ಶಿವಮೊಗ್ಗ | ಜ.12ರಂದು ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವ

Date:

ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಶಿವಮೊಗ್ಗ ನಗರದ ಬಿ ಎಚ್ ರಸ್ತೆಯಲ್ಲಿರುವ ತಮಿಳು ಶಾಲೆಯ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರದ ಅಂಬೇಡ್ಕರ್ ಭವನದಲ್ಲಿ ಜನವರಿ 12ರಂದು ಸಂಜೆ 5 ಗಂಟೆಗೆ ಉಳಿದ ಕಾರ್ಯಕ್ರಮಗಳು ನಡೆಯಲಿವೆ.

ಈಗಾಗಲೇ ತಮಿಳು ಶಾಲೆಯ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಡಿಕೆ ಹೊಡೆಯುವ ಸ್ಪರ್ಧೆ, ಪಿ ಪಿ ಹೊಡೆಯುವ ಸ್ಪರ್ಧೆ ಮತ್ತು ಪೊಂಗಲ್ ಅಡುಗೆ ಮಾಡುವ ಸ್ಪರ್ಧೆ, ಕಂಠಪಾಠ, ಕ್ರೀಡೆ, ತಿರುಕುರುಳ್ ಅಧ್ಯಯನ ಸ್ಪರ್ಧೆ ಸೇರಿದಂತೆ ಇತರ ಸ್ಪರ್ಧೆಗಳನ್ನು ನಡೆಸಿದ್ದಾರೆ.

ಪ್ರತಿ ವರ್ಷ ಹೀಗೆ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವ ಸಂಸ್ಥೆ ಈ ವರ್ಷ ಅನೇಕ ಕಾರ್ಯಕ್ರಮ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದೇ ರೀತಿ ಜನವರಿ 11ರಂದು ಮಹಿಳೆಯರಿಗೆ ರಂಗೋಲಿ ಹಾಗೂ ಸಂಪ್ರದಾಯಿಕ ಪೊಂಗಲ್ ಸ್ಪರ್ಧೆ ಇಟ್ಟುಕೊಂಡಿದೆ. ಜನವರಿ 12ರ ಸಂಜೆ 5ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೌತ್‌ ಇಂಡಿಯನ್‌ ಅಕಾಡೆಮಿ

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಮಿಳು ಚಲನಚಿತ್ರದ ಹಿನ್ನೆಲೆ ಗಾಯಕಿ “ಅಡ್ರಡ್ರಾ ನಾಕುಮುಖ” ಹಾಡಿನ ಪ್ರಖ್ಯಾತಿ ಕಲೆ ಮಾಮನಿ ‘ಚಿನ್ನ ಪೊನ್ನು’ರವರು ಮತ್ತು ತಂಡದವರಿಂದ ಸಂಗೀತ ರಸದೌತಣ ಕಾರ್ಯಕ್ರಮ ಏರ್ಪಡಿಸಲಾಗಿದೆ. ತಮಿಳಿನ ಖ್ಯಾತ ಹಾಸ್ಯ ನಟರಾದ ಜ಼ೀ ತಮಿಳು ಚಾನೆಲ್‌ನ ಪುಗುಳ್ ಎಡ್ವಿನ್ ತಂಡದಿಂದ ಹಾಸ್ಯ ಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಚಿನ್‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ರಾಜು ಕಪನೂರ್‌ ಸೇರಿ ಐವರ ಬಂಧನ

ಈ ಒಂದು ಕಾರ್ಯಕ್ರಮಕ್ಕೆ ಎಲ್ಲ ತಮಿಳು ಸಮುದಾಯದವರು ಭಾಗವಹಿಸುವಂತೆ ಕೋರಲಾಗಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿರಲಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಆಯೋಜಕರು ಹಾಗೂ ತಮಿಳು ಸಮುದಾಯದ ಮುಖಂಡರು ಇಂದಿನ ಕಾರ್ಯಕ್ರಮದಲ್ಲಿ ಸೌತ್ ಇಂಡಿಯನ್ ಅಕಾಡೆಮಿ ಅಧ್ಯಕ್ಷ ದೊರೆ ಚಿನ್ನಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಆನಂದ್ ಎ ಎನ್ ನೇತೃತ್ವದಲ್ಲಿ ತಮಿಳು ಸಂಘದ ಸದಸ್ಯರು ಹಾಗೂ ಮುಖಂಡರುಗಳಾದ ಶಂಕರ್ ಭೂಪಾಲ್, ರವಿ ಆಚಾರ್, ಬುಲೆಟ್ ಮುರುಗನ್, ಮಸ್ತಾನ್, ಕುಮರೇಶ್, ಉದಯ್ ಇರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...