ಶಿವಮೊಗ್ಗ | ಪೊಲೀಸ್ ಇಲಾಖೆ, ಸಾರ್ವಜನಿಕರ ಬೇಡಿಕೆ ಈಡೇರಿಸುವಂತೆ ಗೃಹ ಸಚಿವರಿಗೆ ಮನವಿ

Date:

ಶಿವಮೊಗ್ಗ ನಗರದ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್‌ ಹೆಚ್ ಸಿ ಯೋಗೇಶ್‌ರವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ನಗರದಲ್ಲಿ ನಿರ್ಮಾಣವಾಗಿದ್ದ ನೂತನ ಪೊಲೀಸ್‌ ಭವನ ಉದ್ಘಾಟನೆಗೆ ಗೃಹ ಸಚಿವರು ಆಗಮಿಸಿದ್ದ ವೇಳೆ ಮನವಿ ಸಲ್ಲಸಿ ಮಾತನಾಡಿ, “ಶಿವಮೊಗ್ಗ ನಗರವು ಬೃಹದಾಕಾರವಾಗಿ ಬೆಳೆದಿದೆ. ಜನಸಂಖ್ಯೆ ಕೂಡಾ ಅಧಿಕವಾಗಿದ್ದು, ಸುಮಾರು ನಾಲ್ಕು ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಪೊಲೀಸ್ ಇಲಾಖೆಯವರು ಹಾಗೂ ಅಧಿಕಾರಿಗಳು ಶಿವಮೊಗ್ಗ ನಗರದ ಸಾರ್ವಜನಿಕರೊಂದಿಗೆ ಸಹಕರಿಸುತ್ತ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಮನವಿ ಮಾಡಿದರು.

“ಶಿವಮೊಗ್ಗದಲ್ಲಿ ಕಮಿಷನರ್ ಕಚೇರಿ ನಿರ್ಮಾಣ ಮಾಡಿಕೊಡಬೇಕು. ನಗರದ ಗೋಪಾಲ ಭಾಗದಲ್ಲಿ ಪೊಲೀಸ್ ಸ್ಟೇಷನ್ ನಿರ್ಮಾಣ ಮಾಡಿಕೊಡಬೇಕು. ಏರ್‌ಪೋರ್ಟ್‌ಗೆ ನಿರ್ದಿಷ್ಟ ಪೊಲೀಸ್ ಸ್ಟೇಷನ್ ನಿರ್ಮಾಣ ಮಾಡಬೇಕು. ಹೆಚ್ಚಿನ ವಾಹನ ದಟ್ಟಣೆಯಿರುವುದರಿಂದ ಗ್ರಾಮಾಂತರ ಭಾಗಕ್ಕೆ ಹಾಗೂ ನಗರ ಭಾಗದಲ್ಲಿ ಪ್ರತ್ಯೇಕವಾಗಿ ಮತ್ತೊಂದು ಟ್ರಾಫಿಕ್ ಪೊಲೀಸ್ ಠಾಣೆ ನಿರ್ಮಾಣ ಮಾಡಿಕೊಡಬೇಕು. ಪೊಲೀಸ್ ಇಲಾಖೆಯವರ ಆರೋಗ್ಯ ದೃಷ್ಟಿಯಿಂದ ಪೊಲೀಸ್ ವ್ಯಾಯಾಮ ಶಾಲೆ ಹಾಗೂ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಕ್ಫ್ ಆಸ್ತಿಯ ಬಗ್ಗೆ ರೈತರಲ್ಲಿ ತಪ್ಪು ವದಂತಿ; ಆತಂಕಪಡುವ ಅವಶ್ಯಕತೆ ಇಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

ರಾಜ್ಯ ಭೋವಿ ನಿಗಮ ಮಂಡಳಿ ಅಧ್ಯಕ್ಷ ರವಿಕುಮಾರ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಎಸ್ ಶಿವಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ, ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಶ್ವನಾಥ್ ಕಾಶಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡ, ಚಿನ್ನಪ್ಪ ಸೇರಿದಂತೆ ಕಾರ್ಯಕರ್ತರು ಇದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

    ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

    ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

    "ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

    ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

    ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

    ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

    ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...