ಶಿಗ್ಗಾವಿ ಉಪಚುನಾವಣೆ | ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು: ಸಿಪಿಐಎಂ ಕರೆ

Date:

ಕೋಮುವಾದಿ ಬಿಜೆಪಿ ಪಕ್ಷವು ಜನರ ಏಳಿಗೆಗಾಗಿ ಕೆಲಸ ಹಾಗೂ ರಾಜಕಾರಣ ಮಾಡುವ ಬದಲಿಗೆ ಜನರ ಐಕ್ಯತೆ ಸಾಮರಸ್ಯ ಒಡೆಯುವ ಕೋಮು ವಿಭಜಕ ರಾಜಕಾರಣವನ್ನು ಮಾಡುತ್ತಿದೆ. ಇದು ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಎಂದು ಸಿಪಿಐ(ಎಂ) ಹಾವೇರಿ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಪೂಜಾರ್ ಕರೆ ನೀಡಿದರು.

ಹಾವೇರಿ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿಯು ಶಿಗ್ಗಾಂವಿ -ಸವಣೂರು ಉಪ ಚುನಾವಣೆಯಲ್ಲಿ ಕೋಮುವಾದಿ ಪಕ್ಷ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಎಂದು ನಡೆಸುತ್ತಿರುವ ಅಭಿಯಾನದಲ್ಲಿ ಅವರು ಮಾತನಾಡಿದರು.

“ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ದುಡಿಯುವ ಜನರು ಹಾಗೂ ಎಲ್ಲ ನಾಗರಿಕರನ್ನು ತೀವ್ರ ಸಂಕಷ್ಠಕ್ಕೀಡು ಮಾಡಿತ್ತು. ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ ಆರ್ಥಿಕ ನೀತಿಗಳನ್ನು ಅನುಸರಿಸುತ್ತಿವೆ. ಈ ಲೂಟಿಕೋರರ ಲೂಟಿಗೆ ವಿರುದ್ಧವಾಗಿ ನಡೆಯುವ ಪ್ರತಿರೋಧವನ್ನು ಹತ್ತಿಕ್ಕಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002329064

“ಪ್ರಸಕ್ತ ಚುನಾವಣೆಯಲ್ಲಿ ಕಳೆದ ನಾಲ್ಕು ಅವಧಿಯಿಂದ ಬಿಜೆಪಿಯಿಂದ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿ ಕೆಲಸ ಮಾಡಿಲ್ಲ. ಕಳೆದ ಅವಧಿಯಲ್ಲಿ ರಾಜ್ಯ ಸರಕಾರದಲ್ಲಿ ನೀರಾವರಿ ಮಂತ್ರಿ, ಗೃಹ ಮಂತ್ರಿ ಹಾಗೂ ಮುಖ್ಯಮಂತ್ರಿಯೂ ಆಗಿ ಅಧಿಕಾರ ನಡೆಸಿದರೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ. ಈ ಪ್ರದೇಶದ ರೈತ ಕಾರ್ಮಿಕರು ಹಾಗೂ ದುಡಿಯುವ ಜನರ ಬವಣೆಗಳು ಪರಿಹಾರ ಕಾಣಲಿಲ್ಲ. ಶಿಕ್ಷಣ ಉದ್ಯೋಗದ ಸಮಸ್ಯೆಗಳು ಬಿಗಡಾಯಿಸಿ ವಿದ್ಯಾರ್ಥಿ-ಯುವಜನರು, ಮಹಿಳೆಯರು ಬೇಸತ್ತಿದ್ದಾರೆ. ಇದೀಗ ಹಣ ಬಲದಿಂದ ಉಪಚುನಾವಣೆಗೆ ತಮ್ಮ ಮಗ ಉದ್ಯಮಿ ಭರತ್ ಬೊಮ್ಮಾಯಿ ಅವರನ್ನು ಬಿಜೆಪಿಯ ಅಭ್ಯರ್ಥಿಯನ್ನಾಗಿಸಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ” ಎಂದು ಬಸವರಾಜ್ ಪೂಜಾರ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಉಪ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದ ಸೌಹಾರ್ದತೆ ಹಾಗೂ ಜನರ ಬದುಕು ಹಸನಾಗಿಸಲು ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ನಿರ್ಣಾಯಕವಾಗಿ ಸೋಲಿಸುವುದು ಅಗತ್ಯವಾಗಿದೆ. ಬಿಜೆಪಿಯನ್ನು ಸೋಲಿಸಲು ಶಕ್ತವಾದ ಕಾಂಗ್ರೆಸ್ ಪಕ್ಷ ಬಿಟ್ಟರೆ ಅನ್ಯರಿಲ್ಲದ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಸಿಪಿಐಎಂ ಪಕ್ಷವು ಮತದಾರರಲ್ಲಿ ಮನವಿ ಮಾಡುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...