ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

Date:

“ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ” ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲವೆಂದು ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು.

ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗಕ್ಕೆ ಹೋಗುವ ದಾರಿ ಮಧ್ಯ ಶಿಕಾರಿಪುರ ತಾಲೂಕಿನ ತಿಮ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ಯಾರೆಂಟಿ ಕಾರ್ಡ್‌ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಸ್ಥಳೀಯ ಗ್ರಾಮಸ್ಥರು ಹಾಗೂ ಮಹಿಳೆಯರು ಅಂದು ಪಂಪ್‌ಸೆಟ್‌ಗಳಿಗೆ ಶೆಡ್ಡು ಹೊಡೆದು ಅಂದು ನೀಡಿದ ಉಚಿತ ವಿದ್ಯುತ್ ಯೋಜನೆ ಇವತ್ತು ನಮ್ಮ ಮನೆ ಮನೆಗಳ ನಂದಾದೀಪವಾಗಿದೆ.

ಬಂಗಾರಪ್ಪನವರಿಂದ ನಮ್ಮ ಮನೆಗಳು ಸ್ಮರಣೀಯವಾಗಿ ಬೆಳಗುತ್ತಿದೆ. ಅದಕ್ಕಾಗಿ ನಿಮಗೆ ಹೃದಯಪೂರ್ವಕ ಸ್ವಾಗತ ನೀಡುತ್ತೇವೆಂದು ಆರತಿ ಮಾಡಿ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭ ಬಂಗಾರಪ್ಪನವರ ಸ್ಮರಣೆ ಮಾಡಿದ ಗ್ರಾಮಸ್ಥರ ಜತೆಗೆ ಮಧುಬಂಗಾರಪ್ಪ ಮಾತನಾಡಿ, “ಅಂದು ಗ್ರಾಮೀಣ ಕೃಪಂಕಾ, ಆರಾಧನಾ, ಉಚಿತ ವಿದ್ಯುತ್ ಸೇರಿ ಹಲವು ಯೋಜನೆಗಳು ಯಶಸ್ವಿಯಾಗಿದ್ದು, ಇಂದಿಗೂ ಕೂಡ ಯಾವ ಸರ್ಕಾರವು ಅವರ ಜನಪರ ಯೋಜನೆಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಹೃದಯದಲ್ಲೂ ಬಂಗಾರಪ್ಪನವರು ಇದ್ದಾರೆ. ಈ ಬಾರಿ ಬಂಗಾರಪ್ಪನವರ ಮಗಳಾದ ಗೀತಕ್ಕನವರಿಗೆ ನಿಮ್ಮ ಮತ ನೀಡಿ” ಎಂದು ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಗ್ರಾಮಸ್ಥರು, “ಯಾರ ಬಗ್ಗೆಯೂ ಟೀಕೆ ಮಾಡದೆ ಬಂಗಾರಪ್ಪನವರ ಋಣ ತೀರಿಸಲು ನಮಗೆ ಒಳ್ಳೆಯ ಸುವರ್ಣ ಅವಕಾಶ. ಮಧು ಬಂಗಾರಪ್ಪನವರೇ ಈ ಬಾರಿ ನಿಮ್ಮ ತಂದೆಯವರ ಋಣ ತೀರಿಸಿಯೇ ತೀರಿಸುತ್ತೇವೆ” ಎಂದು ಮಧು ಬಂಗಾರಪ್ಪನವರಿಗೆ ಚೈತನ್ಯ ನೀಡಿದರು.

ಉತ್ತರಿಸಿದ ಮಧು ಬಂಗಾರಪ್ಪನವರು, “ಜಿಲ್ಲೆಯಲ್ಲಿ ಸಂಭ್ರಮದ ವಾತಾವರಣ ಇದೆ. ಗೀತಕ್ಕ ಈ ಬಾರಿ ಗೆದ್ದು ನಿಮ್ಮೆಲ್ಲರ ಸಮಸ್ಯೆಗಳ ಪರವಾಗಿ ನಿಲ್ಲುತ್ತಾರೆ. ಅವರ ಜೊತೆ ನಾನು ನಿಂತು ಕೈ ಜೋಡಿಸುತ್ತೇನೆ. ಹೆದರಬೇಡಿ ಧೈರ್ಯವಾಗಿರಿ” ಎಂದು ಭರವಸೆ ನೀಡಿದರು.

ಸ್ಥಳೀಯ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಧು ಬಂಗಾರಪ್ಪನವರಿಗೆ ಸ್ಥಳೀಯರು ಗೌರವ ಸಮರ್ಪಿಸಿದರು.

ಈ ಸುದ್ದಿ ಓದಿದ್ದೀರಾ? ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಂ, ಮುಖಂಡ ನಾಗರಾಜ್ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಮಾರವಳ್ಳಿ ಉಮೇಶ್, ರೇಣುಕಸ್ವಾಮಿ, ರಾಘವೇಂದ್ರ ನಾಯಕ್, ಶಿವು ಹುಲ್ಮಾರ್, ಸ್ಥಳೀಯ ಮುಖಂಡರಾದ ಷಣ್ಮುಖಪ್ಪ, ಚಿಕ್ಕಣ್ಣ, ಮಂಜುನಾಥ್, ಗದಿಗೆಮ್ಮ, ಹಳದಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...