ಶಿವಮೊಗ್ಗ | ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲೇ ಪರಿಸರ ಪ್ರಜ್ಞೆ ಮೂಡಿಸಬೇಕು: ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್

Date:

ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡುವುದಾದರೆ ಪರಿಸರ ಉಳಿಸಬೇಕು. ಹಾಗಾಗಿ ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ಪರಿಸರ ಪ್ರಜ್ಞೆ ಮೂಡಿಸಬೇಕು ಎಂದು ರೋಟರಿ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಹಮ್ಮಿಲಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಮಾದರಿಯ ಗಿಡಗಳು ಹಾಗೂ ಹಣ್ಣಿನ ಗಿಡಗಳನ್ನು ನೀಡಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್

“ಉತ್ತಮ ಪರಿಸರವನ್ನು ಉಳಿಸಿಕೊಳ್ಳಲು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಅದರ ಬಗ್ಗೆ ಕಾಳಜಿಯನ್ನು ಹೊಂದಿರಬೇಕು. ಮುಂದಿನ ಪೀಳಿಗೆಗೆ ಮತ್ತು ನಮ್ಮ ರಕ್ಷಣೆಗೆ ಪರಿಸರ ಅಗತ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಲಯ ತರಬೇತಿದಾರ ಕೆಪಿಎಸ್ ಸ್ವಾಮಿ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಪರಿಸರವು ಹೇಗೆ ಕುಲಷಿತವಾಗುತ್ತಿದೆ ಎಂದು ನಾವು ತಿಳಿಯಲ್ಪಟ್ಟಿದ್ದೇವೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರದ ಅವಘಡಗಳು ಸಂಭವಿಸದಂತೆ ಮಣ್ಣಿನ ರಕ್ಷಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು” ಎಂದು ತಿಳಿಸಿದರು.

ರೋಟರಿ ಕ್ಲಬ್‌ 1

ಪೂರ್ವಾಧ್ಯಕ್ಷ ನಾಗರಾಜ್ ಮಾತನಾಡಿ, “ಶಾಲಾ ಮಕ್ಕಳು ಒಂದು ಗಿಡದ ಜವಾಬ್ದಾರಿಯನ್ನು ತೆಗೆದುಕೊಂಡು ಸಂರಕ್ಷಿಸಿದರೆ ಅವರಿಗೆ ಮುಂದಿನ ಆರು ತಿಂಗಳಲ್ಲಿ ಬಹುಮಾನ ನೀಡುತ್ತೇವೆ” ಎಂದು ಮಕ್ಕಳಿಗೆ ಉತ್ತೇಜನ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ನನ್ನನ್ನು ಕೊಲ್ಲಲು ಮುಸ್ಲಿಂ ಯುವಕರಿಗೆ ಸುಪಾರಿ ನೀಡಲಾಗಿದೆ: ಅಂಜುಮನ್ ಮುಖಂಡ ಇಸ್ಮಾಯೀಲ್ ತಮಟಗಾರ

ನಿಕಟಪೂರ್ವ ಅಧ್ಯಕ್ಷ ಭರತ್ ಕುಮಾರ್, ಅಂಬಳಿಕೆ ಗಿರೀಶ್, ಮನೋಜ್ ಕುಮಾರ್, ಪಿ ವಿ ಭರತ್ ಕುಮಾರ್, ವಾಣಿ ಗಣೇ, ಇನ್ನರ್‌ವೀಲ್ ಕ್ಲಬ್ ತೀರ್ಥಹಳ್ಳಿ ರೊ. ನಯನ ಜಯಪ್ರಕಾಶ್ ಶೆಟ್ಟಿ, ಜ್ಯೋತಿ, ಪ್ರತಿಮಾ, ವಿಶ್ವನಾಥ ಶೆಟ್ಟಿ ಸೇರಿದಂತೆ ಶಿಕ್ಷಕರು ಊರಿನ ಗ್ರಾಮಸ್ಥರು ಇದ್ದರು.

ವರದಿ: ರಶ್ಮಿ ಶ್ರೀಕಾಂತ್ ನಾಯಕ್, ತೀರ್ಥಹಳ್ಳಿ

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...