ಶಿವಮೊಗ್ಗ | ಮರಗಳಿಗೆ ಕೊಡಲಿಯೇಟು; ಅಳುತ್ತಿದೆ ಹಸಿರು

Date:

ಶಿವಮೊಗ್ಗ ಹೊರವಲಯದ ಹರಕೆರೆಯ ಶಿವಮೊಗ್ಗ-ತೀರ್ಥಹಳ್ಳಿ ಹೆದ್ದಾರಿಯಲ್ಲಿ ಮರಗಳನ್ನು ಕಡಿಯಲು ಶಿವಮೊಗ್ಗ ಅರಣ್ಯ ಇಲಾಖೆ ಅನುಮತಿ ನೀಡಿದೆ. ಇದನ್ನು ಹಲವರು ವಿರೋಧಿಸಿದ್ದಾರೆ. ಇಲಾಖೆಯು ಅನುಮತಿ ನೀಡುವ ಮುನ್ನ ಕಾನೂನಿನಲ್ಲಿ ಸೂಚಿಸಿರುವಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌-169)ಯನ್ನು ವಿಸ್ತರಿಸಿ, ಚತುಷ್ಪಥ ರಸ್ತೆ ಮಾಡಲು ಯೋಜಿಸಲಾಗಿದೆ. ಅದಕ್ಕಾಗಿ ರಸ್ತೆ ಬದಿಯ 60 ಮರಗಳನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ. ಈ ಬೆನ್ನಲ್ಲೇ, ಹರಕೆರೆಯಲ್ಲಿ ಕೆಲ ಮರಗಳು ನೆಲಕ್ಕುರುಳಿದ್ದು, ಸ್ಥಳೀಯರು ಪರಿಸರ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಮೂಲದ ‘ನೇಚರ್ ಕನ್ಸರ್ವೇಶನ್ ಟ್ರಸ್ಟ್ ಮತ್ತು ಗ್ರೀನ್ ಲೈವ್ಸ್’ನ ಮುಖಂಡರು ಮರ ಕಡಿಯುವುದನ್ನು ಕೂಡಲೇ ನಿಲ್ಲಿಸುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ರಸ್ತೆ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಅನುಕೂಲ ಮಾಡಿಕೊಡಲು ಅರಣ್ಯ ಇಲಾಖೆ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿದೆ. ಮರ ಕಡಿಯುವ ಅಧಿಸೂಚನೆಯನ್ನು ನಿಗದಿತ ಪತ್ರಿಕೆಗಳಲ್ಲಿ ಪ್ರಕಟಿಸಿಲ್ಲ” ಎಂದು ಗ್ರೀನ್ ಲೈವ್ಸ್‌ನ ಶ್ರವಣ್ ಎಂ.ಸಿ ಕಿಡಿಕಾರಿದ್ದಾರೆ.

ಆರೋಪಗಳನ್ನು ನಿರಾಕರಿಸಿರುವ ಡಿಸಿಎಫ್ (ಶಿವಮೊಗ್ಗ ಪ್ರಾದೇಶಿಕ ವಿಭಾಗ) ಜೆ ಶಿವಶಂಕರ್, “ಮರಗಳನ್ನು ಕಡಿಯಲು ಅನುಮತಿ ನೀಡುವ ಮುನ್ನ ಅರಣ್ಯ ಇಲಾಖೆ ಎಲ್ಲ ಕ್ರಮಗಳನ್ನು ಅನುಸರಿಸಿದೆ. ಅದರಂತೆ, ಪತ್ರಿಕೆಗಳಲ್ಲಿ ನೋಟಿಸ್ ಪ್ರಕಟವಾದರೂ ಯಾವುದೇ ಆಕ್ಷೇಪಣೆ ಬಂದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...