ಶಿವಮೊಗ್ಗ | ಕನ್ನಡದ ಉಳಿವಿಗಾಗಿ ಕರ್ನಾಟಕದ ಸೇವೆ ಮಾಡಲು ಸದಾ ಸಿದ್ಧ: ಮಧು ಬಂಗಾರಪ್ಪ

Date:

ನನ್ನ ಸೇವೆ ಕನ್ನಡಕ್ಕೆ ಹಾಗೂ ಕರ್ನಾಟಕಕ್ಕೆ ನನ್ನ ತಂದೆ ಯವರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಕನ್ನಡ ಉಳಿಯಬೇಕು ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ನನ್ನ ಕರ್ತವ್ಯ ಮಾಡುವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಾಹಿತ್ಯ ಗ್ರಾಮದಲ್ಲಿ ಬಂಗಾರಪ್ಪನವರ ಗ್ರಂಥಾಲಯಕ್ಕೆ 5 ಲಕ್ಷ ರೂ. ನಗದು ಹಣ ದೇಣಿಗೆ ನೀಡಿ ಮಾತನಾಡಿ, “ನಮ್ಮ ತಂದೆಯವರು ಬೀದಿ ದೀಪದಲ್ಲಿ ಓದುತ್ತಿದ್ದರು. ಕನ್ನಡದ ಕುರಿತು ಹೆಚ್ಚು ಅಭಿಮಾನ ಇದೆ. ಪುಸ್ತಕ ಓದುವುದು ಒಳ್ಳೆಯ ಸ್ನೇಹಿತನಿಗೆ ಸಮಾನ. ಒಬ್ಬ ಒಳ್ಳೆಯ ಸ್ನೇಹಿತ ಜೀವನ ಪೂರ್ತಿ ಇರುತ್ತಾನೆ. ಹಾಗಾಗಿ ಒಳ್ಳೆಯ ಪುಸ್ತಕಗಳನ್ನು ಓದಬೇಕು. ಅನೇಕ ಸಾಹಿತಿಗಳನ್ನು ಕೊಡುಗೆಯಾಗಿ ಕೊಟ್ಟ ಶಿವಮೊಗ್ಗದಂತಹ ಜಿಲ್ಲೆಯಲ್ಲಿಯೇ ಸಾಹಿತ್ಯ ಸಭಾಂಗಣವೊಂದು ಇಲ್ಲದಿರುವುದು ಸರಿಯಲ್ಲ. ಯಾವಾಗಲೋ ಆಗಬೇಕಿದ್ದ ಸಭಾಂಗಣ ಈಗ ಸುಮಾರು 2.5 ಕೋಟಿ ಅಂದಾಜು ಮೊತ್ತದಲ್ಲಿ ನಿರ್ಮಾಣವಾಗುತ್ತಿದೆ. ಇದು ಕನ್ನಡಾಭಿಮಾನಕ್ಕಾಗಿ ಮಾಡುತ್ತಿರುವ ಸಣ್ಣ ಸೇವೆಯಷ್ಟೇ” ಎಂದರು.

“ಪ್ರಸ್ತುತ ಪೋಷಕರು ಮಕ್ಕಳನ್ನು ಕನ್ನಡ ಮಾಧ್ಯಮದ ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳು ಹಿರಿಯರ ಚಿಂತನೆಯ ಮೂಲಕ ಮೊದಲ ಭಾಷೆ ದ್ವಿತೀಯ ಭಾಷೆಯನ್ನಾಗಿ ಆಯ್ಕೆ ಮಾಡಬೇಕು. ನನ್ನ ರಕ್ತ ಕನ್ನಡದ್ದು ಎನ್ನುವ ಮನೋಭಾವ ಬರಬೇಕು. ನಮ್ಮ ಪ್ರಚಾರ ಕನ್ನಡಕ್ಕೆ ಉಪಯೋಗ ಆಗುತ್ತದೆ ಎಂದರೆ ನಾನು ಬಂದು ಪ್ರಚಾರ ಮಾಡಲಿಕ್ಕೂ ಸಿದ್ಧ. ಎಂತಾದರೂ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ದುಪ್ಪಟ್ಟಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸ್ ವಿಶೇಷ ಗಸ್ತು; 197 ಪ್ರಕರಣ ದಾಖಲು

“ಪ್ರಸ್ತುತ ನಡೆಯುತ್ತಿರುವ ಜಿಲ್ಲಾ ಮಟ್ಟದ 6ನೇ ಜಾನಪದ ಸಮ್ಮೇಳನದಲ್ಲಿ ಕ್ರಿಯಾಶೀಲ ಚಟುವಟಿಕೆಗಳನ್ನು ಮಾಡುವ ಮೂಲಕ ಯುವಕರಲ್ಲಿ ಹುರುಪು ತುಂಬಬೇಕು. ಬಂಗಾರಪ್ಪ ಅವರು ಸುಮಾರು 40 ನಿಮಿಷ ಕುವೆಂಪು ಅವರ ಕುರಿತು ಸುದೀರ್ಘವಾಗಿ ಮಾತನಾಡಿದ್ದರು. ಅವರ ಹೆಸರಿನಲ್ಲಿ ಅಚ್ಚುಕಟ್ಟಾಗಿ ಗ್ರಂಥಾಲಯ ಮಾಡುವುದು ಹೆಮ್ಮೆಯ ವಿಷಯ” ಎಂದರು.

ಈ ವೇಳೆ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ್, ಮಂಜುನಾಥ ಗೌಡ, ಬಲ್ಕಿಸ್ ಬಾನು, ಚಂದ್ರ ಭೂಪಾಲ್, ವಿಜಿ, ರಮೇಶ್ ಹೆಗಡೆ, ಡಿ. ಮಂಜುನಾಥ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...