ಶಿವಮೊಗ್ಗ | ದಲಿತ ಮಹಿಳೆಗೆ ಅವಮಾನ: ಬಿಜೆಪಿ ಜಿಲ್ಲಾಧ್ಯಕ್ಷರ ರಾಜೀನಾಮೆಗೆ ಕಾಂಗ್ರೆಸ್ ಮಹಿಳಾ ಘಟಕ ಒತ್ತಾಯ

Date:

ಸಾಗರದ ನಗರಸಭೆಯಲ್ಲಿ ದಲಿತ ಮಹಿಳೆಯನ್ನು ‘ಅಪರಾಧಿ’ ಎಂದು ಅವಮಾನ ಮಾಡಿರುವ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ‌ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಶಿವಮೊಗ್ಗ ಕಾಂಗ್ರೆಸ್ ಮಹಿಳಾ ಘಟಕ ಎಚ್ಚರಿಕೆ ನೀಡಿದೆ.

ಅಪಮಾನ ಮಾಡಲಾಗಿರುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಪದಾಧಿಕಾರಿಗಳು ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ ಮಾತನಾಡಿ, ಸಾಗರದ ನಗರ ಸಭೆ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಕಳೆದ ಬಾರಿಯೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನೀಡಲಾಗಿತ್ತು. ಈ ಬಾರಿಯೂ ಮೀಸಲಾತಿ ಸಾಮಾನ್ಯರಿಗೆ ಪ್ರಕಟಿಸಿದ ಕಾರಣ ಮೀಸಲಾತಿ ಸರಿಯಿಲ್ಲವೆಂದು ಆರೋಪಿಸಿ ನ್ಯಾಯಾಲಯಕ್ಕೆ ಹೋಗಲಾಗಿತ್ತು. ಬಿಸಿಎಂ, ಬಿಸಿಎಂ ಬಿ, ಎಸ್ ಎಸ್ಟಿ ಗೆ ಮೀಸಲಾತಿ ಇದುವರೆಗೂ ಪ್ರಕಟವಾಗದ ಕಾರಣ ಎಸ್‌ಟಿ ಮಹಿಳಾ ಸದಸ್ಯೆ ನ್ಯಾಯಾಲಯಕ್ಕೆ ಹೋಗಿ ಮೀಸಲಾತಿಯನ್ನ ಪ್ರಶ್ನಿಸಿದ್ದರು. ಅ.10 ರಂದು ನಡೆದ ಸಾಗರದ ನಗರ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಭಾಗಿಯಾಗಿದ್ದರು. ಲಲಿತಮ್ಮರಿಗೆ ನಿಕೃಷ್ಟವಾಗಿ ಮೇಘರಾಜ್ ಮಾತನಾಡಿದ್ದಾರೆ. ದಲಿತ ಮಹಿಳೆಗೆ ಅವಾಚ್ಯವಾಗಿ ಮಾತನಾಡಿ ಸಭೆಯಿಂದ ಹೊರಹೋಗಿ ಎಂದಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿ.ಡಿ ಮೇಘರಾಜ್ ಕಾನೂನಿನ ಜಡ್ಜಾ? ಸಮಾನತೆಯಲ್ಲಿ ಲಲಿತಮ್ಮ ನ್ಯಾಯಾಲಯಕ್ಕೆ ಹೋದರೆ ನೀವು ಅವಮಾನಿಸುತ್ತೀರಾ ಎಂದು ಸವಾಲು ಎಸೆದ ಅವರು,. ಮಹಿಳೆಯರಿಗೆ ಗೌರವ ಕೊಡುವ ಸಂಸ್ಕೃತಿ ಇಲ್ಲದ ಬಿಜೆಪಿ ನಾಯಕರು, ಯಾವ ಮಹಿಳಾ ಸಬಲೀಕರಣವನ್ನು ಎತ್ತಿ ಹಿಡಿಯುತ್ತಾರೆ ಎಂದು ದೂರಿದರು.

ಲಲಿತಮ್ಮನಿಗೆ ಮಾಡಿರುವ ಅಪಮಾನಕ್ಕೆ ಮೇಘರಾಜ್ ಕ್ಷಮೆ ಕೇಳಬೇಕು. ಮೂರು ಬಾರಿ ಸಾಗರದಲ್ಲಿ ಆಯ್ಕೆಯಾಗಿ ಒಮ್ಮೆ ಅಧ್ಯಕ್ಷರಾಗಿದ್ದಾರೆ. ಮೂರು ಬಾರಿ ಸದಸ್ಯರಾದ ಲಲಿತಮ್ಮರಿಗೆ ಅವಮಾನಿಸಿದ ಮೇಘರಾಜ್ ಜಿಲ್ಲಾ ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಕ್ಷಮೆಯಾಚಿಸದೇ ಇದ್ದರೆ, ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...