ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನಿ ನಗರ ಪೊಲೀಸರು ಬಂಧಿಸಿದ್ದಾರೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ ಎಚ್ ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಐಪಿಎಸ್ ಮಿಥುನ್ ಕುಮಾರ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸಾಗರ ಮೂಲದ ಪ್ರತಾಪ್ ಎಸ್ (26) ಬಂಧಿತ ಆರೋಪಿ. ಈತನಿಂದ ₹6,000 ಮೌಲ್ಯದ 349 ಗ್ರಾಂ ತೂಕದ ಒಣ ಗಾಂಜಾ, ₹600 ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಫೋನ್, ದ್ವಿ ಚಕ್ರ ವಾಹನ ಸೇರಿದಂತೆ ಒಟ್ಟು ₹34,600ಗಳ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಮೈಕ್ರೋ ಫೈನಾನ್ಸ್ಗಳ ವಿರುದ್ಧ ದೂರು ಬಂದರೆ ಕೂಡಲೇ ಕ್ರಮವಹಿಸಿ: ಅನಿಲ್ ಭೂಮರೆಡ್ಡಿ
ಎರಡನೇ ಪ್ರಕರಣ.. ಕೀರ್ತಿ ನಗರದ ದೇವಂಗಿ ಪಾರ್ಕ್ನಲ್ಲಿ ಸುರೇಂದ್ರ ಅಲಿಯಾಸ್ ಬಬ್ಲು (30) ಎಂಬಾತ ಮಾದಕ ಗಾಂಜಾ ಮಾರುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನಿಂದ ₹5,000 ಮೌಲ್ಯದ 363 ಗ್ರಾಂ ತೂಕದ ಒಣ ಗಾಂಜಾ, ₹500 ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಪೋನ್ ಸೇರಿದಂತೆ ಒಟ್ಟು ₹20,500 ಗಳ ಮಾಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.





