ಶಿವಮೊಗ್ಗ | ‘ಏಕ್ ದಿನ್ ಕಾ ಇನ್ಸ್‌ಪೆಕ್ಟರ್’ ಆದ 8ರ ಹರೆಯದ ಬಾಲಕ ಆಝಾನ್ ಖಾನ್

Date:

  • ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಆಸೆ ಪೂರೈಸಿದ ಪೊಲೀಸರು
  • ಜಿಲ್ಲಾ ಎಸ್‌ಪಿ ಮಿಥುನ್‌ ಕುಮಾರ್‌ ಹಾಗೂ ಪೊಲೀಸರಿಗೆ ಧನ್ಯವಾದವಿತ್ತ ಬಾಲಕನ ಪೋಷಕರು

ಆ ಮುಸ್ಲಿಂ ಕುಟುಂಬದ ಪುಟ್ಟ ಪೋರನಿಗೆ ಈಗ ಎಂಟೂವರೆ ವರ್ಷ. ದೊಡ್ಡವನಾದ ಮೇಲೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಆಗಬೇಕೆಂಬ ಕನಸು. ಆದರೆ, ಹುಟ್ಟಿದ ಮೂರು ತಿಂಗಳಿಂದ ಶುರುವಾದ ಹೃದಯ ಸಂಬಂಧಿ ಕಾಯಿಲೆ ಕುಟುಂಬವನ್ನು ಸಂಕಟಕ್ಕೆ ಸಿಲುಕಿಸಿದೆ.

ಆದರೆ, ಹುಡುಗನ ಆಸೆಯನ್ನು ಸದ್ಯ ನೆರವೇರಿಸಿದ್ದು ಮಾತ್ರ ಪೊಲೀಸ್ ಇಲಾಖೆ.

ಹೌದು. ಇದು ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಆಗಿ ಒಂದು ದಿನ ಸಾಂಕೇತಿಕವಾಗಿ ಕಾರ್ಯ ನಿರ್ವಹಣೆ ಮಾಡಿದ ಬಾಲಕ ಆಝಾನ್ ಖಾನ್‌ನ ಸುದ್ದಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಶಿವಮೊಗ್ಗ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನೆಲೆಸಿರುವ ತಬ್ರೇಝ್ ಖಾನ್‌ ಮತ್ತು ನಗ್ಮಾ ಖಾನ್‌ ಅವರ ಪುತ್ರ ಆಝಾನ್‌ ಖಾನ್‌, ತಾನು ಪೊಲೀಸ್ ಆಗಬೇಕೆಂಬ ಕನಸನ್ನು ಶಿವಮೊಗ್ಗ ಜಿಲ್ಲಾ ಎಸ್‌ಪಿ ಮಿಥುನ್‌ ಕುಮಾರ್‌ ನೆರವೇರಿಸಿದ್ದಾರೆ.

inspector azan khan

ಬಾಲಕನ ಆಸೆಯಂತೆ ಸಮವಸ್ತ್ರ ಧರಿಸಿ ಇನ್ಸ್‌ಪೆಕ್ಟರ್‌ ಕುರ್ಚಿಯ ಮೇಲೆ ಕುಳಿತು ಅಧಿಕಾರ ಚಲಾಯಿಸಿದ ಕ್ಷಣಕ್ಕೆ ದೊಡ್ಡಪೇಟೆ ಠಾಣೆ ಬುಧವಾರ ಸಾಕ್ಷಿಯಾಯಿತು.

