ಶಿವಮೊಗ್ಗ | ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಕಾರ್ಯಕರ್ತರ ಸಮಾವೇಶ

Date:

ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಹೆಚ್ಚು ಎಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು ಅವಕಾಶ ನೀಡಿದಂತಾಗುತ್ತದೆ ಎಂದು ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ (ಎಸ್ ಟಿ) ಘಟಕ ವತಿಯಿಂದ ಇಲ್ಲಿನ ಗೋಳಿಹೊಳೆಯ ಮಹಿಷಿಮರ್ಧಿನಿ ಸಭಾಭವನದಲ್ಲಿ ಶನಿವಾರ (ಏ.20) ಆಯೋಜಿಸಿದ್ದ ಮರಾಠಿ ಸಮುದಾಯದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಲ್ಲಿ 20 ಸಾವಿರಕ್ಕೂ ಹೆಚ್ಚು ಮರಾಠಿ ಸಮುದಾಯದವರು ವಾಸವಾಗಿದ್ದಾರೆ‌. ಮರಾಠಿ ಸಮುದಾಯದವರು ಧರ್ಮ ನಿಷ್ಠರು ಹಾಗೂ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಿದ್ದಾರೆ‌. ಈ ಹಿಂದೆ ಇಲ್ಲಿ ಸಮಾಜಕ್ಕೆ 2 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆಗೊಳಿಸಲಾಗಿತ್ತು. ಇದರಿಂದ, ಮರಾಠಿ ಸಮುದಾಯದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ‌ ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೀತಾ ಶಿವರಾಜಕುಮಾರ ಅವರು ಪ್ರಮಾಣಿಕ ಹಾಗೂ ಸಾತ್ವಿಕ ಮಹಿಳೆ. ಅವರಿಗೆ ಮತ ನೀಡಿದರೆ, ಈ ಭಾಗದಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತದೆ. ಇದಕ್ಕೆ ಜನರು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಬಿಜೆಪಿಯಿಂದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಸಮುದಾಯದಿಂದ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಬಿಜೆಪಿಯ ಸುಳ್ಳು ಭರವಸೆಯ ಆಡಳಿತ. ಆದ್ದರಿಂದ, ಈ ಭಾರಿ ನನಗೆ ಅವಕಾಶ ಕಲ್ಪಿಸಿಕೊಡಿ, ನನ್ನ ತಂದೆಯ ಹಾದಿಯಲ್ಲಿ ಸಾಗಿ, ಜನ ಸಮಾನ್ಯರಿಗೆ ಪೂರಕವಾದ ಆಡಳಿತ ನಡೆಸುತ್ತೇನೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಹಾಗೂ ಅಶಕ್ತರ ಕೈ ಹಿಡಿದು ನಡೆಸುತ್ತಿದೆ. ಅದೇ ರೀತಿ, ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮರಾಠಿ ಸಮುದಾಯಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ನೀಡಲಾಗುವುದು ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಎಸ್ ಟಿ ಸಮುದಾಯದವರು ಅಪಾರ ಕೊಡುಗೆ ನೀಡಿದ್ದಾರೆ. ಈ ಲೋಕಸಭಾ ಚುನಾವಣೆ ಸಹೋದರಿ ಗೀತಾ ಅವರನ್ನು ಗೆಲ್ಲಿಸಬೇಕಿದೆ. ಕಾರಣ, ಬಹುಕಾಲ ಆಡಳಿತದ ಚುಕ್ಕಾಣಿ ಹಿಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಿಲ್ಲ. ಆದ್ದರಿಂದ, ಇಲ್ಲಿ ಗೀತಾ ಶಿವರಾಜಕುಮಾರ ಪರ ಮತಯಾಚಿಸಲು ನೈತಿಕ ಹಕ್ಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತವಾಗಿವೆ. ಆ ಕಾರ್ಯಗಳಿಗೆ ಜೀವ ತುಂಬಲು ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕಿದೆ ಎಂದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಎಸ್‌ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ್ ಮಾತನಾಡಿ, ಈ ಭಾಗದಲ್ಲಿ ಅನೇಕ ವರ್ಷದಿಂದ ತಾಲ್ಲೂಕು ಪಂಚಾಯಿತಿಯ ಅಧಿಕಾರ ಹಿಡಿಯಲು ಕೂಡ ಮರಾಠಿ ಸಮುದಾಯಕ್ಕೆ ಆಗಿಲ್ಲ. ಹಿಂದಿನಿಂದಲೂ ಸಮುದಾಯದ ಕುರಿತ ತಾರತಮ್ಯ ನಡೆಯುತ್ತಲೇ ಇದೆ. ಇದಕ್ಕೆ ಉತ್ತರವಾಗಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆರಿಸಬೇಕಿದೆ‌. ಸಮುದಾಯದ ಸಮಸ್ಯೆಗಳ ಆಹ್ವಾಲುಗಳನ್ನು ಸರ್ಕಾರದ ಮುಂದೆ ಇಡಲು ಗೀತಾ  ಶಿವರಾಜಕುಮಾರ್ ಅವರು ವೇದಿಕೆ ಆಗಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಉಡುಪಿ ಎಸ್‌ಟಿ ಘಟಕದ ಅಧ್ಯಕ್ಷ ಜೈರಾಮ ನಾಯ್ಕ್, ಶೇಷು ನಾಯ್ಕ್, ರಾಜು ಪೂಜಾರಿ, ಅನಿತಾ ಪುಟ್ಟನಾಯ್ಕ್, ಗೌರಿ ದೇವಾಡಿಗ, ಬೋಜ ನಾಯ್ಕ್, ಸಂತೋಷ ನಾಯ್ಕ್ ದುಡ್ಡಿನಗೋಳಿ, ಚಂದ್ರ ನಾಯ್ಕ್ ಮುತ್ತಣಗಿ, ನಾರಾಯಣ ನಾಯ್ಕ ಬಾಚುಕೂಳಿ ಸೇರಿ ಗಣ್ಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...