ಶಿವಮೊಗ್ಗ | ಅಕ್ಷರ ದಾಸೋಹ ನೌಕರರಿಗೆ ಇಡಿಗಂಟು ಜಾರಿಗೆ ಸರ್ಕಾರ ಆದೇಶ; ಐತಿಹಾಸಿಕ ಜಯ ಎಂದ ಸಿಐಟಿಯು

Date:

ಸಿಐಟಿಯು ನೇತೃತ್ವದ ಅಕ್ಷರದಾಸೋಹ ನೌಕರರ ಸಂಘದ ಸಂಘಟಿತ ಹೋರಾಟಕ್ಕೆ ಮಣಿದು ಸರ್ಕಾರವು ಅಕ್ಷರ ದಾಸೋಹ ನೌಕರರಿಗೆ ಇಡಿಗಂಟು ಜಾರಿಗೊಳಿಸುವುದಾಗಿ ಆದೇಶ ಹೊರಡಿಸಿರುವುದು ಐತಿಹಾಸಿಕ ಜಯ ಎಂದು ಸಿಐಟಿಯು ಶಿವಮೊಗ್ಗ ಜಿಲ್ಲಾ ಘಟಕದ ಮುಖಂಡರು ತಿಳಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮಾತನಾಡಿದ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಸಂಘ(ಸಿಐಟಿಯು)ದ ಶಿವಮೊಗ್ಗ ಜಿಲ್ಲಾ ಬಿಸಿಯೂಟ ಸಂಘದ ಅಧ್ಯಕ್ಷೆ ಹನುಮಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸಿದರು.

“ಮಧ್ಯಾಹ್ನದ ಬಿಸಿಯೂಟ ಯೋಜನೆಯು ನಮ್ಮ ರಾಜ್ಯದಲ್ಲಿ 2001-02 ರಲ್ಲಿ ಪ್ರಾರಂಭವಾಯಿತು. ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಾತಿ ತಡೆಗಟ್ಟಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಅಡುಗೆ ನೌಕರರನ್ನು ನಿವೃತ್ತಿ ಹೆಸರಿನಲ್ಲಿ ರಾಜ್ಯದಲ್ಲಿ ಕಳೆದ 2022 ರಿಂದ ಸುಮಾರು 11,500 ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ಕೈ ಬಿಡಲಾಗಿದೆ. ಕಳೆದ 23 ವರ್ಷಗಳಿಂದಲೂ ಸೇವೆ ಸಲ್ಲಿಸಿದ ಈ ನೌಕರರ ಅಮಾನೀಯವಾಗಿ ಬಿಡುಗಡೆ ಮಾಡಿದ ಕ್ರಮ ಖಂಡಿಸಿ ನಿರಂತರ ಹೋರಾಟ ನಡೆಸುತ್ತಲೇ ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 3-4 ವರ್ಷಗಳಿಂದಲೂ ವಯಸ್ಸಿನ ಆಧಾರದಲ್ಲಿ ನಿವೃತ್ತಿ ಸೌಲಭ್ಯ ಕೊಡಬೇಕೆಂದು ಮತ್ತು ನಿವೃತ್ತ ಅಡುಗೆಯವರಿಗೆ ಒಂದು ಲಕ್ಷ ರೂಪಾಯಿಗಳ ಇಡಿಗಂಟು ನೀಡಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಹಲವಾರು ಬಾರಿ ಹೋರಾಟ ನಡೆಸಿದಾಗ ಮಾತುಕತೆ ಕೂಡ ನಡೆಸಿದ್ದರು. ಇದರ ಬಗ್ಗೆ ಸರ್ಕಾರವಾಗಲಿ, ಶಿಕ್ಷಣ ಇಲಾಖೆಯಾಗಲಿ ಹೆಚ್ಚಿನ ಮುತುವರ್ಜಿ ವಹಿಸಿರಲಿಲ್ಲ ಎಂದು ತಿಳಿಸಿದರು.

ಕಳೆದ ಜುಲೈ 15ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಇಡಿಗಂಟು ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿತ್ತು. ನಮ್ಮ ಈ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರವು 60 ವರ್ಷ ಪೂರ್ಣಗೊಂಡ ನಂತರ ಕರ್ತವ್ಯದಿಂದ ಬಿಡುಗಡೆಗೊಳ್ಳುವ ಅಡುಗೆ ನೌಕರರಿಗೆ ರೂ. 40,000 ಮತ್ತು 5 ವರ್ಷ ಮೇಲ್ಪಟ್ಟು ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಂಡ ನಂತರ ಕರ್ತವ್ಯದಿಂದ ಬಿಡುಗಡೆಗೊಳ್ಳುವ ಅಡುಗೆ ನೌಕರರಿಗೆ ರೂ.30,000 ಇಡಿಗಂಟು ನೀಡಲು ಒಪ್ಪಿಗೆ ನೀಡಿದೆ. ಇದು ಸಂಘಟಿತ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯ” ಎಂದು ಹನುಮಮ್ಮ ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ”ಎಕನಾಮಿಕ್ ಸರ್ವೇ”: ಗಾಳಿ ಬಂದತ್ತ ತೂರಿಕೊಳ್ಳುವ ಪ್ಲಾನ್ ಇರಬಹುದೇ?

ಅನಿರ್ದಿಷ್ಟಾವಧಿ ಹೋರಾಟದ ವೇಳೆ ರಾಜ್ಯಾದ್ಯಂತ ಸುಮಾರು ಐದುಸಾವಿರಕ್ಕೂ ಹೆಚ್ಚು ಅಡುಗೆ ಸಿಬ್ಬಂದಿಗಳು ಅಡುಗೆ ಬಂದ್ ಮಾಡಿ ಭಾಗವಹಿಸಿದ್ದರು. ಹೋರಾಟದ ನೇತೃತ್ವವನ್ನು ರಾಜ್ಯ ಗೌರವಾಧ್ಯಕ್ಷರಾದ ಎಸ್. ವರಲಕ್ಷ್ಮಿ, ಅಧ್ಯಕ್ಷರಾದ ಲಕ್ಷ್ಮಿದೇವಿ, ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ, ಖಜಾಂಚಿ ಮಹಾದೇವಮ್ಮ ಸಿದ್ದಮ್ಮ, ಗಂಗಾ ನಾಯ್ಕ ಮಹೇಶ ಹಿರೇಮಠ, ಅರವಿಂದ, ಇನ್ನಿತರು ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...