ಶಿವಮೊಗ್ಗ | ಭೀಕರ ಅಪಘಾತ; ಇಬ್ಬರ ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

Date:

ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಚೋರಡಿ ಕುಮದ್ವತಿ ಸೇತುವೆ ಬಳಿ ಸಂಭವಿಸಿದೆ. ಚಾಲಕನ ಅಜಾರೂಕತೆಯೇ ಅಫಘಾತಕ್ಕೆ ಕಾರಣ ಎನ್ನಲಾಗಿದೆ.

“ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ” ಎಂದು ಸಿಮ್ಸ್ ಮೆಡಿಕಲ್ ಆಸ್ಪತ್ರೆಯ ನಿರ್ದೇಶಕ ವಿರೂಪಾಕ್ಷಪ್ಪ ತಿಳಿಸಿದ್ದಾರೆ.

“ಡ್ರೈವರ್ ಮೊಬೈಲ್ ಫೋನ್​ನಲ್ಲಿ ಮಾತನಾಡುತ್ತಿದ್ದರು. ಶಿವಮೊಗ್ಗಕ್ಕೆ ಬೇಗ ಹೋಗಬೇಕೆಂಬ ಅವಸರದಲ್ಲಿ ಬಸ್ ಚಲಾಯಿಸುತ್ತಿದ್ದರು. ನಾವು ಹೇಳಿದರೂ ಕೂಡ ಅವರು ಮೊಬೈಲ್​​ನಲ್ಲಿ ಮಾತನಾಡುತ್ತಿದ್ದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗ ಜಿಲ್ಲೆ ಹೊರಕೆರೆಪುರದ ಬಳಿ ಎಂ.ಜೆ.ಕಟ್ಟೆ ಗ್ರಾಮದಿಂದ ಶಿಕಾರಿಪುರ ಹುಚ್ಚರಾಯ ದೇವರ ದರ್ಶನಕ್ಕೆ ಮೃತ ತಿಪ್ಪೇಸ್ವಾಮಿ ಹಾಗೂ ಅವರ ಪತ್ನಿ‌ ಜಯಮ್ಮ‌ ಸೇರಿದಂತೆ ಒಂದೇ ಕುಟುಂಬದಿಂದ ಒಟ್ಟು ಆರು ಮಂದಿ ಬಂದಿದ್ದರು. ದೇವರ ದರ್ಶನ ಮುಗಿಸಿ ಹಿಂದಿರುಗುವಾಗ  ಅಪಘಾತವಾಗಿದೆ. ಘಟನೆಯಲ್ಲಿ ತಿಪ್ಪೇಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

“ನಮ್ಮ ಯಜಮಾನರು ಸಾವನ್ನಪ್ಪಿದ್ದಾರೆ. ಅವರನ್ನು ನಾನು ನೋಡಿಲ್ಲ” ಎಂದು ಮೃತ ತಿಪ್ಪೇಸ್ವಾಮಿ ಪತ್ನಿ ಜಯಮ್ಮ ಕಣ್ಣೀರಿಟ್ಟಿದ್ದಾರೆ.

ಆಸ್ಪತ್ರೆಗೆ ಸಂಸದ ರಾಘವೇಂದ್ರ, ವಿಜಯೇಂದ್ರ ಭೇಟಿ:

ಅಪಘಾತ ವಿಷಯ ತಿಳಿದ ಕೂಡಲೇ ಸಂಸದ ಬಿ ವೈ ರಾಘವೇಂದ್ರ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಹೋದರಿಬ್ಬರು ಗಾಯಾಳುಗಳ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ್ದಾರೆ. ಬಳಿಕ ಸಂತ್ರಸ್ತ ಕುಟುಂಬದವರಿಗೆ ಧೈರ್ಯ ಹೇಳಿದ್ದು, ಉತ್ತಮ ಚಿಕಿತ್ಸೆ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೆಕೆಆರ್‌ಟಿಸಿ ಬಸ್ ಚಾಲಕನ ಭೀಕರ ಹತ್ಯೆ

ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಎಸ್​ಪಿ ಮಿಥುನ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಬಗ್ಗೆ ಮಾಹಿತಿ ಪಡೆದು‌ಕೊಂಡರು. ಎಸ್​ಪಿ ಮಿಥುನ್ ಕುಮಾರ್ ಮಾತನಾಡಿ, “ಎರಡು ಬಸ್​​ಗಳ‌ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...