ಮಗ ಖಾಕಿ ತೊಟ್ಟು, ಪೊಲೀಸ್ ಅಧಿಕಾರಿಯಾಗಿ ಗತ್ತಿನಲ್ಲಿ ನಡೆಯುವುದನ್ನು ನೋಡಿದ ಪೋಷಕರು, ಕುಟುಂಬ ಸದಸ್ಯರು ಸೇರಿದಂತೆ ಅಲ್ಲಿ ಸೇರಿದ್ದ ಎಲ್ಲರೂ ಭಾವುಕರಾದ ಸನ್ನಿವೇಶಕ್ಕೆ ಸಾಕ್ಷಿಯಾದರು. ಈ ಫೋಟೋಗಳನ್ನು ಶಿವಮೊಗ್ಗ ಎಸ್‌ಪಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವೇಳೆ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿಕೆ ಮಿಥುನ್‌ ಕುಮಾರ್‌ ಅವರಿಗೆ ಸೆಲ್ಯೂಟ್ ಹೊಡೆದು ಇನ್ಸ್‌ಪೆಕ್ಟರ್‌ ಆಗಿ ‘ಡ್ಯೂಟಿ’ ಮಾಡಿದ ಬಾಲಕ, ಕಳ್ಳನಂತೆ ಪಾತ್ರ ವಹಿಸಿದ್ದ ಸಿಬ್ಬಂದಿಯೋರ್ವರಿಗೆ ಬುದ್ಧಿಮಾತು ಹೇಳಿದ್ದು ವಿಶೇಷವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಮೊಗ್ಗ ಎಸ್‌ಪಿ, ಒಂದು ದಿನ ಪೊಲೀಸ್‌ ಆಗಬೇಕು ಎಂದು ಬಾಲಕನಿಗೆ ಆಸೆ ಇತ್ತು. ಈ ಕುರಿತು ಅವರ ತಂದೆ ಮನವಿ ಮಾಡಿದ್ದರು. ಈ ಹಿನ್ನೆಲೆ ಡಿವೈಎಸ್‌ಪಿ ಅವರಿಗೆ ತಿಳಿಸಿ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಮಾಡಲಾಗಿದೆ. ಮಾನವೀಯ ನೆಲೆಯಲ್ಲಿ ಬಾಲಕನನ್ನು ಇನ್ಸ್‌ಪೆಕ್ಟರ್‌ ಮಾಡಿದ್ದೇವೆ. ಬಾಲಕ ತುಂಬ ಖುಷಿ ಪಟ್ಟಿದ್ದಾನೆ’ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್‌ ಕುಮಾರ್‌ ಭೂಮರಡ್ಡಿ, ಪೊಲೀಸ್‌ ಅಧಿಕಾರಿಗಳಾದ ಬಾಲರಾಜ್‌, ಡಿ ಟಿ ಪ್ರಭು, ಅಂಜನ್‌ ಕುಮಾರ್‌ ಇತರರಿದ್ದರು.

ಬಾಲಕನಿಗಿರುವ ಕಾಯಿಲೆ ಏನು?
10 ಲಕ್ಷ ಜನರಲ್ಲಿ ಒಬ್ಬರಿಗೆ ಕಂಡುಬರುವ ಈ ಕಾಯಿಲೆ ಬಾಲಕ ಆಝಾನ್ ಖಾನ್‌ಗೂ ತಗುಲಿದೆ. ಈ ಕಾಯಿಲೆಗೆ ಚಿಕಿತ್ಸೆಯೂ ಅಪರೂಪವೇ ಆಗಿದೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ.

ಆಝಾನ್‌ ಮೂರು ತಿಂಗಳಿರುವಾಗಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಆಂಜಿಯೋಗ್ರಾಂ ಮಾಡಿ ಕಾರಣವನ್ನು ಪತ್ತೆ ಹಚ್ಚಲಾಗಿದೆ.

ಈತ ಸಂಪೂರ್ಣ ಗುಣಮುಖನಾಗಬೇಕಾದರೆ ಹೃದಯ ಮತ್ತು ಶ್ವಾಸಕೋಶದ ಕಸಿಯಾಗಬೇಕಾದ ಅನಿವಾರ್ಯತೆ ಇದೆ. ಅದಕ್ಕೆ ದಾನಿಗಳು ಬೇಕು. ಜತೆಗೆ ಲಕ್ಷಾಂತರ ಹಣವೂ ಖರ್ಚಾಗುತ್ತದೆ ಎಂದು ಈತನ ಪೋಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...