ಶಿವಮೊಗ್ಗ | ದೇಶದ ಶೇ. 80ರಷ್ಟು ಸಂಪತ್ತು ಮೇಲ್ವರ್ಗಗಳ ಕೈಯಲ್ಲಿದೆ: ಎಸ್ ಮೂರ್ತಿ

Date:

ದೇಶದ ಶೇ. 80ರಷ್ಟು ಸಂಪತ್ತು ಕೇವಲ ಶೇ. 20ರಷ್ಟಿರುವ ಮೇಲ್ವರ್ಗದವರ ಬಳಿ ಶೇಖರಣೆಗೊಂಡಿದೆ. ಶೇ. 80ರಷ್ಟಿರುವ ಅಹಿಂದ ವರ್ಗಗಳ ಜನರು ಇನ್ನೂ ಬಡತನ ರೇಖೆಯಲ್ಲಿಯೇ ಇದ್ದಾರೆ. ಇದು ದೇಶದ ಅಸಮಾನತೆಯನ್ನು ಎತ್ತಿ ತೋರಿಸುತ್ತದೆ ಎಂದು ರಾಜ್ಯ ವಿಧಾನಸಭೆ ಮಾಜಿ ಕಾಯ೯ದಶಿ೯ ಹಾಗೂ ಅಹಿಂದ ಚಳವಳಿ ರಾಜ್ಯ ಪ್ರಧಾನ ಸಂಚಾಲಕ ಎಸ್ ಮೂತಿ೯ ಹೇಳಿದರು.

ಶಿವಮೊಗ್ಗದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ʼಅಹಿಂದ ಸಮ್ಮಿಲನ-ಚಿಂತನ ಮಂಥನʼ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಅಹಿಂದ ವರ್ಗಗಳ ಬಡವರು ಮೇಲ್ವರ್ಗಗಳ ಬಳಿ ಇರುವ ಸಂಪತ್ತನ್ನು ನಿರ್ವಹಣೆ ಮಾಡುವ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಭಾರತ ಸ್ವತಂತ್ರಗೊಂಡು 76 ವರ್ಷ ಪೂರೈಸಿದ್ದರೂ ದೇಶದ ಬಹುಸಂಖ್ಯಾತ ಜನರ ಸ್ಥಿತಿ ಇದೇ ಆಗಿದೆ. ಆದರೆ ಯಾರೂ ಪ್ರಶ್ನಿಸುವ ಗೋಜಿಗೆ ಹೋಗುತ್ತಿಲ್ಲ. ದೇಶದ ಕಾರ್ಯಾಂಗ, ಉದ್ಯೋಗ ಕ್ಷೇತ್ರದಲ್ಲಂತೂ ಕೇವಲ 3 ಪಸೆಂ೯ಟ್ ಇರುವ ಬ್ರಾಹ್ಮಣರೇ ತುಂಬಿಹೋಗಿದ್ದಾರೆ. ಹಾಲಿ 650 ಹೈಕೋರ್ಟ್ ನ್ಯಾಯಾಧೀಶರ ಹುದ್ದೆಗಳ ಪೈಕಿ 500 ಹುದ್ದೆಗಳು ಬ್ರಿಟಿಷ್ ಕಾಲದಲ್ಲೇ ಬುದ್ಧಿವಂತರಾಗಿದ್ದವರ ಪಾಲಾಗಿವೆ” ಎಂದು ಅಂಕಿ-ಅಂಶ ನೀಡಿದರು.

1001196960

ರಾಜ್ಯದ 2011ರ ಜನಗಣತಿ ಪ್ರಕಾರ ಎರಡೂ ಮುಕ್ಕಾಲು ಕೋಟಿ ಇರುವ ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಸಿಕ್ಕ ಶಾಸಕರ ಸ್ಥಾನ ಕೇವಲ 30 ರಿಂದ 40 ಮಾತ್ರ. ಆದರೆ ತಲಾ 60 ಲಕ್ಷ ಜನಸಂಖ್ಯೆ ಹೊಂದಿರುವ ಎರಡು ಮೇಲ್ವಗ೯ಗಳ ಶಾಸಕರು 140ಕ್ಕೂ ಹೆಚ್ಚು. ರಾಜ್ಯದ ಉತ್ತರ ಭಾಗವನ್ನು ಒಂದು ಜಾತಿಯವರು ಆಳಿದರೆ ದಕ್ಷಿಣ ಭಾಗವನ್ನು ಇನ್ನೊಂದು ಜಾತಿಯವರು ಆಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯನ್ನು ವಿಕೃತಗೊಳಿಸುತ್ತಿದೆ: ಸುಬ್ಬರಾಜು

ಕಾರ್ಯಕ್ರಮದಲ್ಲಿ ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತೀ ನ ಶ್ರೀನಿವಾಸ್, ಅಹಿಂದ ಚಳವಳಿಯ ಮೊಹಮ್ಮದ್ ಸನಾವುಲ್ಲಾ, ಜಿ ಪರಮೇಶ್ವರಪ್ಪ, ಮಿಲಿಂದ ಸಂಘಟನೆಯ ಅಣ್ಣಪ್ಪ ಆಯನೂರು ಕೋಟೆ, ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ಪ್ರೊ. ಹೆಚ್ ರಾಚಪ್ಪ, ಸಂಚಾಲಕ ಎ ಕೆ ಚಂದ್ರಪ್ಪ, ಕಲ್ಲಪ್ಪ, ಉಮೇಶ್ ಯಾದವ್ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...