ಶಿವಮೊಗ್ಗ | ‘ಮಣ್ಣು’ ಪಾಲಾದ ಬೈಪಾಸ್ ರಸ್ತೆಯ ₹56 ಕೋಟಿ ವೆಚ್ಚದ ತಡೆಗೋಡೆ ಕಾಮಗಾರಿ!

Date:

ಶಿವಮೊಗ್ಗ ಜಿಲ್ಲೆಯ ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. ಭಾರೀ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದಿದೆ. ಗುಡ್ಡದ ಮೇಲಿದ್ದ ಮಾವಿನ ಮರ ಉರುಳಿ ಬಿದ್ದಿದೆ.

ಇದೇ ಬೈಪಾಸ್‌ನಲ್ಲಿ ಸೋಮವಾರ ಭೂಕುಸಿತ ಉಂಟಾಗಿತ್ತು. ಮಂಗಳವಾರ ಹೆದ್ದಾರಿಯ ತಡೆಗೋಡೆ ಕುಸಿದಿತ್ತು. ಮಣ್ಣು ಪೂರ್ತಿಯಾಗಿ ಬೈಪಾಸ್‌ ರಸ್ತೆಗೆ ಬಂದಿತ್ತು. ಈ ಮೊದಲು ಭೂ ಕುಸಿತ ಸಂಭವಿಸಿದ ಸ್ಥಳದ ಎದುರು ಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕಾಮಗಾರಿ ಕುರಿತು ಪ್ರಶ್ನೆ ಏಳುವಂತೆ ಮಾಡಿದೆ.

ಶಿವಮೊಗ್ಗ 9

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಸಬ್ ಇನ್ಸ್‌ಪೆಕ್ಟರ್ ಶಿವನಗೌಡ ಇತರ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಬ್ಯಾರಿಕೇಡ್ ಹಾಕಿ ಮುನ್ನೆಚರಿಕಾ ಕ್ರಮ ಕೈಗೊಂಡಿದ್ದಾರೆ.

ಒಂದೇ ಮಳೆಗೆ 56₹ ಕೋಟಿ ವೆಚ್ಚದ ತಡೆ ಗೋಡೆ ಕಾಮಗಾರಿ ಈ ಪರಿಸ್ಥಿತಿ ಬಂದಿರುವುದು ಅವೈಜ್ಞಾನಿಕ ಕಾಮಗಾರಿ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ದೂರುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ತಡೆಗೋಡೆ ಕುಸಿದಿದ್ದು, ವಾಹನಗಳ ಓಡಾಟ ಕಡಿಮೆ ಇದ್ದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ.

WhatsApp Image 2024 07 18 at 2.32.44 PM

56₹ ಕೋಟಿ ವೆಚ್ಚ ದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ತಡೆಗೋಡೆ ಕುಸಿದಿರುವುದರಿಂದ 56₹ ಕೋಟಿ ವೆಚ್ಚದಲ್ಲಿ ಮಾಡಿದ ಕಾಮಗಾರಿ ನೀರಲ್ಲಿ ಹೋಮ ಮಾಡಿದಂತೆ ಆಗಿದೆ ಎಂದು ಸ್ಥಳೀಯರು ಆಕ್ರೋಶಪಡಿಸುತ್ತಿದ್ದಾರೆ.

