೋಜಕ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡರು ಬ್ಯಾನರ್ ತೆರವು ಮಾಡಿದ ವಿಚರಕ್ಕೆ ಪೌರಾಯುಕ್ತರ ಫೋನ್‌ಗೆ ಕರೆಮಾಡಿ ಚಪ್ಪಲ್ಲಿಯಲ್ಲಿ ಹೋಡಿಸುವುದಾಗಿ ಹಾಗೂ ಕಚೇರಿಗೆ ಬೆಂಕಿ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸ್ಥಳೀಯ ಶಾಸಕ ಬಿ ಎನ್ ರವಿಕುಮಾರ್ ಅವರಿಗೆ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು, ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಅವರನ್ನೂ ನಿಂದಿಸಿದ್ದಾರೆ” ಎಂದು ಹೇಳಿದರು.

ಪೌರಾಯುಕ್ತೆಗೆ ಬೆದರಿಕೆ 1

ಇದನ್ನು ಓದಿದ್ದೀರಾ..? ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಂದ ನಗರಸಭೆ ಆಯುಕ್ತೆಗೆ ಬೆದರಿಕೆ ದೂರು ದಾಖಲು.

ಬೆದರಿಕೆಗೆ ಶಿಡ್ಲಘಟ್ಟ ನಗರಸಭೆ ಅಧಿಕಾರಿ ಸಿಬ್ಬಂದಿಗಳು ಮತ್ತು ಪೌರಕರ್ಮಿಕರು ಕೆಲಸ ನಿರ್ವಹಿಸಲು ಭಯ ಭೀತರಾಗಿ ಮಾನಸಿಕವಾಗಿ ಕುಗ್ಗಿರುವುದರಿಂದ ಸದರಿ ರಾಜೀವ್ ಗೌಡನನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಕೋರಿದರು. ಬಂಧಿಸುವಲ್ಲಿ ವಿಫಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುವುದಾಗಿ ಪೌರಾಯುಕ್ತ ಜಿ ಎನ್ ಚಲಪತಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...