ಶಿವಮೊಗ್ಗ | ಸರ್ಕಾರದ ನಿಯಮ ಉಲ್ಲಂಘಿಸಿ ನಕಲಿ ದಾಖಲೆ ಸೃಷ್ಟಿ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಶಿಕಾರಿಪುರ ತಾಲೂಕು ಉಪನೋಂದಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ದಾಖಲಾತಿಗಳನ್ನು ಪಡೆಯದೇ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಇನಾಂ ಭೂಮಿಯನ್ನು ಮೂರನೇ ವ್ಯಕ್ತಿಗಳಿಗೆ ನೋಂದಣಿ ಮಾಡಿರುವುದುನ್ನು ಖಂಡಿಸಿ  ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಚಿವರಿಗೆ ಮನವಿ ಸಲ್ಲಿಸಿದ ದಸಂಸ ಕಾರ್ಯಕರ್ತರು‌, ನಕಲಿ ದಾಖಲೆ ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

“ಶಿಕಾರಿಪುರ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಸರ್ವೆ ನಂ. 134ರ 4-6 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ಸದರಿ ಜಮೀನು ಗೌಡ ಇನಾಂ ಭೂಮಿಯಾಗಿದ್ದು, ಸದರಿ ಭೂಮಿಯನ್ನು ಗ್ರಾಮದ ಮೂರು ಕುಟುಂಬದವರು ಉಳಿಮೆ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೌಡ ಇನಾಂ ಭೂಮಿಯ ಪಹಣಿ ಕಾಲಂ 9ರಲ್ಲಿ ಗೌರಮ್ಮ ಕೋಂ ಕೊಟ್ರಪ್ಪ ಎಂದು ನಮೂದಾಗಿದ್ದು, ಸದರಿ ಗೌರಮ್ಮ ಸುಮಾರು 30 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಆದರೆ ಮಲ್ಲೇನಹಳ್ಳಿ ಗ್ರಾಮದ ಶಿವಪುತ್ರಪ್ಪ ಬಾರ್ಕಿ ಬಿನ್ ನಿಂಗಪ್ಪ ಹಾಗೂ ಶಿಕಾರಿಪುರದ ಉಪ ನೋಂದಣಾಧಿಕಾರಿ ದಿವ್ಯಶ್ರೀ ಒಗ್ಗೂಡಿ ತಾಳಗುಂದ ಹೋಬಳಿ ಚಿಕ್ಕಮಾಗಡಿ ಗ್ರಾಮದ ಗೌರಮ್ಮ ಕೋಂ ಕೊಟ್ರಪ್ಪ ಯಾನೆ ಕೊಟ್ರಪ್ಪ ಗೌಡ ಎಂಬ ನಕಲು ವ್ಯಕ್ತಿಯನ್ನು ಸೃಷ್ಟಿಸಿ ಸದರಿ ಜಮೀನಿಗೆ ಸಂಬಂಧಿಸಿದ ಎನ್‌ಟಿಸಿ, ಆರ್‌ಆರ್‌-5&6 ಮತ್ತು ವಂಶವೃಕ್ಷ ದಾಖಲೆಗಳನ್ನು ಪಡೆಯದೇ ಸದರಿ ಜಮೀನನ್ನು ಕಬಳಿಸುವ ಉದ್ದೇಶದಿಂದ ಎಸ್‌ಆರ್ ನಂ. ಎಸ್‌ಪಿ ಬುಕ್ ನಂ. 01-1928/2022-23ರ 2023ರ ಜುಲೈ 12ರಂದು ಕ್ರಯಪತ್ರ ನೋಂದಣಿ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ” ಎಂದು ಆರೋಪಿಸಿದರು.

“ನೋಂದಣಿ ನಂತರ ಶಿಕಾರಿಪುರ ತಹಶೀಲ್ದಾರ್ ಮಲ್ಲೇಶ ಪೂಜಾರ್, ರಾಜಸ್ವ ನಿರೀಕ್ಷಕ ಮೇಘರಾಜ್, ಗ್ರಾಮ ಆಡಳಿತಾಧಿಕಾರಿ ನಾಗರಾಜ ಹಾಗೂ ಶ್ರೀಧರ, ಗ್ರಾಮ ಸಹಾಯಕ ನಾಗರಾಜ ಮತ್ತು ಬಸವರಾಜ ಸೇರಿದಂತೆ ಇತರರು ಹಣದ ಆಮಿಷಕ್ಕೆ ಒಳಗಾಗಿ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಸರ್ಕಾರದ ಗೌಡ ಇನಾಂ ಭೂಮಿಯನ್ನು ಕಾನೂನಿಗೆ ವಿರುದ್ಧವಾಗಿ ಉಳುಮೆ ಮಾಡುತ್ತಿರುವ ರೈತರನ್ನು ಹೊರತುಪಡಿಸಿ ಶಿವಪುತ್ರಪ್ಪ ಬಿನ್ ನಿಂಗಪ್ಪ ಎಂಬುವರ ಹೆಸರಿಗೆ ಖಾತೆ ಪಹಣಿಯನ್ನು ದಾಖಲು ಮಾಡಿದ್ದಾರೆ. ಆದ್ದರಿಂದ ತಾವುಗಳು ಈ ದೂರನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಿ ಸದರಿ ಸರ್ವೇ ನಂಬರಿನ ಎಮ್‌ಆರ್ ನಂ ಹೆಚ್ 02/2023-24 ಮತ್ತು ಎಸ್‌ಆರ್ ನಂ. ಎಸ್‌ಪಿ ಬುಕ್ ನಂ. 01-1928/2022-23ರ ಜುಲೈ 12ರಂದು ನೋಂದಣಿಯಾದ ಕ್ರಯಪತ್ರವನ್ನು ರದ್ದುಪಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಾಡಹಗಲೇ ದರೋಡೆ; ಮನೆಯಲ್ಲಿದ್ದ 45 ಗ್ರಾಂ ಚಿನ್ನ, ನಗದು ಕಳ್ಳತನ

ರಾಜ್ಯ ವಿಭಾಗೀಯ ಸಂಚಾಲಕ ಜಿ ಗುರುರಾಜ್ ಸೊರಬ ಸೇರಿದಂತೆ ಬಹುತೇಕ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...