ಈ ಸಂಬಂಧ ನಮ್ಮ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹೆಸರು ಹೇಳಲಿಚ್ಚಿಸದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ, “ಟೆಂಡರ್ ಕರೆದಿದ್ದು 42₹ ಕೋಟಿ ವೆಚ್ಚಕ್ಕೆ ಹಾಗೂ ಸರಿ ಸುಮಾರು ಬೇರೆ ಸಿಬ್ಬಂದಿಗಳ ಖರ್ಚು ವೆಚ್ಚ ಇನ್ನಿತರೆ ಎಲ್ಲ ಸೇರಿ ಇದು 56₹ ಕೋಟಿ ವೆಚ್ಚ ಅಂದಾಜು ಆಗಿದೆ. ಹಾಗೆಯೇ ಈ ಕಾಮಗಾರಿಯ ವೇಳೆ ಇದು ಜಂಬಿಟ್ಟಿಗೆ ಮಣ್ಣು ಹೊಂದಿದ್ದ ಪ್ರದೇಶವಿತ್ತು. ಹೀಗಾಗಿ, ಗುಡ್ಡದ ಮಣ್ಣು ಕುಸಿಯುವುದಿಲ್ಲ, ಗಟ್ಟಿಯಾಗಿ ಇರಲಿದೆ ಎಂದು ಭಾವಿಸಿ ಕಾಮಗಾರಿ ಮಾಡಿದ್ದೇವೆ. ಆದರೆ ವಿಪರೀತ ಮಳೆಯ ಕಾರಣ ಹವಾಮಾನ ವೈಪರೀತ್ಯದಿಂದ ಕೆಲವೊಮ್ಮೆ ನಾವು ಕೂಡ ಏನು ಮಾಡುವುದಕ್ಕೆ ಆಗುವುದಿಲ್ಲ. ಭಾರೀ ಮಳೆಯಿಂದ ಈ ರೀತಿ ಆಗಿದೆ. ಇದು ನಮ್ಮ ಊಹೆಗೂ ಮೀರಿದ ಘಟನೆ” ಎಂದು ತಿಳಿಸಿದರು.

“ಈ ಕಾಮಗಾರಿಯನ್ನು ನಿರ್ವಹಿಸುವ ಜವಾಬ್ದಾರಿ ಗುತ್ತಿಗೆದಾರರದ್ದು. ಹಾಗಾಗಿ ಇದನ್ನು ಸರಿಪಡಿಸುವ ಹೊಣೆ ಕೂಡ ಅವರದ್ದೇ ಆಗಿರುತ್ತದೆ. ಅದರ ಸಂಪೂರ್ಣ ಖರ್ಚು-ವೆಚ್ಚ ಅವರೇ ನೋಡಿಕೊಳ್ಳಬೇಕಿದೆ” ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಿಬ್ಬಂದಿಯೊಬ್ಬರು ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಇಲ್ಲಿನ ಕಾಮಗಾರಿಯ ವೇಳೆ ಎರಡು ಮರಗಳು ಇದ್ದವು. ಒಂದನ್ನು ತೆರವು ಮಾಡಿದ್ದೆವು ಮತ್ತೊಂದು ಮರ ತೆಗೆದಿರಲಿಲ್ಲ. ಇದಕ್ಕೆ ಅರಣ್ಯ ಇಲಾಖೆ ಕಾರಣ. ಕಾಮಗಾರಿಯ ವೇಳೆ ಮರಗಳು ಕಡಿಯಬಾರದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದರು. ಹಾಗಾಗಿ ಮರದ ಬೇರು ಸುತ್ತಲೂ ಪಸರಿಸಕೊಂಡು ತಡೆಗೋಡೆ ಸಡಿಲವಾಗಿ ಈ ರೀತಿ ಅವಘಡ ಸಂಭವಿಸಿದೆ” ಎಂದರು.

56₹ ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆಯಾಗಿ ಕೆಲವೇ ತಿಂಗಳುಗಳಲ್ಲಿ ಈ ರೀತಿ ಆಗಿರುವುದಕ್ಕೆ ಕಳಪೆ ಕಾಮಗಾರಿ ಹಾಗೂ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ ಮಾಡಿರುವುದೇ ಕಾರಣ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರತೊಡಗಿದೆ. ಜನರ ಹಣವನ್ನು ಪೋಲು ಮಾಡುತ್ತಿದ್ದಾರೆ ಎಂದು ದೂರುತ್ತಿದ್ದಾರೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...